ತುಳುವರು ಎಲ್ಲಿದ್ದರೂ ಸಂಘಟಣೆಗೆ ಮಹತ್ವ ನೀಡುವವರು


Team Udayavani, Sep 20, 2019, 6:01 PM IST

MUMBAI-TDY-2

ಮುಂಬಯಿ, ಸೆ. 19: ಜಾತಿ, ಧರ್ಮವನ್ನು ಮೀರಿ ಭಾಷೆ, ಸಂಸ್ಕೃತಿ, ಸಂಪ್ರದಾಯವನ್ನು ಪ್ರೀತಿಸುವ ಗುಣ ಇರುವ ತುಳುವರು ಎಲ್ಲಿದ್ದರೂ ಸಂಘಟಣೆಗೆ ಮಹತ್ವ ನೀಡುವವರು. ಕಳೆದ 9 ವರ್ಷಗಳಿಂದ ವೈವಿಧ್ಯ ಕಾರ್ಯಕ್ರಮಗಳ ಮೂಲಕ ಉತ್ತರ ಮುಂಬಯಿ ಪರಿಸರದಲ್ಲಿ ಪ್ರಸಿದ್ಧಿ ಪಡೆದ ತುಳು ಸಂಘ ಬೊರಿವಲಿ ಇದೀಗ ಪರಿಸರದಲ್ಲಿ ಸ್ವಂತ ಕಚೇರಿಯನ್ನು ಹೊಂದುವ ಮೂಲಕ 9 ವರ್ಷಗಳ ಕನಸ್ಸೊಂದು ನನಸಾಗಿ ಸಂಘ ತನ್ನ ಅಸ್ತಿತ್ವವನ್ನು ದ್ವಿಗುಣ ಗೊಳಿಸಿದೆ ಎಂದು ತುಳು ಸಂಘ ಬೊರಿವಲಿಯ ಗೌರವಾಧ್ಯಕ್ಷರಾದ ಡಾ| ವಿರಾರ್‌ ಶಂಕರ್‌ ಶೆಟ್ಟಿ ಆಶಯ ವ್ಯಕ್ತಪಡಿಸಿದರು.

ಅವರು ಸೆ. 14ರಂದು ಬೊರಿವಲಿ ಪಶ್ಚಿಮದ ಯೋಗಿ ನಗರದ ಸೊಸೈಟಿ ಅಡಿಟೋರಿಯಂ ಹಾಲ್ನಲ್ಲಿ ಜರಗಿದ ಬೊರಿವಲಿ ತುಳು ಸಂಘದ 9ನೇ ವಾರ್ಷಿಕ ಮಹಾಸಭೆಯಲ್ಲಿ ಉಪಸ್ಥಿತರಿದ್ದು ಸದಸ್ಯರನ್ನು ಉದ್ದೇಶಿಸಿ ಮಾತನಾಡಿ, ಸಂಘದ ಚರ್ಚೆ, ಪ್ರಸ್ತಾಪನೆಗಳಲ್ಲಿ ಮನಸ್ತಾಪ ಮೂಡಿದರೂ ಸಮರ್ಪಣಾ ಮನೋಭಾವದಿಂದ ಸರ್ವತೋಮುಖ ಬೆಳವಣಿಗೆಯಲ್ಲಿ ಸದಾ ಸಂಘಟಿರಾಗಿ ದುಡಿಯುವುದು ತುಳುವರ ರಕ್ತಗತ ಗುಣವಾಗಿದೆ. ಯುವಶಕ್ತಿ, ಮಕ್ಕಳು ಹೆಚ್ಚಿನ ಉತ್ಸುಕತೆಯಿಂದ ಮುಂದೆ ಬಂದು ಈ ತುಳು ಸಂಘದಲ್ಲಿ ತಮ್ಮ ವೇದಿಕೆ ನಿರ್ಮಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ರಾದ ವಾಸು ಕೆ. ಪುತ್ರನ್‌ ಅವರು ಮಾತನಾಡಿ, ಸಂಘವೊಂದು 9 ವರ್ಷ ಪೂರ್ತಿಗೊಳಿಸುವ ಮೂಲಕ ಶಿಶುವೊಂದರ ಜನನವಾದಂತಾಗಿದೆ. ಪರಿಸರದಲ್ಲಿ ತುಳು ಭಾಷೆ, ಸಂಸ್ಕೃತಿ ಯನ್ನು ಗಟ್ಟಿಗೊಳಿಸುವ ಮೂಲಕ ತುಳು ಸಂಘವು ವೈಶಿಷ್ಟ್ಯಪೂರ್ಣ ಸಂಸ್ಥೆಯಾಗಿ ಬೆಳೆದಿದೆ. ಸಂಸ್ಥೆಯನ್ನು ಮುಂದಿನ ಜನಾಂಗಕ್ಕೆ ಹಸ್ತಾಂತರಿಸುವ ಕೆಲಸ ಯುವ ಜನಾಂಗ, ಮಕ್ಕಳಿಂದ ಆಗಬೇಕಾಗಿದೆ. ಆ ದೃಷ್ಟಿಯಿಂದ ಮಕ್ಕಳು, ಯುವಕರು ಸಂಘದ ಸದಸ್ಯರಾಗಿ ವೈವಿಧ್ಯ ವೇದಿಕೆಯಲ್ಲಿ

ಭಾಗವಹಿಸುವಂತವರಾಗಬೇಕು. ವೈದ್ಯಕೀಯವಾಗಿ ಸಹಾಯ ಮಾಡುವ ಸಂಘದ ದೂರದೃಷ್ಟಿ ಯೋಜನೆಗೆ ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದ ಅವರು ಸೆ. 29ರಂದು ಉದ್ಘಾಟನಾಗೊಳ್ಳಲಿರುವ ತುಳು ಸಂಘ ಬೊರಿವಲಿ ಇದರ ನೂತನ ಕಚೇರಿಯ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು, ತುಳು-ಕನ್ನಡ ಬಾಂಧವರು ಭಾಗವಹಿಸಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಸ್ಥಳೀಯ ಆರಾಧ್ಯ ದೇವತೆ ಮಹಿಷ ಮರ್ದಿನಿಯನ್ನು ಸ್ಮರಿಸಿ ಮಹಾಸಭೆಯು ಪ್ರಾರಂಭಗೊಂಡಿತು.

ಗೌರವ ಕಾರ್ಯದರ್ಶಿ ಕೃಷ್ಣರಾಜ್‌ ಸುವರ್ಣ ಪದಾಧಿಕಾರಿಗಳು, ಸದಸ್ಯರನ್ನು ಸ್ವಾಗತಿಸಿ, ಗತ ವರ್ಷದ ಮಹಾಸಭೆಯ ವರದಿಯನ್ನು ಓದಿದರು. ಗೌರವ ಕೋಶಾಧಿಕಾರಿ ಹರೀಶ್‌ ಮೈಂದನ್‌ ಸಭೆಯಲ್ಲಿ ಲೆಕ್ಕ ಪತ್ರ ಮಂಡಿಸಿದರು. ಸದಸ್ಯರ ಪರವಾಗಿ ಪೇಟೆಮನೆ ಪ್ರಕಾಶ್‌ ಶೆಟ್ಟಿ, ಜಯಕರ ಡಿ. ಪೂಜಾರಿ, ಹರೀಶ್‌ ಜಿ. ಪೂಜಾರಿ, ಟಿ. ಶ್ರೀನಿವಾಸ ಪುತ್ರನ್‌ ಸಂಘದ ಪ್ರಗತಿಯ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಕರುಣಾಕರ ಶೆಟ್ಟಿ, ಜತೆ ಕೋಶಾಧಿಕಾರಿ ಟಿ. ವಿ. ಪೂಜಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸವಿತಾ ಸಿ. ಶೆಟ್ಟಿ, ಕಾರ್ಯದರ್ಶಿ ತಿಲೋತ್ತಮ ವೈದ್ಯ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ದಿವಾಕರ ಕರ್ಕೇರ ಮಹಾಸಭೆಯ ಕೊನೆಯಲ್ಲಿ ವಂದಿಸಿದರು.

ಚಿತ್ರ-ವರದಿ : ರಮೇಶ್‌ ಉದ್ಯಾವರ್‌

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.