ತುಳುವರನ್ನು ಒಗ್ಗೂಡಿಸುವ ಕಾರ್ಯಕ್ರಮ ಅಭಿನಂದನೀಯ: ಪ್ರವೀಣ್‌ ಶೆಟ್ಟಿ


Team Udayavani, Oct 27, 2019, 4:12 PM IST

mumbai-tdy-1

ಮುಂಬಯಿ, ಅ. 26: ಪಾಲ್ಘರ್‌ ಪರಿಸರದ ನಮ್ಮವರ ಬಗ್ಗೆ ಇರುವ ಪ್ರೀತಿ ಇಂದು ಇಲ್ಲಿಗೆ ನನ್ನನ್ನು ಕರೆ ತಂದಿದೆ. ಪರವೂರಿನಲ್ಲಿಯ ತುಳುವರನ್ನು ಒಂದೆಡೆ ಒಗ್ಗೂಡಿಸುವ ಇಂತಹ ಕಾರ್ಯಕ್ರಮಗಳು ಅಭಿನಂದನೀಯ. ಮೀರಾ ಡಹಾಣೂ ಬಂಟ್ಸ್‌ನ ಭವಿಷ್ಯದ ಯಾವತ್ತೂ ಕಾರ್ಯಕ್ರಮಗಳಿಗೆ ನನ್ನ ಮನಃ ಪೂರ್ವಕ ಸಹಕಾರ ಇರುತ್ತದೆ ಎಂದು ವಿರಾರ್‌-ವಸಾಯಿ ಮಹಾನಗರ ಪಾಲಿಕೆಯ ಮಹಾಪೌರ ಪ್ರವೀಣ್‌ ಶೆಟ್ಟಿ ನುಡಿದರು.

ಮೀರಾ-ಡಹಾಣೂ ಬಂಟ್ಸ್‌ನ ಬೊಯಿಸರ್‌- ಪಾಲ್ಘರ್‌ ವಿಭಾಗದ ವತಿಯಿಂದ ಆಯೋಜಿ ಸಲಾಗಿದ್ದ ಅರಸಿನ ಕುಂಕುಮ ಮತ್ತು ಸ್ನೇಹ ಸಮ್ಮಿಲನದ ಸಮಾರಂಭದಲ್ಲಿ ವಿಶೇಷ ಅತಿಥಿ ಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಸಂಸ್ಥೆಯ ವತಿಯಿಂದ ಇನ್ನಷ್ಟು ಸಮಾಜಪರ ಕಾರ್ಯಕ್ರಮಗಳು ನಡೆಯುತ್ತಿರಲಿ ಎಂದು ಹಾರೈಸಿದರು.

ಇನ್ನೋರ್ವ ಅತಿಥಿಯಾಗಿ ಆಗಮಿಸಿದ ಮೀರಾ-ಡಹಾಣೂ ಬಂಟ್ಸ್‌ನ ಸ್ಥಾಪಕಾಧ್ಯಕ್ಷ, ವಸಾಯಿ ತಾಲೂಕು ಹೊಟೇಲ್‌ ಅಸೋಸಿ ಯೇಶನ್‌ ಅಧ್ಯಕ್ಷ ಪ್ರಕಾಶ್‌ ಹೆಗ್ಡೆ ಇವರು ಮಾತನಾಡಿ, ಬೊಯಿಸರ್‌-ಪಾಲ್ಘರ್‌ ವಿಭಾಗದ ಸಂಘಟಕರಿಂದ ಜರಗಿದ ಈ ಕಾರ್ಯಕ್ರಮ ಅಭಿನಂದನೀಯ. ಇನ್ನು ಮುಂದೆಯೂ ವಿವಿಧ ರೀತಿಯ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿರಲಿ. ಸಂಘಟನಾತ್ಮಕ ಚಟುವಟಿಕೆ ಗಳು ಕಾರ್ಯರೂಪಕ್ಕೆ ಬರುವಾಗ ವಿಭಿನ್ನ ಅಭಿಪ್ರಾಯಗಳು ಉಂಟಾಗುವುದು ಸಹಜ. ಇದನ್ನು ಪರಸ್ಪರ ಸಹಕಾರದಿಂದ ನಿವಾರಿಸಿ ಕೊಂಡು ಮುನ್ನಡೆಯಬೇಕು ಎಂದರು.

ಆರಂಭದಲ್ಲಿ ಮೀರಾ-ಡಹಾಣೂ ಬಂಟ್ಸ್‌ನ ಮಹಿಳಾ ವಿಭಾಗದ ಅಧ್ಯಕ್ಷೆ ಶುಭಾ ಸತೀಶ್‌ ಶೆಟ್ಟಿ ಹಾಗೂ ಬೊಯಿಸರ್‌ ಪಾಲರ್‌ ವಿಭಾಗದ ಮಹಿಳಾ ವಿಭಾಗದ ಅಧ್ಯಕ್ಷೆ ಪ್ರೇಮಾ ಭುಜಂಗ ಶೆಟ್ಟಿ, ಉಪಾಧ್ಯಕ್ಷೆ ಪ್ರತಿಭಾ ಶೆಟ್ಟಿ, ಮಹಿಳಾ ವಿಭಾಗದ ಮಾಜಿ ಅಧ್ಯಕ್ಷೆ ವಿಶಾಲಾ ಆರ್‌. ಶೆಟ್ಟಿ ಇವರ ನೇತೃತ್ವದಲ್ಲಿ ಅರಸಿನ ಕುಂಕುಮ ಕಾರ್ಯಕ್ರಮ ಜರಗಿತು. ಮೀರಾರೋಡ್‌ ಪರಿಸರದ ಯುವ ಗಾಯಕ ವಿಜಯ ಶೆಟ್ಟಿ ಮೂಡುಬೆಳ್ಳೆ ಇವರಿಂದ ಸುಗಮ ಸಂಗೀತ ಮತ್ತು ರಸಮಂಜರಿ ಕಾರ್ಯಕ್ರಮ ನಡೆಯಿತು.

ಅತಿಥಿ-ಗಣ್ಯರು ದೀಪ ಪ್ರಜ್ವಲಿಸಿ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು. ಯಶೋದಾ ಬಿ. ಶೆಟ್ಟಿ ಅವರು ಪ್ರಾರ್ಥನೆಗೈದರು. ಸ್ಥಳೀಯ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ನೃತ್ಯ ವೈವಿಧ್ಯ ನಡೆಯಿತು. ಮೀರಾ ಡಹಾಣೂ ಬಂಟ್ಸ್‌ನ ಉಪಾಧ್ಯಕ್ಷ ಸಂಪತ್‌ ಶೆಟ್ಟಿ ಪಂಜದಗುತ್ತು ಇವರು ಪ್ರಾಸ್ತಾವಿಕ ಮಾತುಗಳನ್ನಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಬಂಟರ ಹಿರಿಮೆಯನ್ನು ವಿವರಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಿ. ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮೀರಾ-ಡಹಾಣೂ ಬಂಟ್ಸ್‌ನ ಮಾಜಿ ಅಧ್ಯಕ್ಷ ಕೆ. ಭುಜಂಗ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಮಾತ ನಾಡಿ, ಯಾವ ಒಂದು ಸಂಸ್ಥೆಯ ಕಾರ್ಯ ಚಟುವಟಿಕೆಗಳು ನಿರಂತರವಾಗಿ ಬೆಳೆಯುವಲ್ಲಿ ಕಾರ್ಯಕರ್ತರ ಮನಃಪೂರ್ವಕ ಭಾಗವಹಿಸುವಿಕೆ ಅತ್ಯಗತ್ಯ. ಸದಸ್ಯರ ಸ್ಪಂದನೆ ಇದ್ದಲ್ಲಿ ಸಂಸ್ಥೆ ತಾನಾಗಿ ಬೆಳೆಯುತ್ತದೆ. ಪಾಲ್ಘರ್‌ ಜಿಲ್ಲೆ ಹಿಂದುಳಿದ ವರ್ಗಗಳ ಕ್ಷೇತ್ರವೆನಿಸಿದರೂ ಇದು ಬೆಳವಣಿಗೆ ಹೊಂದಿ ಮಹಾರಾಷ್ಟ್ರದಲ್ಲೇ ನಂಬರ್‌ವನ್‌ ಸ್ಥಾನ ಪಡೆಯಲಿದೆ.

ಮೀರಾ-ಡಹಾಣೂ ಬಂಟ್ಸ್‌ನ ಪ್ರತೀ ವಿಭಾಗದಲ್ಲಿನ ಊರುಗಳಲ್ಲಿ ಈ ರೀತಿಯ ವಿಶಿಷ್ಟವಾದ ತುಳುಭಾಷಾ ಕಾರ್ಯಕ್ರಮಗಳು ಆಗುತ್ತಿರಬೇಕು. ಇದರಿಂದ ಸದಸ್ಯರ ಉತ್ಸಾಹಕ್ಕೆ ಪುನಶ್ಚೇತನ ನೀಡಿದಂತಾಗುತ್ತದೆ. ತನ್ನ ಚಟುವಟಿಕೆಗಳಿಂದ ಸಂಸ್ಥೆಯು ಬಹುಕಾಲ ಮುಂದುವರಿಯಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಕಾರಣಾಂತರಗಳಿಂದ ಅನುಪ ಸ್ಥಿತರಾಗಿದ್ದ ಸಂಸ್ಥೆಯ ಗೌರವಾಧ್ಯಕ್ಷ ಡಾ| ವಿರಾರ್‌ ಶಂಕರ್‌ ಬಿ. ಶೆಟ್ಟಿ, ಸಂಸ್ಥೆಯ ಅಧ್ಯಕ್ಷ, ಮೀರಾ- ಭಾಯಂದರ್‌ ಮಹಾನಗರ ಪಾಲಿಕೆಯ ನಗರ ಸೇವಕ ಅರವಿಂದ ಶೆಟ್ಟಿ ಅವರ ಶುಭ ಸಂದೇಶ ಗಳನ್ನು ಸಭೆಯಲ್ಲಿ ಓದಲಾಯಿತು.

ವೇದಿಕೆ ಯಲ್ಲಿ ಅತಿಥಿಗಳಾಗಿ ಉದ್ಯಮಿ ಭಾಸ್ಕರ್‌ ಕೆ. ಶೆಟ್ಟಿ ಬೊಯಿಸರ್‌, ಪಾಲ್ಘರ್‌ ಉದ್ಯಮಿಗಳಾದ ಮಹಾಬಲ ಬಿ. ಶೆಟ್ಟಿ, ನಾರಾಯಣ ಬಿ. ಶೆಟ್ಟಿ, ರವೀಂದ್ರ ವಿ. ಶೆಟ್ಟಿ, ನಿರ್ವಾಣ ಬಿಲ್ಡರ್ನ ಮುಕೇಶ್‌ ಶೆಟ್ಟಿ, ಸಂಸ್ಥೆಯ ಮಹಿಳಾ ವಿಭಾಗಾಧ್ಯಕ್ಷೆ ಶುಭಾ ಸತೀಶ್‌ ಶೆಟ್ಟಿ, ರತಿ ಶಂಕರ್‌ ಬಿ. ಶೆಟ್ಟಿ ವಿರಾರ್‌, ಬೊಯಿಸರ್‌-ಪಾಲ್ಘರ್‌ ಮಹಿಳಾ ವಿಭಾಗದ ಅಧ್ಯಕ್ಷೆ ಪ್ರೇಮಾ ಭುಜಂಗ ಶೆಟ್ಟಿ, ಮಾಜಿ ಅಧ್ಯಕ್ಷೆ ವಿಶಾಲಾ ಆರ್‌. ಶೆಟ್ಟಿ, ಬೊಯಿಸರ್‌-ಪಾಲ್ಘರ್‌ ವಿಭಾಗದ ಅಧ್ಯಕ್ಷ ವಿಜಯ್‌ ಶೆಟ್ಟಿ ಅವರು ಉಪಸ್ಥಿತರಿದ್ದರು. ಪ್ರವೀಣ್‌ ಶೆಟ್ಟಿ ದಂಪತಿಯನ್ನು ಸಂಸ್ಥೆಯ ಬೊಯಿಸರ್‌-ಪಾಲ್ಘರ್‌ ವಿಭಾಗದ ಅಧ್ಯಕ್ಷ ವಿಜಯ ಶೆಟ್ಟಿ ಮತ್ತು ಇತರ ಪದಾಧಿಕಾರಿಗಳು, ಗಣ್ಯರ ಉಪಸ್ಥಿತಿಯಲ್ಲಿ ಸಮ್ಮಾನಿಸಲಾಯಿತು.

ಅತಿಥಿ-ಗಣ್ಯರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ ಮಕ್ಕಳನ್ನು ಗೌರವಿಸಲಾಯಿತು. ವಿಶೇಷ ಆಕರ್ಷಣೆಯಾಗಿ ವಸಾಯಿ ಪಶ್ಚಿಮದ ಕೌಶಿಕಿ ಸಿಲ್ಕ್ ವತಿಯಿಂದ ಬಹುಮಾನ ರೂಪದಲ್ಲಿ ಸೀರೆಗಳ ಲಕ್ಕಿ ಕೂಪನ್‌ ಆಯೋಜಿ ಸಲಾಗಿತ್ತು. ನಾಗರಾಜ್‌ ಕಾರ್ಯಕ್ರಮ ನಿರ್ವಹಿಸಿದರು.

ಮೀರಾ-ಡಹಾಣೂ ಬಂಟ್ಸ್‌ ಬೊಯಿ ಸರ್‌-ಪಾಲ್ಘರ್‌ ವಿಭಾಗದ ಕಾರ್ಯಾಧ್ಯಕ್ಷ ವಿಜಯ್‌ ಶೆಟ್ಟಿ ಮಾತನಾಡಿ ಸ್ಮರಣೀಯ ಅನುಭವಗಳನ್ನು ನೆನಪಿನಲ್ಲಿಡುವಂತೆ ಮಾಡಿದ ಇಂದಿನ ಕಾರ್ಯ ಕ್ರಮದ ಯಶಸ್ಸಿಗಾಗಿ ಸಹಕರಿಸಿದ ಕಾರ್ಯಕಾರಿ ಮಂಡಳಿ, ಮಹಿಳಾ ವಿಭಾಗದ ಸದಸ್ಯರನ್ನು ಸಂಸ್ಥೆಯ ಪರವಾಗಿ ಕೃತಜ್ಞತೆ ಸಲ್ಲಿಸಿದರು. ಇದೇ ಸಂದರ್ಭ ಚಾಪರ್ಕ ಕಲಾವಿದರಿಂದ ದೇವದಾಸ್‌ ಕಾಪಿಕಾಡ್‌ ರಚಿಸಿ, ನಿರ್ದೇಶಿಸಿದ ಪುಷ್ಪಕ್ಕನ ವಿಮಾನ ತುಳು ನಾಟಕ ಪ್ರದರ್ಶನಗೊಂಡಿತು. ದೇವದಾಸ್‌ ಕಾಪಿಕಾಡ್‌ ಅವರನ್ನು ಸಂಸ್ಥೆಯ ವತಿಯಿಂದ ಸಮ್ಮಾನಿಸಲಾಯಿತು.

 

 ಚಿತ್ರ-ವರದಿ: ಪಿ. ಆರ್‌. ರವಿಶಂಕರ್‌

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.