ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಸಭೆ


Team Udayavani, Feb 10, 2019, 5:37 PM IST

0902mum02.jpg

ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ ಸಭೆಯು ಸಂಸ್ಥೆಯ ಅಧ್ಯಕ್ಷ  ಐಕಳ ಹರೀಶ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜ. 27ರಂದು ಬೆಳಗ್ಗೆ 10.30ರಿಂದ ಮಂಗಳೂರಿನ ಹೊಟೇಲ್‌ ಗೋಲ್ಡ್‌ ಪಿಂಚ್‌ನ  ಸಿಲ್ವರ್‌ ಬೆಲ್ಸ್‌ ಹಾಲ್‌ನಲ್ಲಿ ನಡೆಯಿತು.

ಒಕ್ಕೂಟದ ಕಾರ್ಯದರ್ಶಿ  ವಿಜಯಪ್ರಸಾದ ಆಳ್ವರವರು 2018-2019ನೇ ಸಾಲಿನ ಈವರೆಗಿನ ಚಟುವಟಿಕೆಗಳ ಬಗ್ಗೆ ವಿವರ ನೀಡಿದರು. ಹಾಗೂ ಒಕ್ಕೂಟಕ್ಕೆ ಎಫ್‌ಸಿಆರ್‌ಎ ನೋಂದಣಿ ಶೀಘ್ರವೇ ದೊರಕಲಿದೆ ಎಂದರು. ಒಕ್ಕೂಟದ ಕೋಶಾಧಿಕಾರಿ  ಕೊಲ್ಲಾಡಿ ಬಾಲಕೃಷ್ಣ  ರೈ ಅವರು ವೆಚ್ಚದ ವಿವರವನ್ನು ನೀಡಿದರು. ಈ ಸಭೆಯಲ್ಲಿ ಜಾಗತಿಕ ಬಂಟರ ಸಂಘಗಳ  ಒಕ್ಕೂಟದ ವತಿಯಿಂದ ಈವರೆಗೆ ಕೈಗೊಂಡ ಸಮಾಜಸೇವೆಯ ವಿವರವನ್ನು ಹಾಗೂ ಆರ್ಥಿಕವಾಗಿ ನೀಡಿದ ಸಹಾಯಧನ ಮೊತ್ತಕ್ಕೆ ಮಂಜೂರು ಪಡೆಯಲಾಯಿತು. ಇದೇ ಕಾರ್ಯಕ್ರಮದಲ್ಲಿ ಒಕ್ಕೂಟದ ನಿರ್ದೇಶಕರಾದ  ಕರ್ನಿರೆ ವಿಶ್ವನಾಥ ಶೆಟ್ಟಿಯವರು ದಾನವಾಗಿ ನೀಡಿದ ಬಳುRಂಜೆ ಗ್ರಾಮದ ಕರ್ನಿರೆಯ 1 ಎಕ್ರೆ ಜಾಗದಲ್ಲಿ ಒಕ್ಕೂಟವು ಈಗಾಗಲೇ ವಸತಿಯೋಜನೆ ಕಾಮಗಾರಿಯನ್ನು ಪ್ರಾರಂಭಿಸಿದ್ದು, ಈ ಬಗ್ಗೆ   ಕರ್ನಿರೆ ವಿಶ್ವನಾಥ ಶೆಟ್ಟಿಯವರು ಮಾತನಾಡಿ, ನಾವು ಅರ್ಹ ಮಹಿಳಾ ಫಲಾನುಭವಿಗಳಿಗೆ ಈ ಯೋಜನೆ ಸಿಗುವಂತೆ ನೋಡಿಕೊಳ್ಳಬೇಕು ಎಂದರು.

ಒಕ್ಕೂಟದ ಜತೆ ಕಾರ್ಯದರ್ಶಿ  ಜಯಕರ ಶೆಟ್ಟಿ ಇಂದ್ರಾಳಿಯವರು ಮಂಗಳೂರಿನ ಲೈಟ್‌ ಹೌಸ್‌ ರಸ್ತೆಗೆ ಸಾವಿರಾರು ಕುಟುಂಬಗಳಿಗೆ ಅನ್ನದಾತರಾದ ದಿ|  ಮೂಲ್ಕಿ ಸುಂದರಾಂ ಶೆಟ್ಟಿಯವರ ಹೆಸರನ್ನಿಡಲು ಮಹಾನಗರ ಪಾಲಿಕೆ ನಿರ್ಣಯದ ಅನುಷ್ಠಾನದ ಬಗ್ಗೆ ತಮ್ಮ ಎಲ್ಲ ಬಂಟರ ಸಂಘಗಳು ಹಾಗೂ ಒಕ್ಕೂಟವು ಕಾರ್ಯಗತವಾಗಲು ಸಂಬಂಧಪಟ್ಟ ಹಿತೈಷಿಗಳ  ಸಹಕಾರದಿಂದ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದರು. ಇದಕ್ಕೆ ಸದಸ್ಯರು ಸರ್ವಾನುಮತದಿಂದ ಒಪ್ಪಿಗೆ ನೀಡಿದರು.

ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ಮಾತನಾಡಿ,  ಈಗಾಗಲೇ ಬಂದ 170 ಅಶಕ್ತ ಕುಟುಂಬಗಳ ಫಲಾನುಭವಿಗಳ ಅರ್ಜಿಗಳನ್ನು ಮಂಜೂರು ಮಾಡಿ ಧನ ಸಹಾಯ ನೀಡಲಾಗಿದ್ದು ಹಾಗೂ  ಆಶ್ರಯ ಯೋಜನೆಯ ನೂರು ಮನೆಗಳ ಯೋಜನೆಯಡಿ ಈಗಾಗಲೇ 35 ಮನೆ‌ಗಳಿಗೆ ಮಂಜೂರಾತಿ ನೀಡಲಾಗಿದೆ. ಅದರ  ಕಾಮಗಾರಿ ಪ್ರಗತಿಯಲ್ಲಿದೆ ಹಾಗೂ  ಉಳಿದ ಮನೆಗಳಿಗೆ ಶೀಘ್ರವೇ ಮಂಜೂರಾತಿ ನೀಡಲಾಗುವುದು. ಈ ಸಮಾಜ ಸೇವಾ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜಕ್ಕೆ ಧನಸಹಾಯ  ನೀಡಲಾಗುವುದು ಎಂದರು.      ನಮ್ಮ ಆಡಳಿತ ಮಂಡಳಿ ಸದಸ್ಯರಲ್ಲಿ ನಿರ್ದೇಶಕರು, ಮಹಾಪೋಷಕರು, ಪೋಷಕರು ಹಾಗೂ ಇತರ ಆಡಳಿತ ಮಂಡಳಿ ಸದಸ್ಯರಲ್ಲಿ ಹೆಚ್ಚಿನ ಸದಸ್ಯರು ಮುಂಬಯಿ ಹಾಗೂ ಆಸುಪಾಸಿನ ನಗರಗಳಿಗೆ ಹತ್ತಿರವಿರುವುದರಿಂದ ಮುಂಬಯಿಯಲ್ಲಿ  ಚುನಾವಣೆ ನಡೆಸುವುದು ಸೂಕ್ತವೆಂದು  ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಅಧ್ಯಕ್ಷರಾದ  ಐಕಳ ಹರೀಶ್‌ ಶೆಟ್ಟಿಯವರು ಆಡಳಿತ ಮಂಡಳಿ ಸದಸ್ಯರಲ್ಲಿ  ಸಮಾಲೋಚನೆ ಮಾಡಿ ಜಾಗತಿಕ ಬಂಟರ ಸಂಘಗಳ  ಒಕ್ಕೂಟದ ಪದಾಧಿಕಾರಿಗಳ ಚುನಾವಣೆಯ ಮಾರ್ಚ್‌ 17ರಂದು ಸಂಜೆ 4ರಿಂದ 6 ರವರೆಗೆ ಬಂಟರ ಸಂಘದ, ಅನೆಕ್ಸ್‌ ಬಿಲ್ಡಿಂಗ್‌, ಬಂಟರ ಭವನ, ಕುರ್ಲಾ ಈಸ್ಟ್‌ ಮುಂಬಯಿ ಇಲ್ಲಿ ನಡೆಸಲಾಗುವುದೆಂದು ಘೋಷಿದರು. ಹಾಗೂ  ನ್ಯಾಯವಾದಿ  ಕೆ. ಪೃಥ್ವಿರಾಜ್‌ ರೈ ಅವರನ್ನು  ಈಗಾಗಲೇ ಚುನಾವಣಾ ಅಧಿಕಾರಿಯಾಗಿ ನೇಮಿಸಲಾಗಿದ್ದು ಅವರಿಗೆ ಚುನಾವಣಾ ಪ್ರಕ್ರಿಯೆ ಮಾಡಲು ಅಗತ್ಯವಿರುವ ಎಲ್ಲಾ ದಾಖಲೆಗಳ ಕಡತವನ್ನು ಕಾರ್ಯದರ್ಶಿಯವರು  ನೀಡಿ ಆಡಳಿತ ಕಚೇರಿಯಿಂದ ಅವರಿಗೆ ಸಂಪೂರ್ಣ ಸಹಕಾರವನ್ನು ನೀಡಲು ತಿಳಿಸಿದರು. ಅದೇ ದಿನ ಸಂಜೆ 6ರಿಂದ ಆಡಳಿತ ಮಂಡಳಿ ಸಭೆಯು ನಡೆಯಲಿದ್ದು ತದನಂತರ ಸಭಾ ಕಾರ್ಯಕ್ರಮವು ನಡೆಯುವುದೆಂದು ಪ್ರಕಟಿಸಿದರು.

ಪೋಷಕ ಸದಸ್ಯರಾದ ಆರ್‌. ಉಪೇಂದ್ರ ಶೆಟ್ಟಿ,   ಜೆ. ಪಿ. ಶೆಟ್ಟಿ ಮುಂಬಯಿ, ಆಡಳಿತ ಮಂಡಳಿ ಸದಸ್ಯರಾದ   ಕರ್ನಲ್‌ ಶರತ್‌ ಭಂಡಾರಿ, ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ರತ್ನಾಕರ್‌ ಶೆಟ್ಟಿ ಮುಂಡ್ಕೂರು,  ವಸಂತ ಶೆಟ್ಟಿ,  ರವೀಂದ್ರನಾಥ ಶೆಟ್ಟಿ, ಅಮರನಾಥ ಶೆಟ್ಟಿ,  ಸುದರ್ಶನ್‌ ಶೆಟ್ಟಿ,  ಇನ್ನಿತರ ಆಡಳಿತ ಮಂಡಳಿ ಸದಸ್ಯರು, ಆಡಳಿತಾಧಿಕಾರಿ ಹಾಗೂ ಸಿಬಂದಿ ವರ್ಗದವರು ಹಾಜರಿದ್ದರು. ಜತೆ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿಯವರು ವಂದಿಸಿದರು.

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.