ಆಟೋ, ಟ್ಯಾಕ್ಸಿ ಚಾಲಕರ ಸೇವೆ ಬಳಸಿಕೊಳ್ಳಿ


Team Udayavani, Apr 17, 2021, 11:32 AM IST

Utilize auto, taxi driver service

ಮುಂಬಯಿ: ಕೋವಿಡ್‌ ಸಾಂಕ್ರಾಮಿಕ ಕಾಲಘಟ್ಟದಲ್ಲಿ ಆಟೋ ರಿûಾ ಮತ್ತು ಟ್ಯಾಕ್ಸಿ ಚಾಲಕರು ಸಂಕಷ್ಟದಲ್ಲಿದ್ದು, ಸದ್ಯ ಬಾಡಿಗೆ ತೀವ್ರಗತಿಯಲ್ಲಿ ಕ್ಷೀಣಿಸಿದ ಪರಿಣಾಮ ದೈನಂದಿನ ಸಂಪಾದನೆಯಲ್ಲಿ ನಷ್ಟ ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಅಮೆಜಾನ್‌ ಸಂಸ್ಥೆಯು ಮುಂಬಯಿ ಮತ್ತು ಉಪನಗರಗಳಲ್ಲಿನ ಆಟೋ ರಿûಾ ಮತ್ತು ಟ್ಯಾಕ್ಸಿ ಚಾಲಕರನ್ನು ಬಳಸಿ ತಮ್ಮ ಗ್ರಾಹಕರಿಗೆ ವಸ್ತು ಗಳನ್ನು ತಲುಪಿಸುವಲ್ಲಿ ಅವಕಾಶ ಒದಗಿಸುವಂತೆ ಅಮೆಜಾನ್‌ ಜಾಗತಿಕ ಹಿರಿಯ ಉಪಾಧ್ಯಕ್ಷ, ಅಮೆಜಾನ್‌ ವ್ಯವಸ್ಥಾಪಕ ನಿರ್ದೇಶಕ ಅಮಿತ್‌ ಅಗರ್ವಾಲ್‌ ಅವರಿಗೆ ಅಂಧೇರಿ ಪಶ್ಚಿಮದ ಮಾಜಿ ಶಾಸಕ, ಶಿವಸೇನೆ ಧುರೀಣ, ಮುಂಬಯಿ ಉಪನಗರಗಳಲ್ಲಿನ ಆಟೋ ರಿûಾ ಮತ್ತು ಟ್ಯಾಕ್ಸಿ ಡ್ರೈವರ್‌ಗಳ ಒಕ್ಕೂಟ ಕಾಮಾYರ್‌ ಸೇವಾ ಸಂಘದ ಅಧ್ಯಕ್ಷ ಕೃಷ್ಣ ಎಸ್‌. ಹೆಗ್ಡೆ ಮನವಿ ಮಾಡಿದ್ದಾರೆ.

ಅಮೆಜಾನ್‌ ಸಂಸ್ಥೆ ಪ್ರಸ್ತುತ ಜಾಗತಿಕವಾಗಿ ಅತೀದೊಡ್ಡ ಕಂಪೆನಿಗಳಲ್ಲಿ ಒಂದಾ ಗಿದ್ದು, ವಿಶ್ವದ ಅತೀದೊಡ್ಡ ಲಾಜಿಸ್ಟಿಕ್‌ ಮತ್ತು ಮಾನವಶಕ್ತಿಯನ್ನು ತೊಡಗಿಸಿ ಕೊಳ್ಳುತ್ತಿರುವ ಕಂಪೆನಿಯೂ ಹೌದು. ಆದ್ದರಿಂದ ಮುಂಬಯಿ ಮತ್ತು ಉಪನಗರಗಳಲ್ಲಿನ ಆಟೋ ರಿûಾ ಅಥವಾ ಟ್ಯಾಕ್ಸಿ ಚಾಲಕರನ್ನು ತಮ್ಮ ಸಂಸ್ಥೆಯಲ್ಲಿ ತೊಡಗಿಸಿಕೊಂಡು ತಮ್ಮ ಉತ್ಪನ್ನಗಳನ್ನು ತಲುಪಿಸಲು ಅಮೆಜಾನ್‌ ಗಮನ ಹರಿಸಿದರೆ ಈ ಚಾಲಕರಿಗೆ ಸಹಕಾರಿಯಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಚಾಲಕರು ಬೃಹತ್‌ ಉತ್ಪನ್ನಗಳನ್ನೂ ತಲುಪಿಸಬಹುದು. ಈ ಚಾಲಕ‌ರು ತಮ್ಮ ಕಂಪೆನಿಗೆ ಸಮಯೋಚಿತ, ಕ್ಲಪ್ತ, ಪ್ರಾಮಾಣಿಕತೆಯಿಂದ ಸೇವೆ ನೀಡುವ ಭರವಸೆಯನ್ನು ನಾವು ನೀಡುತ್ತೇವೆ. ಇದರಿಂದ ಆಟೋ ರಿûಾ ಮತ್ತು ಟ್ಯಾಕ್ಸಿ ಚಾಲಕರು ಈ ಕಷ್ಟದ ಸಮಯದಲ್ಲಿ ಸ್ವಲ್ಪ ಆದಾಯವನ್ನು ಗಳಿಸಲು ಸಹಕಾರಿಯಾಗಬಲ್ಲದು. ಇದು ತಮ್ಮ ಉದ್ಯಮದ ಸಿಎಸ್‌ಆರ್‌ ಸೇವೆಯ ಉದ್ದೇಶವನ್ನೂ ಪೂರೈಸಿದಂತಾಗಬಹುದು ಎಂದು ಪತ್ರದ ಮೂಲಕ ಕೃಷ್ಣ ಹೆಗ್ಡೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.