ವಡಾಲ ಎನ್‌ಕೆಇಎಸ್‌ ಸಮೂಹ ಶಿಕ್ಷಣ ಸಂಸ್ಥೆ: 80ನೇ ವಾರ್ಷಿಕೋತ್ಸವ


Team Udayavani, Mar 29, 2019, 8:17 PM IST

2803mum02

ಮುಂಬಯಿ: ವಿದ್ಯಾರ್ಥಿಗಳಲ್ಲಿರುವ ಏಕಾಂತ ಪ್ರವೃತ್ತಿಯನ್ನು ಹೋಗಲಾಡಿಸಿ ಅವರು ಉತ್ತಮ ಸ್ನೇಹತ್ವದೊಂದಿಗೆ ಸಹಬಾಳ್ವೆಯಿಂದ ಬೆರೆತು ಬಾಳುವಂತಹ ಪರಿಸರ ನಿರ್ಮಾಣ ಮಾಡಬೇಕು. ಮೇಣದ ಬತ್ತಿ ತಾನು ಉರಿದು ಜಗತ್ತಿಗೆ ಬೆಳಕು ನೀಡುವಂತೆ ಗುರುಗಳು ತನ್ನಲ್ಲಿರುವ ಜ್ಞಾನ ಸುಧೆಯನ್ನು ವಿದ್ಯಾರ್ಥಿಗಳಿಗೆ ಧಾರೆ ಎರೆದು ಅವರನ್ನು ಯೋಗ್ಯ ನಾಗರಿಕನ್ನಾಗಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಕಾರಣರಾಗುವಂತೆ ಮಾಡಬೇಕು ಎಂದು ಐಡಿಎಫ್‌ಸಿ ಇನಾ#†ಸ್ಟ್ರಕ್ಚರ್‌ ಫೈನಾನ್ಸ್‌ ಲಿಮಿಟೆಡ್‌ ಇದರ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಎಸ್‌. ರಾವ್‌ ನುಡಿದರು.

ಮಾ. 24ರಂದು ವಡಾಲದ ರಾಷ್ಟ್ರೀಯ ಕನ್ನಡ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಜರಗಿದ ಎನ್‌ಕೆಇಎಸ್‌ ಸಮೂಹ ಶಿಕ್ಷಣ ಸಂಸ್ಥೆಗಳ 80ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು, ವೃತ್ತಿಪರ ಪ್ರಮಾಣ ಪತ್ರ ಕೋರ್ಸ್‌ ತರಗತಿಯನ್ನು ಉದ್ಘಾಟಿಸಿ, ಶಾಲಾ ವಾರ್ಷಿಕ ನಂದಾದೀಪ ಸ್ಮರಣ ಸಂಚಿಕೆಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು. ಇಂದಿನ ಶಿಕ್ಷಣವು ಹಲವಾರು ಮಾಹಿತಿಗಳನ್ನು ನೀಡುವ ಜ್ಞಾನದ ಆಗರವಾಗಿದ್ದು, ಶಾಲೆಯು ವಿವಿಧ ಬಿಡಿವಸ್ತುಗಳ ರೀತಿಯಲ್ಲಿ, ಇಂಧನದ ರೂಪದಲ್ಲಿ ಸಹಕರಿಸುತ್ತಾ ವಿದ್ಯಾರ್ಥಿಗಳಿಗೆ ಉದ್ಯೋಗ ಸಂಪಾದಿಸಲು ಸಹಕರಿಸುವ ಘಟಕದಂತೆ ಕಾರ್ಯನಿರ್ವಹಿಸುತ್ತಿವೆ. ಉದ್ಯೋಗಕ್ಕಾಗಿ ಶಿಕ್ಷಣ, ಬೌದ್ಧಿಕ ಹಾಗೂ ಮಾನಸಿಕ ಬೆಳವಣಿಗೆಗಾಗಿ ಶಿಕ್ಷಣ ಮತ್ತು ಅಸಮಾನ್ಯ ಮಾನವನಾಗಲು ಶಿಕ್ಷಣ ಎಂಬ 3 ಹಂತಗಳ ಶಿಕ್ಷಣದ ಪದ್ಧತಿಗಳ ಮೇಲೆ ಬೆಳಕು ಚೆಲ್ಲುತ್ತಾ ಮಾನಸಿಕ, ಬೌದ್ಧಿಕ, ಆಧ್ಯಾತ್ಮಿಕ, ದೈಹಿಕ ಶಿಕ್ಷಣದೊಂದಿಗೆ ಯೋಗಾಭ್ಯಾಸವನ್ನು ಅಳವಡಿಸಿಕೊಂಡಾಗ ಮನಸ್ಸನ್ನು ಸೀಮಿತದಲ್ಲಿಟ್ಟುಕೊಂಡು ಅದನ್ನು ಪ್ರಫುಲ್ಲಗೊಳಿಸಿ ಒತ್ತಡದ ಕ್ಷಣದಲ್ಲೂ ಕಾರ್ಯನಿರ್ವಹಿಸಲು ತೆರೆದ ಕಣ್ಣುಗಳೊಂದಿಗೆ ಸಮಾಜವನ್ನು ವೀಕ್ಷಿಸಿದಾಗ ಜೀವನದಲ್ಲಿ ಯಶಸ್ಸ ಗಳಿಸಲು ಸಾಧ್ಯವಿದೆ ಎಂದು ನುಡಿದರು.

ಗೌರವ ಅತಿಥಿಯಾಗಿ ಆಗಮಿಸಿದ ಟೈಮ್ಸ್‌ ಪ್ರೋ ಇದರ ಅಧ್ಯಕ್ಷ ಅನೀಸ್‌ ಶ್ರೀಕೃಷ್ಣ ಅವರು ಮಾತನಾಡಿ, ಇಲ್ಲಿಯ ಎನ್‌ಸಿಸಿ ವಿದ್ಯಾರ್ಥಿಗಳ ಶಿಸ್ತು ಹಾಗೂ ಸಂಯಮವನ್ನು ಗಮನಿಸಿದಾಗ ನಾನು ನನ್ನ ಶಾಲೆಯಲ್ಲಿ ಎನ್‌ಸಿಸಿಯಲ್ಲಿ ಸಾರ್ಜೆಂಟ್‌ ಆಗಿದ್ದ ದಿನಗಳು ಮರುಕಳಿಸುತ್ತಿದೆ. ದೇವಾ ಲಯದ ಮಾದರಿಯಲ್ಲಿರುವ ಇಂತಹ ಭವ್ಯ ಕಟ್ಟಡದಲ್ಲಿ ಕೆಜಿಯಿಂದ ಪಿಜಿಯವರೆಗೆ ಕೌಶಲಪೂರ್ಣವಾದ ಶಿಕ್ಷಣವನ್ನು ನೀಡುವುದರೊಂದಿಗೆ ಹೊಸದಾಗಿ ಪ್ರಾರಂಭಿಸಲ್ಪಟ್ಟ ಪ್ರಮಾಣ ಪತ್ರ ಕೋರ್ಸ್‌ಗಳು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಬೆಳಕನ್ನು ಚೆಲ್ಲಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರಹೊಮ್ಮಲು ಸಹಕರಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.

ಸಭಾ ಕಾರ್ಯಕ್ರಮವನ್ನು ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಉದ್ಘಾಟಿಸಿದರು. ಶಾಲಾ ಸಂಗೀತ ಶಿಕ್ಷಕ ಸಚಿನ್‌ ಮೋರೆ ಪ್ರಾರ್ಥನೆಗೈದರು. ವಿದ್ಯಾರ್ಥಿಗಳು ಕರ್ನಾಟಕ ಮತ್ತು ಮಹಾರಾಷ್ಟ್ರದ ನಾಡಗೀತೆಗಳನ್ನು ಹಾಡಿದರು. ಶಾಲಾ ಶೈಕ್ಷಣಿಕ ವರ್ಷದ ವರದಿಯನ್ನು ಆಯಾಯ ವಿಭಾ ಗದ ಮುಖ್ಯಸ್ಥರು ವಾಚಿಸಿದರು. ಪಾಲ್ಗೊಂಡ ಅತಿಥಿ-ಗಣ್ಯರುಗಳನ್ನು ಪ್ರಾಂಶುಪಾಲ ಸರೋಜಾ ರಾವ್‌ ಸ್ವಾಗತಿಸಿದರು.

ಶಾಲಾ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಅನಂತ ಬನವಾಸಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಣ ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವರಿಸಿದರು. ಶಾಲಾ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಪಾರ್ಥ ಸಾರಥಿ ರಾವ್‌, ಕಾರ್ಯದರ್ಶಿ ಸುರೇಶ್‌ ರಾವ್‌, ಉಪಾಧ್ಯಕ್ಷೆ ಕೆ. ಕಮಲಾ ಹಾಗೂ ಸದಸ್ಯರಾದ ಅನಂತ ಬನವಾಸಿ ಅವರು ಅತಿಥಿ-ಗಣ್ಯರುಗಳನ್ನು ಶಾಲು ಹೊದೆಸಿ, ಫಲಪುಷ್ಪ ಸ್ಮರಣಿಕೆಯನ್ನಿತ್ತು ಗೌರವಿಸಿದರು.

ಈ ಸಂದರ್ಭ ಅತಿಥಿ-ಗಣ್ಯರು ಎಸ್‌ವಿಐಎಂಎಸ್‌ ಪಿಜಿಡಿಎಂ (ಬಿ ಆ್ಯಂಡ್‌ ಎಫ್‌ಎಸ್‌) ವಿದ್‌ ಟೈಮ್ಸ್‌ ಪ್ರೋ ಹಾಗೂ ಸರ್ಟಿಫೈಡ್‌ ಕೋರ್ಸ್‌ ಆನ್‌ ಫಿಲ್ಮ್ ಮೇಕಿಂಗ್‌ ವಿದ್‌ ಝಡ್‌ಐಎಂಎ ಕೋರ್ಸ್‌ಗಳನ್ನು ಉದ್ಘಾಟಿಸಿ, ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ತಿಳಿಸಿ ಶುಭಹಾರೈಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಖ್ಯಾತ ಗಾಯಕ ಇಂಡಿಯನ್‌ ಐಡಾಲ್‌ ಸೀಜನ್‌-2 ರ ವಿಜೇತ, ರೈಸಿಂಗ್‌ ಸ್ಟಾರ್‌ ಬಿರುದಾಂಕಿತ ಅಮೇಯ್‌ ದಾಥೆ ಅವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶಿಕ್ಷಣ ಸಂಸ್ಥೆಯ ಪ್ರತೀ ವಿಭಾಗದ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ, ವಿವಿಧ ವಿನೋದಾವಳಿಗಳು ನಡೆಯಿತು. ಮಾಧವಿ ಜೋಶಿ ಅವರು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿರ್ವಹಿಸಿದರು. ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷೆ ಕೆ. ಕಮಲಾ ಅವರು ವಂದಿಸಿದರು. ಸಂಸ್ಥೆಯ ಪದಾಧಿಕಾರಿಗಳಾದ ಶಶಿಕಾಂತ್‌ ಜೋಶಿ, ಪದ್ಮಜಾ ಬನವಾಸಿ, ವಿಕ್ರಾಂತ್‌ ಉರ್ವಾಳ್‌, ಮುರಳೀಧರ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು, ಪಾಲಕರು, ಪೋಷಕರು, ಶಿಕ್ಷಕವೃಂದದವರು, ಶಿಕ್ಷಕೇತರ ಸಿಬಂದಿಗಳು, ಹಳೆವಿ ದ್ಯಾರ್ಥಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಶಿಕ್ಷಣ ಪ್ರೇಮಿಗಳು, ಹಿತೈಷಿಗಳು, ದಾನಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.