ವಾಶಿಯ ಶ್ರೀ ಬಾಲಾಜಿ ಮಂದಿರದ ಪರಿವಾರ ದೇವರ ವರ್ಧಂತಿ ಉತ್ಸವ


Team Udayavani, Jun 18, 2019, 4:45 PM IST

1606MUM08

ನವಿ ಮುಂಬಯಿ: ಜಿಎಸ್‌ಬಿ ಸಭಾ ನವಿ ಮುಂಬಯಿ ಇದರ ವಾಶಿಯ ಶ್ರೀ ಬಾಲಾಜಿ ಮಂದಿರ ಪ್ರಸಿದ್ಧಿಯ ಶ್ರೀ ಲಕ್ಷಿ¾à ವೆಂಕಟರಮಣ ದೇವಸ್ಥಾನದಲ್ಲಿ ರಜತ ಸಂಭ್ರಮದ ಶುಭಾವಸರದಲ್ಲಿ ಜೂ. 16 ರಂದು ಮಂದಿರದಲ್ಲಿ ಪ್ರತಿಷ್ಠಾಪಿತ ಪರಿವಾರ ದೇವರ 22ನೇ ವರ್ಧಂತಿ ಮಹೋತ್ಸವವು ಅದ್ದೂರಿಯಾಗಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆಯಿಂದ ದೇವತಾ ಪ್ರಾರ್ಥನೆ, ಪುಣ್ಯಾಹ ವಾಚನ, ಗುರು ಮತ್ತು ಗಣಪತಿ ಪೂಜೆ, ಗೌರಿ ಮಾತ್ರಕ ಪೂಜೆ, ದೇವನಂದಿನಿ ಸಮಾರಾಧನೆ, ಕಲಶ ಪ್ರಾರ್ಥನೆ, ಅಭಿಷೇಕ, ಲಕ್ಷ್ಮೀನಾರಾಯಣ ಹೃದಯ ಪಾರಾಯಣ ಹವನ, ವೆಂಕಟೇಶ ಮೂಲ ಮಂತ್ರ ಹವನ. ಮಧ್ಯಾಹ್ನ ಪುಣ್ಯಾಹುತಿ, ಪ್ರಸನ್ನ ಪೂಜೆ, ಅಷ್ಠ ಮಂಗಳ ನಿರೀಕ್ಷಣ, ಪರಿವಾರ ದೇವರಿಗೆ ಪಟ್ಟ ಕಾಣಿಕೆ, ಮಧ್ಯಾಹ್ನದ ಮಹಾಪೂಜೆ, ಬ್ರಾಹ್ಮಣ ಸಂತರ್ಪಣೆ, ಪ್ರಸಾದ ವಿತರಣೆ. ಸಂಜೆ ಭಜನಾ ಸೇವೆ, ಬಾಲಾಜಿ ದೇವರಿಗೆ ಮತ್ತು ಪರಿವಾರ ದೇವರಿಗೆ ರಂಗ ಪೂಜೆ ಮತ್ತು ಪ್ರಸಾದ ವಿತರಣೆ ನಡೆಯಿತು.

ಶ್ರೀ ಸಂಸ್ಥಾನ ಕಾಶೀ ಮಠ ವಾರಣಾಸಿ ಕಾಶೀ ಮಠಾಧೀಶ ಶ್ರೀಮದ್‌ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರು ಪಟ್ಟದ ದೇವರಿಗೆ ಪೂಜೆಯೊಂದಿಗೆ ಮಹಾ ಆರತಿಗೈದು, ಕುಲಗುರು ದೈವಕ್ಯ ಶ್ರೀಮದ್‌ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಸ್ಮರಣೆಗೈದು ಉಪಸ್ಥಿತ ಭಕ್ತಾಬಿಮಾನಿಗಳನ್ನು ಮಂತ್ರಾಕ್ಷತೆ ನೀಡಿ ಹರಸಿದ‌ರು.ವೇದಮೂರ್ತಿ ಲಕ್ಷ್ಮೀನಾ ರಾಯಣ ಭಟ್‌ ವಾಲ್ಕೇಶ್ವರ್‌ ಮತ್ತು ಮಂದಿರದ ಪ್ರಧಾನ ಅರ್ಚಕ ವೇದಮೂರ್ತಿ ಶತಾನಂದ ಭಟ್‌ ಅವರು ವಿವಿಧ ಪೂಜೆಗಳನ್ನು ನಡೆಸಿದರು. ಪುರೋಹಿತ‌ ಕೇದಾರ್‌ ಭಟ್‌ ಮತ್ತು ಸಹ ಪುರೋಹಿತರು ವಿವಿಧ ಪೂಜಾಧಿಗಳನ್ನು ನಡೆಸಿ ಉಪಸ್ಥಿತ ಸದ್ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಿ ಅನುಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಎಸ್‌ಬಿ ಸಭಾ ನವಿ ಮುಂಬಯಿ ಅಧ್ಯಕ್ಷ ಎಸ್‌. ಆರ್‌. ಪೈ, ಕಾರ್ಯಾಧ್ಯಕ್ಷ ದೀಪಕ್‌ ಬಿ. ಶೆಣೈ, ಗೌರವ ಕಾರ್ಯದರ್ಶಿ ವಸಂತ್‌ ಕುಮಾರ್‌ ಬಂಟ್ವಾಳ, ಕೋಶಾಧಿಕಾರಿ ಪ್ರೇಮಾನಂದ ಮಲ್ಯ, ಜೊತೆ ಕಾರ್ಯದರ್ಶಿ ಸತೀಶ್‌ ಶೆಣೈ, ಜೊತೆ ಕೋಶಾಧಿಕಾರಿ ಪ್ರಮೋದ್‌ ಎಸ್‌. ಕಾಮತ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸೀಮಾ ಎಸ್‌. ಪೈ, ಕಾರ್ಯದರ್ಶಿ ಗಿರಿಜಾ ಭಂಡಾರಿ, ಕಟಪಾಡಿ ಉಮೇಶ್‌ ಕಿಣಿ, ಬೈದ್ಯೆಬೆಟ್ಟು ಆನಂದರಾಯ ಪೈ, ಶ್ರೀನಿವಾಸ ವಿ. ಶೆಣೈ, ವೆಂಕಟೇಶ ವಿ. ಪ್ರಭು, ವಿ. ಪ್ರಭಾಕರ ಪೈ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು, ಜಿಎಸ್‌ಬಿ ಸಮಾಜ ಬಾಂಧವರು, ಅಪಾರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದು ಪೂಜಾದಿಗಳಲ್ಲಿ ಪಾಲ್ಗೊಂಡರು.

ಜೂ. 17ರಂದು ಜೇಷ್ಠ ಶುಕ್ಲ ಪೂರ್ಣಿಮೆಯಂದು ಶ್ರೀ ಬಾಲಾಜಿ ಪ್ರತಿಷ್ಠಾu ವರ್ಧಂತಿ ಮತ್ತು ದೇವತೆಗಳ 18ನೇ ನವಗ್ರಹ ದೇವತಾ ವರ್ಧಂತಿ ಮಹೋತ್ಸವ ನಿಮಿತ್ತ ಬೆಳಗ್ಗೆಯಿಂದ ದೇವತಾ ಪ್ರಾರ್ಥನೆ, ಗುರು ಮತ್ತು ಗಣಪತಿ ಪೂಜೆ, ಪುಣ್ಯಾಹ ವಾಚನ ಪೂಜೆ, ಗೌರಿ ಮಾತ್ರಕ ಪೂಜೆ, ದೇವನಂದಿನಿ ಸಮಾರಾಧನಾ. ಪಾವಮಾನ ಕಲಶ ಪ್ರತಿಷ್ಠಾಪನ, ಅಗ್ನಿ ಪ್ರತಿಷ್ಠಾಪನೆ, ಪಂಚಾಮೃತ ಅಭಿಷೇಕ, ಶತ ಕಲಶಾಭಿಷೇಕ, ಹಾಲು ಅಭಿಷೇಕ, ಗಂಗಾಭಿಷೇಕ, ಸನಿಧ್ಯ ಹವನ, ಲಘು ವಿಷ್ಣು ಹವನ, ಪ್ರಸನ್ನ ಪೂಜೆ, ಅಷ್ಟಮಂಗಳ ನಿರೀಕ್ಷಣ, ಕಾಣಿಕೆ ಮತ್ತು ಗುರು ಕಾಣಿಕೆ, ಮಧ್ಯಾಹ್ನ ಪೂರ್ಣಾಹುತಿ, ಪುಷ್ಪಾಲಂಕಾರ, ಮಧ್ಯಾಹ್ನದ ಮಹಾಪೂಜೆ, ಮಂಗಳಾರತಿ, ಬ್ರಾಹ್ಮಣ ಸಂತರ್ಪಣೆ, ಮಯ್ಯು ಸಮಾರಾಧನೆ, ಭಕ್ತಾದಿಗಳಿಗೆ ಪ್ರಸಾದ ವಿತರಣೆ, ಸಂಜೆ ಭಜನಾ ಸೇವೆ, ಬಾಲಾಜಿ ದೇವರಿಗೆ ರಂಗ ಪೂಜೆ, ರಾತ್ರಿ ಪೂಜೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಸಮಾಜ ಬಾಂಧವರು ಮತ್ತು ಭಕ್ತಾಭಿಮಾನಿಗಳು ಆಗಮಿಸಿ ಶ್ರೀದೇವರ ಪ್ರಸಾದ ಸ್ವೀಕರಿಸಿ ಶ್ರೀ ಹರಿಯ ಕೃಪೆಗೆ ಪಾತ್ರರಾಗುವಂತೆ ಜಿಎಸ್‌ಬಿ ಸಭಾ ನವಿ ಮುಂಬಯಿ ಸಮಿತಿ ತಿಳಿಸಿದೆ.

ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.