ವಸಾಯಿರೋಡ್ ಜಿಎಸ್ಬಿ ಬಾಲಾಜಿ ಮಂದಿರ:ಶ್ರೀ ಸತ್ಯಮಾರುತಿ ವ್ರತ
Team Udayavani, Aug 29, 2017, 4:21 PM IST
ಮುಂಬಯಿ: ವಸಾಯಿ ರೋಡ್ ಪಶ್ಚಿಮದ ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್ಬಿ) ಬಾಲಾಜಿ ಸೇವಾ ಸಮಿತಿಯ ಬಾಲಾಜಿ ಮಂದಿರದಲ್ಲಿ ಶ್ರೀ ಸತ್ಯಮಾರುತಿ ವ್ರತವನ್ನು ಸಮಾಜದ ಎಲ್ಲ ಮಕ್ಕಳ ಒಳಿತಿಗಾಗಿ ಆಚರಿಸಲಾಯಿತು.
ವಡಾಲಾ ಶ್ರೀ ರಾಮ ಮಂದಿರದ ವೇದಮೂರ್ತಿ ಅನಂತ ಸುಧಾಮ ಭಟ್ ಮಾರ್ಗದರ್ಶನ ಹಾಗೂ ಸಮಿತಿಯ ವೇ|ಮೂ| ಗಿರಿಧರ್ ಭಟ್ ಉಪಸ್ಥಿತಿಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ಸಮಿತಿಯ ಉಪಾಧ್ಯಕ್ಷ ಕಟಪಾಡಿ ಗಣೇಶ್ ಕಾಮತ್ ಮತ್ತು ಗೀತಾ ಕಾಮತ್ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.
ಸಮಿತಿಯ ಯುವ ವಿಭಾಗದ ವತಿಯಿಂದ ಭಜನಾ ಕಾರ್ಯಕ್ರಮ ಸುಶ್ರಾವ್ಯವಾಗಿ ಜರಗಿತು. ಅವರು ಕನ್ನಡ, ಕೊಂಕಣಿ, ಮರಾಠಿ ಮತ್ತು ಹಿಂದಿ ಭಜನೆಗಳನ್ನು ಹಾಡಿ ನೆರೆದಿದ್ದ ನೂರಾರು ಸಭಿಕರ ಮನ ಸೆಳೆದರು. ಹಾರ್ಮೋನಿಯಂನಲ್ಲಿ ಪ್ರಕಾಶ್ ಪ್ರಭು, ವಿನಾಯಕ ಪ್ರಭು, ತಬಲಾದಲ್ಲಿ ರಾಜೇಶ್ ಪೈ, ಅಮೇಯ ಪೈ, ಪಖ್ವಾಜ್ನಲ್ಲಿ ಪ್ರಸಾದ್ ಪ್ರಭು ಮತ್ತು ಗಣೇಶ್ ಪ್ರಭು ಸಹಕರಿಸಿದರು.
ತದನಂತರ ಶ್ರೀ ಸತ್ಯಮಾರುತಿ ದೇವರಿಗೆ ಹಾಗೂ ಆರಾಧ್ಯ ದೇವರಾದ ವೆಂಕಟರಮಣ ಮತ್ತು ಇತರ ಪರಿವಾರ ದೇವರಿಗೆ ಆರತಿ ಬೆಳಗಿಸಲಾಯಿತು. ಬೆಳ್ಳಿಯ ವೀರ ಮಾರುತಿ ಮೂರ್ತಿ ಅನಂತ್ ಭಟ್ ಅವರ ಹಸ್ತದಿಂದ ಪೂಜಿಸಿ ಸಮಿತಿಯ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸ ಲಾಯಿತು. ಈ ಮೂರ್ತಿ ಯನ್ನು ಅನಂತ್ ಭಟ್ ಪರಿವಾರದಿಂದ ಪ್ರಾಯೋಜಿಸಲಾಯಿತು.
ಮಹಾಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆಯನ್ನು ಸಮಿತಿಯ ಉಪ ಕೋಶಾಧಿಕಾರಿ ಗಣೇಶ್ ಲಕ್ಷ್ಮಣ್ ಪೈ ಪರಿವಾರದಿಂದ ಆಯೋಜಿಸಲಾಯಿತು.
ಏತನ್ಮಧ್ಯೆ, ಕಾರ್ಯಕ್ರಮಕ್ಕೆ ಪರಿವಾರ ಸಮೇತ ಭೇಟಿ ನೀಡಿದ ವಸಾಯಿ ವಲಯದ ಪಾಲ^ರ್ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜ್ ತಿಲಕ್ ರೌಶನ್ ಅವರನ್ನು ಸಮಿತಿಯ ವತಿಯಿಂದ ಅಧ್ಯಕ್ಷ ತಾರನಾಥ ಪೈ, ಸಂಚಾಲಕ ದೇವೇಂದ್ರ ಭಕ್¤ ಮತ್ತು ಕಾರ್ಯ ದರ್ಶಿ ಪುರುಷೋತ್ತಮ ಶೆಣೈ ಅವರು ಶಾಲು ಹೊದಿಸಿ, ಫಲ ಪುಷ್ಪ ಮತ್ತು ಬಾಲಾಜಿ ವಿಗ್ರಹ ನೀಡಿ ಸಮ್ಮಾನಿಸಿದರು. ಉದ್ಯಮಿ ನಿಟ್ಟೆ ವಿಜಯಾನಂದ ಶೆಣೈ ಮತ್ತಿತರರು ಉಪಸ್ಥಿತರಿದ್ದರು.
ಈ ವಿಶೇಷ ಪೂಜೆಗೆ ಸತ್ಯಮಾರುತಿ ಮತ್ತು ಬಾಲಾಜಿ ಮಂಟಪವನ್ನು ಅಲಂಕರಿಸಲು ವೀಣಾ ಜಿ. ಪೈ ಮತ್ತು ಮಕ್ಕಳು ಕುರ್ಲಾ ಇವರ ವತಿಯಿಂದ ಹೂವಿನ ಸೇವೆಯನ್ನು ಪ್ರಾಯೋಜಿಸಲಾಯಿತು.
ಸಮಿತಿಯ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗದ ಪದಾಧಿಕಾರಿಗಳು ಹಾಗೂ ಎಲ್ಲಾ ಸದಸ್ಯರ ಉಸ್ತು ವಾರಿಯಲ್ಲಿ ಧಾರ್ಮಿಕ ಕಾರ್ಯಕ್ರಮವು ಯಶಸ್ವಿಯಾಗಿ ಜರಗಿತು. ವೇ|ಮೂ| ಅನಂತ್ ಭಟ್, ವಿನಾಯಕ ಎಚ್. ಪೈ, ವಿಜಯೇಂದ್ರ ಪ್ರಭು ಮತ್ತು ಶ್ರೀಪತಿ ಭಟ್ ನೇತೃತ್ವದಲ್ಲಿ ಅಲಂಕರಿಸಿದ ಸತ್ಯಮಾರುತಿ ಮತ್ತು ಬಾಲಾಜಿ ಮಂಟಪವು ಸಭಿಕರ ಮೆಚ್ಚುಗೆಗೆ ಪಾತ್ರವಾಯಿತು. ಮುಂಬಯಿ, ವಸಾಯಿ ಪರಿ ಸರದ ಸಮಾಜದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ