ವಸಾಯಿರೋಡ್‌ ಜಿಎಸ್‌ಬಿ ಬಾಲಾಜಿ ಮಂದಿರ:ಶ್ರೀ ಸತ್ಯಮಾರುತಿ ವ್ರತ


Team Udayavani, Aug 29, 2017, 4:21 PM IST

28mum02.jpg

ಮುಂಬಯಿ: ವಸಾಯಿ ರೋಡ್‌ ಪಶ್ಚಿಮದ ಗೌಡ ಸಾರಸ್ವತ ಬ್ರಾಹ್ಮಣ (ಜಿಎಸ್‌ಬಿ) ಬಾಲಾಜಿ ಸೇವಾ ಸಮಿತಿಯ ಬಾಲಾಜಿ ಮಂದಿರದಲ್ಲಿ  ಶ್ರೀ ಸತ್ಯಮಾರುತಿ ವ್ರತವನ್ನು  ಸಮಾಜದ ಎಲ್ಲ ಮಕ್ಕಳ ಒಳಿತಿಗಾಗಿ ಆಚರಿಸಲಾಯಿತು.

ವಡಾಲಾ ಶ್ರೀ ರಾಮ ಮಂದಿರದ  ವೇದಮೂರ್ತಿ ಅನಂತ ಸುಧಾಮ ಭಟ್‌ ಮಾರ್ಗದರ್ಶನ ಹಾಗೂ ಸಮಿತಿಯ ವೇ|ಮೂ| ಗಿರಿಧರ್‌ ಭಟ್‌  ಉಪಸ್ಥಿತಿಯಲ್ಲಿ  ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ಸಮಿತಿಯ ಉಪಾಧ್ಯಕ್ಷ ಕಟಪಾಡಿ ಗಣೇಶ್‌ ಕಾಮತ್‌ ಮತ್ತು ಗೀತಾ ಕಾಮತ್‌ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.

ಸಮಿತಿಯ ಯುವ ವಿಭಾಗದ ವತಿಯಿಂದ ಭಜನಾ ಕಾರ್ಯಕ್ರಮ ಸುಶ್ರಾವ್ಯವಾಗಿ ಜರಗಿತು. ಅವರು ಕನ್ನಡ, ಕೊಂಕಣಿ, ಮರಾಠಿ ಮತ್ತು ಹಿಂದಿ ಭಜನೆಗಳನ್ನು ಹಾಡಿ ನೆರೆದಿದ್ದ ನೂರಾರು ಸಭಿಕರ ಮನ ಸೆಳೆದರು. ಹಾರ್ಮೋನಿಯಂನಲ್ಲಿ ಪ್ರಕಾಶ್‌ ಪ್ರಭು, ವಿನಾಯಕ ಪ್ರಭು, ತಬಲಾದಲ್ಲಿ ರಾಜೇಶ್‌ ಪೈ, ಅಮೇಯ ಪೈ, ಪಖ್ವಾಜ್‌ನಲ್ಲಿ ಪ್ರಸಾದ್‌ ಪ್ರಭು ಮತ್ತು ಗಣೇಶ್‌ ಪ್ರಭು ಸಹಕರಿಸಿದರು.

ತದನಂತರ ಶ್ರೀ ಸತ್ಯಮಾರುತಿ ದೇವರಿಗೆ ಹಾಗೂ ಆರಾಧ್ಯ ದೇವರಾದ ವೆಂಕಟರಮಣ ಮತ್ತು ಇತರ ಪರಿವಾರ ದೇವರಿಗೆ ಆರತಿ ಬೆಳಗಿಸಲಾಯಿತು. ಬೆಳ್ಳಿಯ ವೀರ ಮಾರುತಿ ಮೂರ್ತಿ ಅನಂತ್‌ ಭಟ್‌ ಅವರ ಹಸ್ತದಿಂದ ಪೂಜಿಸಿ ಸಮಿತಿಯ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸ ಲಾಯಿತು. ಈ ಮೂರ್ತಿ ಯನ್ನು ಅನಂತ್‌ ಭಟ್‌ ಪರಿವಾರದಿಂದ ಪ್ರಾಯೋಜಿಸಲಾಯಿತು. 

ಮಹಾಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆಯನ್ನು ಸಮಿತಿಯ ಉಪ ಕೋಶಾಧಿಕಾರಿ ಗಣೇಶ್‌ ಲಕ್ಷ್ಮಣ್‌ ಪೈ ಪರಿವಾರದಿಂದ ಆಯೋಜಿಸಲಾಯಿತು.

ಏತನ್ಮಧ್ಯೆ, ಕಾರ್ಯಕ್ರಮಕ್ಕೆ  ಪರಿವಾರ ಸಮೇತ ಭೇಟಿ ನೀಡಿದ ವಸಾಯಿ ವಲಯದ ಪಾಲ^ರ್‌ ಜಿಲ್ಲೆಯ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ರಾಜ್‌ ತಿಲಕ್‌ ರೌಶನ್‌ ಅವರನ್ನು  ಸಮಿತಿಯ ವತಿಯಿಂದ  ಅಧ್ಯಕ್ಷ ತಾರನಾಥ ಪೈ, ಸಂಚಾಲಕ ದೇವೇಂದ್ರ ಭಕ್‌¤ ಮತ್ತು ಕಾರ್ಯ ದರ್ಶಿ ಪುರುಷೋತ್ತಮ ಶೆಣೈ ಅವರು ಶಾಲು ಹೊದಿಸಿ, ಫಲ ಪುಷ್ಪ ಮತ್ತು ಬಾಲಾಜಿ ವಿಗ್ರಹ ನೀಡಿ ಸಮ್ಮಾನಿಸಿದರು. ಉದ್ಯಮಿ ನಿಟ್ಟೆ ವಿಜಯಾನಂದ ಶೆಣೈ ಮತ್ತಿತರರು ಉಪಸ್ಥಿತರಿದ್ದರು.

ಈ ವಿಶೇಷ ಪೂಜೆಗೆ ಸತ್ಯಮಾರುತಿ ಮತ್ತು ಬಾಲಾಜಿ ಮಂಟಪವನ್ನು ಅಲಂಕರಿಸಲು ವೀಣಾ ಜಿ. ಪೈ ಮತ್ತು ಮಕ್ಕಳು ಕುರ್ಲಾ ಇವರ ವತಿಯಿಂದ ಹೂವಿನ ಸೇವೆಯನ್ನು ಪ್ರಾಯೋಜಿಸಲಾಯಿತು.

ಸಮಿತಿಯ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗದ ಪದಾಧಿಕಾರಿಗಳು ಹಾಗೂ ಎಲ್ಲಾ ಸದಸ್ಯರ ಉಸ್ತು ವಾರಿಯಲ್ಲಿ  ಧಾರ್ಮಿಕ ಕಾರ್ಯಕ್ರಮವು ಯಶಸ್ವಿಯಾಗಿ ಜರಗಿತು. ವೇ|ಮೂ| ಅನಂತ್‌ ಭಟ್‌, ವಿನಾಯಕ ಎಚ್‌. ಪೈ, ವಿಜಯೇಂದ್ರ ಪ್ರಭು ಮತ್ತು ಶ್ರೀಪತಿ ಭಟ್‌ ನೇತೃತ್ವದಲ್ಲಿ ಅಲಂಕರಿಸಿದ ಸತ್ಯಮಾರುತಿ ಮತ್ತು ಬಾಲಾಜಿ ಮಂಟಪವು  ಸಭಿಕರ ಮೆಚ್ಚುಗೆಗೆ ಪಾತ್ರವಾಯಿತು.  ಮುಂಬಯಿ, ವಸಾಯಿ ಪರಿ ಸರದ ಸಮಾಜದ‌ವರು  ಭಾಗವಹಿಸಿದ್ದರು. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.