ವಸಾಯಿರೋಡ್ ಜಿಎಸ್ಬಿ ಶಾಂತಿಧಾಮ ಸೇವಾ ಸಮಿತಿಯಲ್ಲಿ ಪ್ರತಿಷ್ಠಾ ವರ್ಧಂತಿ
Team Udayavani, May 10, 2019, 2:48 PM IST
ಮುಂಬಯಿ: ವಸಾಯಿರೋಡ್ ಪಶ್ಚಿಮದ ಗೌಡ ಸಾರಸ್ವತ ಬ್ರಾಹ್ಮಣ ಜಿಎಸ್ಬಿ ಸಮಾಜದವರ ಶಾಂತಿಧಾಮ ಸೇವಾ ಸಮಿತಿಯಲ್ಲಿ 8ನೇ ವಾರ್ಷಿಕ ಪ್ರತಿಷ್ಠಾ ವರ್ಧಂತಿ ಮಹೋತ್ಸವವು ಮೇ 6ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿ ಯಾಗಿ ನಡೆಯಿತು.
ಪ್ರತಿಷ್ಠಾ ವರ್ಧಂತಿ ಅಂಗವಾಗಿ ಶ್ರೀ ಸತ್ಯನಾರಾಯಣ ಪೂಜೆಯು ವೇದಮೂರ್ತಿ ಗಿರಿಧರ ಭಟ್ ಅವರ ಮಾರ್ಗದರ್ಶನದಲ್ಲಿ ಸಮಿತಿಯ ವಿಶ್ವಸ್ತರಾದ ಲಕ್ಷ್ಮೀನರಸಿಂಹ ಪ್ರಭು ಮತ್ತು ನರಸಿಂಹ ಅನಂತ ಪ್ರಭು ಅವರು ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಸಮಿತಿ ಯವರಿಂದ ಭಜನಾ ಕಾರ್ಯಕ್ರಮ ಜರಗಿತು.
ಕೊಂಕಣಿ, ಮರಾಠಿ, ಕನ್ನಡ, ಹಿಂದಿ ಭಜನೆಗಳನ್ನು ಹಾಡಿ ನೆರೆದ ಭಕ್ತಾದಿಗಳನ್ನು ರಂಜಿಸಿದರು. ಹಿಮ್ಮೇಳದಲ್ಲಿ ಹಾರ್ಮೋನಿಯಂನಲ್ಲಿ ವಿನಾಯಕ ವಸಂತ ಪ್ರಭು, ತಬಲಾದಲ್ಲಿ ಅಭಿಜಿತ್ ಪ್ರಭು, ಪಖ್ವಾಜ್ನಲ್ಲಿ ಸನತ್ ಕುಮಾರ್, ವಸಂತ ಪ್ರಭು ಅವರು ಸಹಕರಿಸಿದರು. ಅನಂತರ ಶ್ರೀ ಸತ್ಯನಾರಾಯಣ ದೇವರಿಗೆ ಮತ್ತು ಇತರ ಪರಿವಾರ ದೇವರಿಗೆ ಮಹಾಮಂಗಳಾರತಿ ನಡೆದು ಪ್ರಸಾದ ವಿತರಿಸಲಾಯಿತು.
ಅನ್ನಸಂತರ್ಪಣೆ
ಸಮಿತಿಯವರಿಂದ ಬೆಳಗ್ಗೆ ಫಲಾಹಾರ ಮತ್ತು ಪ್ರಸಾದ ರೂಪದಲ್ಲಿ ಮಧ್ಯಾಹ್ನ ಅನ್ನ ಸಂತರ್ಪಣೆ ನೆರವೇರಿತು. ಸಮಿತಿಯ ವಿಶ್ವಸ್ತರಾದ ಅಭಿಜಿತ್ ನರಸಿಂಹ ಪ್ರಭು ಅವರ ನೇತೃತ್ವದಲ್ಲಿ ಅಲಂಕರಿಸಿದ ಶ್ರೀ ಸತ್ಯನಾರಾಯಣ ದೇವರ ಮಂಟಪವು ಭಕ್ತಾದಿಗಳನ್ನು ಆಕರ್ಷಿಸಿತು.
ಧಾರ್ಮಿಕ ಕಾರ್ಯಕ್ರಮದಲ್ಲಿ ಜಿಎಸ್ಬಿ ಸಮಾಜ ಬಾಂಧವರು, ಭಕ್ತಾದಿಗಳು, ಸ್ಥಳೀಯರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ