ವಸಾಯಿರೋಡ್ ಜಿಎಸ್ಬಿ ಶಾಂತಿಧಾಮ ಸೇವಾ ಸಮಿತಿ: ಮಹಾಶಿವರಾತ್ರಿ
Team Udayavani, Mar 7, 2019, 12:50 AM IST
ಮುಂಬಯಿ: ವಸಾಯಿರೋಡ್ ಪಶ್ಚಿಮದ ಗೌಡ ಸಾರಸ್ವತ ಬ್ರಾಹ್ಮಣ ಜಿಎಸ್ಬಿ ಸಮಾಜದವರ ಶಾಂತಿಧಾಮ ಸೇವಾ ಸಮಿತಿಯಲ್ಲಿ ಮಾ. 4ರಂದು ಮಹಾಶಿವರಾತ್ರಿ ಉತ್ಸವವು ಅದ್ದೂರಿಯಾಗಿ ನಡೆಯಿತು.
ಪೂರ್ವಾಹ್ನ ಶಿವನ ಲಿಂಗಕ್ಕೆ ಭಸ್ಮಲೇಪನ, ಬಿಲ್ವಾರ್ಚನೆ, ಲಿಂಗಾಷ್ಟಕ, ಅಷ್ಟೋತ್ತರ, ವಿವಿಧ ಬಗೆಯ ಅಭಿಷೇಕ, ಸಮಿತಿಯ ವಿಶ್ವಸ್ತರಾದ ಅಭಿಜಿತ್ ನರಸಿಂಹ ಪ್ರಭು ಅವರ ಹಸ್ತದಿಂದ ಜರಗಿತು. ಸಂಜೆ ರುದ್ರಾಭಿಷೇಕ, ಪಂಚಾಮೃತ, ಹಾಲು, ಕಬ್ಬಿನ ರಸ, ಸೀಯಾಳ ಅಭಿಷೇಕ, ಬಿಲ್ವಾರ್ಚನೆ ಮತ್ತು ವಿವಿಧ ಪೂಜೆ ಸಮಿತಿಯ ವಿಶ್ವಸ್ತರಾದ ನರಸಿಂಹ ಅನಂತ ಪ್ರಭು ಅವರ ಹಸ್ತದಿಂದ ಜರಗಿತು.
ಸಮಿತಿಯ ವಿಶ್ವಸ್ತರಾದ ಲಕ್ಷ್ಮೀ ನರಸಿಂಹ ಪ್ರಭು ಅವರು ಶಿವನ ಅಷ್ಟೋತ್ತರ, ಮಹಾ ಮೃತ್ಯುಂಜಯ ಮಂತ್ರವನ್ನು ಸಾಮೂಹಿಕವಾಗಿ ಪಠಿಸಿ ಶಿವ
ರಾತ್ರಿಯ ಮಹಿಮೆಯ ಬಗ್ಗೆ ಭಕ್ತಾದಿಗಳಿಗೆ ವಿಸ್ತಾರವಾಗಿ ಹೇಳಿದರು. ಸಮಿತಿಯವರಿಂದ ಭಜನ ಕಾರ್ಯಕ್ರಮ ನಡೆಯಿತು.
ಮಂಡಳಿಯ ಸದಸ್ಯರು, ಶಿವನ ಭಜನೆಗಳನ್ನು ಹಾಡಿದರು. ತಬಲಾದಲ್ಲಿ ಅಭಿಜಿತ್ ಪ್ರಭು, ಪಖ್ವಾಜ್ನಲ್ಲಿ ಸನತ್ ಕುಮಾರ್ ಪ್ರಭು ಸಹಕರಿಸಿದರು. ಶಿವನ ಪ್ರತಿಮೆಗೆ ಮತ್ತು ಇತರ ಪರಿವಾರ ದೇವರಿಗೆ ಆರತಿ ಬೆಳಗಿಸಲಾಯಿತು. ಪ್ರಸಾದ ರೂಪದಲ್ಲಿ ಮಧ್ಯಾಹ್ನ ಮತ್ತು ಸಂಜೆ ಫಲಾಹಾರದ ವ್ಯವಸ್ಥೆ ಯನ್ನು ಆಯೋಜಿಸಲಾಗಿತ್ತು.
ಅಭಿಜಿತ್ ಪ್ರಭು ಅವರನೇತೃತ್ವದಲ್ಲಿ ಅಲಂಕರಿಸಿದ ಶಿವನ ಮಂಟಪ ನೆರೆದ ಭಕ್ತಾದಿಗಳನ್ನು ಆಕರ್ಷಿಸಿತು. ಕಾರ್ಯಕ್ರಮದಲ್ಲಿ ಜಿಎಸ್ಬಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ