ವಸಾಯಿ ಶ್ರೀ ಮಣಿಕಂಠ ಸೇವಾ ಸಮಿತಿ: ಮಹಾಪೂಜೆ


Team Udayavani, Dec 6, 2018, 4:56 PM IST

0412mum12.jpg

ಮುಂಬಯಿ: ವಸಾಯಿ ಪರಿಸರದ ಧಾರ್ಮಿಕ ಚಿಂತಕರಿಂದ ಸ್ಥಾಪಿಸಲ್ಪಟ್ಟ ಶ್ರೀ ಮಣಿಕಂಠ ಸೇವಾ ಸಮಿತಿಯ 17 ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆಯು ಡಿ. 2ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಸಾಯಿ ಪಶ್ಚಿಮದ ಸಾಯಿನಗರದ ಸಾಯಿನಗರ ರಂಗಮಂಚದಲ್ಲಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಮುಂಜಾನೆ 6.30ರಿಂದ ಮೂಡುಬಿದಿರೆಯ ಶಿವಾನಂದ ಗುರುಸ್ವಾಮಿ ಅವರ ನೇತೃತ್ವದಲ್ಲಿ ಅಯ್ಯಪ್ಪ ವ್ರತ ಧಾರಿಗಳ ಉಪಸ್ಥಿತಿಯಲ್ಲಿ ಪ್ರತಿಷ್ಠಾಪನೆ, ಪಡಿಪೂಜೆ, ಶರಣು ಘೋಷ, ಮಧ್ಯಾಹ್ನ 12.30ರಿಂದ ಅಯ್ಯಪ್ಪ ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ಜರಗಿತು.

ಪುಷ್ಪಾಲಂಕೃತಗೊಂಡ ಬೃಹತ್‌ ರಂಗಮಂಟಪದಲ್ಲಿ ನಿರ್ಮಿಸಲಾಗಿರುವ ಅಯ್ಯಪ್ಪ ಸ್ವಾಮಿಯ ಪ್ರತಿ ಬಿಂಬಕ್ಕೆ ವಿವಿಧ ಪೂಜೆಗಳನ್ನು ನೆರವೇರಿಸಿದ ರಮೇಶ್‌ ಗುರುಸ್ವಾಮಿ ಅವರು ಗಣಪತಿ  ಹಾಗೂ ಅಲಂಕೃತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರಿಗೆ ವಿಶೇಷ ಮಂಗಳಾರತಿಗೈದರು. ಬೆಳಗ್ಗೆ 9.30ರಿಂದ ಮಹಾಮಂಗಳಾರತಿಯವರೆಗೆ ಗಾಯಕ ಪನ್ವೇಲ್‌ ಶಿಬರೂರು ಸುರೇಶ್‌ ಶೆಟ್ಟಿ ಮತ್ತು ಬಳಗದವರಿಂದ ನಿರಂತರ ಭಕ್ತಿಗಾಯನ ಕಾರ್ಯಕ್ರಮವು ನೆರೆದ ಭಕ್ತಾದಿಗಳನ್ನು ರಂಜಿಸಿತು.

ಅಯ್ಯಪ್ಪ ಸ್ವಾಮಿಗೆ ಮಹಾಮಂಗಳಾರತಿ ಮುಗಿದ ಬಳಿಕ ಉತ್ತರ ಪೂಜೆಯನ್ನು ನಡೆಸಲಾಯಿತು. ಇದೇ ಸಂದರ್ಭದಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ರಮೇಶ್‌ ಗುರುಸ್ವಾಮಿ ಅವರು, ಕಲಿಯುಗದಲ್ಲಿ ಅಯ್ಯಪ್ಪನನ್ನು ಪೂಜಿಸುವ ಮೂಲಕ ಜೀವನ-ಸಮಸ್ಯೆಗಳು ದೂರವಾಗುತ್ತವೆ. ಪಂಪಾತೀರ ಪುಣ್ಯಭೂಮಿ ವ್ರತಧಾರಿಗಳಿಗೆ ಪರಮಪಾವನವಾಗಿದೆ. ಅಂತಹ ಕ್ಷೇತ್ರವಿಂದು ವಿವಾದಕ್ಕೀಡಾದರೂ ನಮ್ಮ ಭಕ್ತಿ, ಶ್ರದ್ಧೆಯಲ್ಲಿ ಯಾವತ್ತೂ ಬದಲಾವಣೆಯನ್ನು ತರದೆ, ಶುದ್ಧ ಮನಸ್ಸಿನಿಂದ ಹರಿಹರ ಸುತನನ್ನು ಪ್ರಾರ್ಥಿಸುವ ದೃಢ ಸಂಕಲ್ಪ ಎಲ್ಲ ವ್ರತಧಾರಿಗಳಲ್ಲಿ ಇರಬೇಕು. ಭಕ್ತಿಯ ಮೋಕ್ಷದಲ್ಲಿ ಮಾತ್ರ ದೇವರನ್ನು ಕಾಣಲು ಸಾಧ್ಯ. ಕಠಿನ ಶ್ರದ್ಧೆ, ಭಕ್ತಿಯಲ್ಲಿ ತೊಡಗಿರುವ ಗುರುಸ್ವಾಮಿಗಳಿಂದ ಧಾರ್ಮಿಕ ಚಿಂತನೆ ಮುಂದಿನ ಪೀಳಿಗೆಗೂ ಮುಡಿಪಾಗಿರಲಿ ಎಂದು ಹೇಳಿ ಆಶೀರ್ವದಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ದಾನಿಗಳು, ಸಮಾಜ ಸೇವಕರು, ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು. ಗೌರವಾಧ್ಯಕ್ಷ ಕರ್ನೂರು ಶಂಕರ ಆಳ್ವ, ಅಧ್ಯಕ್ಷ ಯಶೋಧರ ವಿ. ಕೋಟ್ಯಾನ್‌, ಉಪಾಧ್ಯಕ್ಷರಾದ ದಿನೇಶ್‌ ಹೆಗ್ಡೆ ಎಕ್ಕಾರು, ಗೌರವ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ, ಕೋಶಾಧಿಕಾರಿ ಹೇಮಂತ ಪಾರೇಖ್‌, ಜತೆ ಕೋಶಾಧಿಕಾರಿ ಸುಧೀರ್‌ ಸಾಲ್ಯಾನ್‌, ಪೂಜಾ ಸಮಿತಿಯ ಸಲಹೆಗಾರರುಗಳಾದ ಭೋಜ ಸಾಲ್ಯಾನ್‌ ಅವರು ದಿನಪೂರ್ತಿ ನಡೆದ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಸ್ಥಳೀಯ ಅತಿಥಿ-ಗಣ್ಯರನ್ನು ಪ್ರಸಾದವನ್ನಿತ್ತು ಗೌರವಿಸಲಾಯಿತು. ಮಧ್ಯಾಹ್ನ 1ರಿಂದ ನಡೆದ ಅನ್ನಸಂತರ್ಪಣೆಯು ಅಪರಾಹ್ನ 4ರವರೆಗೆ ಮುಂದುವರಿದಿದ್ದು, ಸಾವಿರಾರು ಭಕ್ತಾದಿಗಳು, ತುಳು- ಕನ್ನಡಿಗರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಗುರುಸ್ವಾಮಿ ಉಮೇಶ್‌ ಕಾಂತಾವರ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ಚಿತ್ರ-ವರದಿ : ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.