ವಸಾಯಿ ತಾಲೂಕು ಮೊಗವೀರ ಸಂಘ: ಗುರುಪೂರ್ಣಿಮೆ
Team Udayavani, Jul 31, 2018, 12:31 PM IST
ಮುಂಬಯಿ: ವಸಾಯಿ ತಾಲೂಕು ಮೊಗವೀರ ಸಂಘದ ವತಿಯಿಂದ ಗುರುಪೂರ್ಣಿಮೆ ಆಚರಣೆಯು ಜು. 27 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಘದ ಕಚೇರಿಯಲ್ಲಿ ನಡೆಯಿತು.
ಧಾರ್ಮಿಕ ಕಾರ್ಯಕ್ರಮವಾಗಿ ಸದಸ್ಯರು ಹಾಗೂ ವಸಾಯಿ ಸ್ಥಳೀಯ ನಾಗರಿಕರು ಒಂದಾಗಿ ಶ್ರೀ ನಿತ್ಯಾನಂದ ಸ್ವಾಮೀಜಿಯವರ ಭಾವಚಿತ್ರವನ್ನು ವಿಶೇಷವಾಗಿ ಆಲಂಕರಿಸಿ ಗುರು ದೇವರ ಸ್ತುತಿಯೊಂದಿಗೆ ಸುಮಾರು ಮೂರು ತಾಸುಗಳ ಕಾಲ ಭಜನ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ವಸಾಯಿ ತಾಲೂಕು ಮೊಗ ವೀರ ಸಂಘವು 2010 ರಲ್ಲಿ ಗುರು ಪೂರ್ಣಿಮೆಯ ದಿನದಂದು ಸ್ಥಾಪನೆ ಗೊಂಡಿದ್ದು, ಪ್ರತೀ ವರ್ಷ ಆ ದಿನವನ್ನು ಸರ್ವ ಸದಸ್ಯರು ಒಗ್ಗಟ್ಟಾಗಿ ಉತ್ಸಾಹದಿಂದ ಸಂಘದ ಸ್ಥಾಪನಾ ದಿನಾಚರಣೆಯನ್ನಾಗಿ ಆಚರಿಸುತ್ತಿ ದ್ದಾರೆ. ಕಳೆದ 8 ವರ್ಷಗಳಿಂದ ಶ್ರೀ ಗುರುಗಳ ಅನುಗ್ರಹದಿಂದ ಸಂಘದ ಕಾರ್ಯಕ್ರಮಗಳು ಯಶಸ್ವಿಯಾಗಿ ಜರಗುತ್ತಿದ್ದು, ವಸಾಯಿ ಪರಿಸರದಲ್ಲಿ ಮೊಗವೀರ ಸಂಘಟನೆಯು ಹಲವಾರು ಸಮಾಜಮುಖೀ ಸೇವೆಯೊಂದಿಗೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿಕೊಂಡು ಬಂದಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿ, ಭಜನ ಕಾರ್ಯಕ್ರಮದ ಕೊನೆಯಲ್ಲಿ ಸಂಘದ ಸರ್ವತೋಮುಖ ಶ್ರೇಯಸ್ಸಿಗಾಗಿ ಪ್ರಾರ್ಥನೆಗೈಯಲಾಯಿತು.
ಆನಂತರ ಸಂಘದ ಸ್ಥಾಪಕಾಧ್ಯಕ್ಷ ಚಂದ್ರಶೇಖರ ಪುತ್ರನ್ ಅವರು ಮಾತನಾಡಿ, ಮುಂದಿನ ದಿನ ಗಳಲ್ಲಿ ಸಂಘವು ವರ್ಷಂಪ್ರತಿ ಆಚರಿಸಿಕೊಂಡು ಬರುವಂತಹ ಆಟಿಡೊಂಜಿ ದಿನ ಕಾರ್ಯಕ್ರಮವು ಅರ್ಥವತ್ತಾಗಿ ನಡೆದುಕೊಂಡು ಬಂದಿದ್ದು, ಈ ಯಶಸ್ವಿ ಕಾರ್ಯಕ್ರಮವು ಆ. 5 ರಂದು ನಡೆಯಲಿದೆ.
ಸರ್ವ ಸದಸ್ಯರ ಸಹಕಾರದೊಂದಿಗೆ ಅರ್ಥಪೂರ್ಣವಾಗಿ ಜರಗಲಿರುವ ಈ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರವಿರಲಿ ಎಂದರು.
ಸಂಸ್ಥೆಯ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸಮಾಜ ಬಾಂಧವರು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಚಿತ್ರ-ವರದಿ: ರಮೇಶ್ ಉದ್ಯಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ