ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ  ಸ್ವಾಮೀಜಿ

ಮುಂಬಯಿ ಮಠದ ಶಾಖೆಗೆ ಕುಕ್ಕೆ ಸುಬ್ರಹ್ಮಣ್ಯ ಮಠಾಧೀಶರ ಆಗಮನ

Team Udayavani, Jun 27, 2022, 11:22 AM IST

ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ  ಸ್ವಾಮೀಜಿ

ಮುಂಬಯಿ: ಭಾರತೀಯ ಮತ್ತು ಸನಾತನ ಧರ್ಮ ಸಂಸ್ಕೃತಿಯಲ್ಲಿ ಸಿಗುವ ನೆಮ್ಮ ವಿದೇಶಿಯ ಸಂಸ್ಕೃತಿಯಲ್ಲಿ ಸಿಗುವುದಿಲ್ಲ.  ನಮ್ಮ ಯುವಜನತೆ ಇದನ್ನು ಅರ್ಥೈಸಿ ತಾತ್ಕಾಲಿಕ ಸುಖಕ್ಕೆ ಮಾರು ಹೋಗದೆ ಶಾಶ್ವತ ಸುಖಶಾಂತಿ ಅನುಭವಿಸುವಂತಾಗಬೇಕು. ಭಾರತೀಯ ಪರಂಪರೆ ಅನುಸರಿಸಿ ಬಾಳಿದರೆ ಮಾತ್ರ ಪರಂಪರಾಗತ ಸಂಸ್ಕೃತಿಯ ಮೂಲ ನೆಮ್ಮದಿ ಸಿಗುತ್ತದೆ. ತಾತ್ಕಾಲಿಕ ನೆಮ್ಮದಿಯ ಆಕರ್ಷಣೆಗೆ ಒಳಗಾಗಿ ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳಬಾರದು. ಪ್ರಸ್ತುತ ದಾಂಪತ್ಯ ವಿಚ್ಛೇದನೆಗಳಿಗೂ ಸಂಸ್ಕಾರದ ಕೊರತೆಯೇ ಕಾರಣ. ಸಂಸ್ಕೃತಿ ಹಾಗೂ ಧರ್ಮದ ಮೇಲಿನ ಗೌರವದ ಕೊರತೆ ದುರಂತವಾಗಿದ್ದು, ಮೂಲ ಸಂಸ್ಕೃತಿ ರೂಢಿಸಿ ಬದುಕು ಬಂಗಾರವಾಗಿಸಿ ಎಂದು ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾಸಂಸ್ಥಾನಮ್‌, ಶ್ರೀ ಸಂಪುಟ ನರಸಿಂಹ ಸ್ವಾಮಿ, ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ  ಮಠದ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.

ಮೂರು ದಿನಗಳ ಮುಂಬಯಿ ಪ್ರವಾಸದಲ್ಲಿರುವ ಶ್ರೀಪಾದರು ರವಿವಾರ ಚೆಂಬೂರು ಪಶ್ಚಿಮದ ಛೆಡ್ಡಾನಗರದ ಶ್ರೀ ಸುಬ್ರಹ್ಮಣ್ಯ ಮಠದ ಶಾಖೆಗೆ ಆಗಮಿಸಿ, ಮಠದ ನಾಗ ಸುಬ್ರಹ್ಮಣ್ಯ ದೇವರ ಸನ್ನಿಧಿ ಹಾಗೂ ಶ್ರೀ ದೇವರ ಮಂಟಪದಲ್ಲಿ ಪಟ್ಟದ ಶ್ರೀ ಸಂಪುಟ ನರಸಿಂಹ ದೇವರಿಗೆ ಪೂಜೆ ನೆರವೇರಿಸಿ ಭಕ್ತರಿಗೆ ಪ್ರಸಾದ, ಮಂತ್ರಾಕ್ಷತೆಯನ್ನಿತ್ತು ಹರಸಿದರು.

ಧರ್ಮದಿಂದ ದೂರ ಸರಿಯುವಂತದ್ದು ಮತ್ತು ಪಕ್ವತೆ ಬಂದಾಗ ಧರ್ಮದೊಂದಿಗೆ ಸಾಗುತ್ತಿರುವುದು ಕಾಣಬಹುದು. ಇಂತಹ ಪರಿವರ್ತನೆಗೆ ಮಠಾಧಿಪತಿಗಳು, ಗುರು ಹಿರಿಯರು, ಧಾರ್ಮಿಕ ಧುರೀಣರಿಗೆ ದೊಡ್ಡ ಹೊಣೆಗಾರಿಕೆಯಿದೆ. ಭಾರತೀಯ ಸಂಸ್ಕೃತಿ ಬೇಕೆಂದು ತಿಳಿಸುವ ಜವಾಬ್ದಾರಿ ಎಲ್ಲರ ಹೊಣೆಗಾರಿಕೆ. ಆ ನಿಟ್ಟಿನಲ್ಲಿ ಪ್ರಯತ್ನ ಆಗಬೇಕು ಮತ್ತು ಯುವಜನತೆ ಕೂಡಾ ಈ ಬಗ್ಗೆ ಹೆಚ್ಚಿನ ಗಮನ ಕೊಡಬೇಕಾಗಿದೆ. ಹಿರಿಯರು, ಅನುಭವಿಗಳ ಮಾತು ಕೇಳಿ, ಅನುಭವಿಗಳು ಪರಂಪರೆಯಲ್ಲಿ ಆಚರಿಸಿಕೊಂಡು ಬಂದಿರುವುದನ್ನು ರೂಢಿಸಿ ಮುಂದಿನ ಪೀಳಿಗೆಗೂ ಅದನ್ನು ಆಚರಿಸಲು ಪ್ರೇರಕರಾಗುವ ಹೊಣೆಗಾರಿಕೆಯನ್ನು ಯುವಜನತೆ ಒಪ್ಪಿ ಬಾಳಿದರೆ ಮಾತ್ರ ಅವರ ಜೀವನದಲ್ಲಿ ನಿರಂತರ ಸುಖಶಾಂತಿ, ನೆಮ್ಮದಿ ಸಿಗುತ್ತದೆ. ದುಡ್ಡಿನ ಹಿಂದೆ ಹೋದರೆ ತಾತ್ಕಾಲಿಕ ನೆಮ್ಮದಿ ಸಿಕ್ಕಿ ಕೊನೆಗಳಿಗೆಯಲ್ಲಿ ವೃದ್ಧಾಶ್ರಮ ಅಥವಾ ನೆಮ್ಮದಿಯಿಲ್ಲದ ತಾಣಗಳಲ್ಲಿ ಸೇರಬೇಕಾಗುತ್ತದೆ. ಆದ್ದರಿಂದ ಪರಕೀಯ ಸಂಸ್ಕೃತಿ ಮೋಹ ಭಾರತದ ಭವಿಷ್ಯತ್ತಿಗೂ ಒಳ್ಳೆಯದ್ದಲ್ಲ ಎಂದು ಶ್ರೀಪಾದರು ತಿಳಿಸಿದರು.

ಕೊರೊನಾ ಕಾಲದ ಅನಂತರ ಒಂದಿಷ್ಟು ಜನರಲ್ಲಿ ಜೀವನದ ಸತ್ಯಾಸತ್ಯತೆ ಅರಿವಾಗಿದೆ. ಕೊನೆ ಗಳಿಗೆಯಲ್ಲಿ ಯಾರೂ ನಮ್ಮ ಹತ್ತಿರ ಇರುವುದಿಲ್ಲ ಬದಲಾಗಿ ದೇವರು ಮಾತ್ರ ನಮ್ಮೊಂದಿಗೆ ಇರುತ್ತಾರೆ ಅನ್ನುವ ಸತ್ಯಾನುಭವ ಆಗಿದೆ.  ಬದುಕು ಇದ್ದಷ್ಟು ದಿವಸ ಜತೆಗೆ ಬಾಳಬೇಕೆಂಬ ಆಶಯ ಮೂಡಿದೆ.  ಕೊರೊನಾ ಮನುಷ್ಯರಿಗೆ ಬದಲಾವಣೆಯ ದೊಡ್ಡ ಪಾಠ ಕಲಿಸಿದೆ. ಅತ್ಯಂತ ಕ್ಲಿಷ್ಟಕರ ಜೀವನ ಹೇಗೆ ಕಳೆಯಬೇಕು ಅನ್ನುವುದನ್ನೂ ತಿಳಿಸಿದೆ. ಎಂತಹ ವ್ಯವಸ್ಥೆಗೂ ಹೊಂದಿಕೊಂಡು ಬಾಳುವ ಅನಿವಾರ್ಯ ಕೊರೊನಾದ ಸಮಯ ಬೋಧಿಸಿದೆ ಎಂದು ತಿಳಿಸಿದರು.

ವಿವಿಧ ಪೂಜಾವಿಧಿ :

ಕುಂಜರಾಹು ಸಂಧಿ ಪೂಜೆ, ನವಗ್ರಹ ಹೋಮ, ಮಾರ್ಕಂಡೇಯ ಹೋಮ, ಪವಮಾನ ಹೋಮ, ಮೃತ್ಯುಂಜಯ ಹೋಮ ಇತ್ಯಾದಿಗಳು ನೆರವೇರಿದವು. ಪುರೋಹಿತರಾದ ವೇ| ಮೂ| ಕೃಷ್ಣರಾಜ ತಂತ್ರಿ, ಅಶೋಕ ಭಟ್‌, ರಾಮ ಪುರೋಹಿತ, ವಾಸುದೇವ ವೈಲಾಯ, ಶ್ರೀಧರ್‌ ಭಟ್‌, ನವೀನ್‌ ಭಟ್‌, ಮಠದ ವ್ಯವಸ್ಥಾಪಕ ರವಿರಾಜ್‌ ಭಟ್‌ ಪೂಜಾವಿಧಿಗಳನ್ನು ನೆರವೇರಿಸಿದರು. ಉದ್ಯಮಿ ರಾಜೇಶ್‌ ರಾವ್‌ ವಿದ್ಯಾವಿಹಾರ್‌ ಸಹಿತ ಅಪಾರ ಸಂಖ್ಯೆಯ ಭಕ್ತರು ಪೂಜಾವಿಧಿಗಳಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.

ಅವಿಭಜಿತ ದ.ಕ. ಜಿಲ್ಲೆಯವರು ಕ್ಲಿಷ್ಟಕರ ಸನ್ನಿವೇಶದಲ್ಲಿ ಮುಂಬಯಿಯಂತಹ ಮಹಾನಗರಕ್ಕೆ ಬಂದಿದ್ದಾರೆ. ಮುಂಬಾದೇವಿ, ಮಹಾಲಕ್ಷ್ಮೀ ಅನುಗ್ರಹದಿಂದ ಉ¤ಮ ಜೀವನ ಸಾಗಿಸಲು ಕರ್ಮಭೂಮಿ ಅವಕಾಶ ಮಾಡಿಕೊಟ್ಟಿದೆ. ಈ ಭೂಮಿ ಮೇಲೆ ಅಪಾರ ಅಭಿಮಾನ ಜತೆಗೆ ಮಾತೃಭೂಮಿ ಮೇಲೂ ಅನನ್ಯ ಅಭಿಮಾನ, ಪ್ರಾದೇಶಿಕ ಭಾಷೆಯಲ್ಲಿ  ಗೌರವ ಇಟ್ಟುಕೊಂಡು ತೌಳವ ಸಂಸ್ಕೃತಿ ರೂಢಿಸಿಕೊಂಡು ಬದುಕುತ್ತಿರುವುದು ಅಭಿನಂದನೀಯ. ಭಾವೀ ಜನಾಂಗಕ್ಕೆ ತೌಳವ ಭಾಷೆ, ಸಂಸ್ಕೃತಿ ಮೇಲೆ ಮಿಡಿತ ತಪ್ಪಿಹೋಗದಂತೆ ಬಾಳುವುದರ ಜತೆಗೆ ಭಾರತೀಯ ಸಂಸ್ಕೃತಿ, ಸನಾತನ ಧರ್ಮ ಸಂಸ್ಕೃತಿ ಎಲ್ಲವನ್ನೂ ಮೇಳೈಸಿಕೊಂಡು ಅಪ್ಪಟ ಭಾರತೀಯರಾಗಿ ಬಾಳಬೇಕು.. ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮಠ

ಚಿತ್ರ – ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.