ವಿಕ್ರೋಲಿ ಮೆಡಿಕೋಸ್ ಅಸೋಸಿಯೇಶನ್ ಸಮಾವೇಶ
Vikroli Medicose Association Conference
Team Udayavani, Apr 24, 2019, 4:26 PM IST
ಮುಂಬಯಿ: ವಿಕ್ರೋಲಿಯ ಮೆಡಿಕೋಸ್ ಅಸೋಸಿಯೇಶನ್ ವತಿಯಿಂದ ವಾರ್ಷಿಕ ವೈಜ್ಞಾನಿಕ ಸಮಾವೇಶವು ಎ. 14ರಂದು ಹೀರಾನಂದಾನಿಯ ಮೆಕ್ಯುಹಾ ಫ್ಯಾನ್ಸ್ ಹೊಟೇಲ್ನ ಸಭಾಗೃಹದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಶಾಸಕ ಸುನೀಲ್ ರಾವುತ್ ಅವರು ಆಗಮಿಸಿ ಸಮಾವೇಶಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಹಿಂದುಜಾ ಆಸ್ಪತ್ರೆಯ ಪ್ರಸಿದ್ಧ ವೈದ್ಯ ಡಾ| ಅಶೋಕ್ ಮಾನ್ಸೂರ್ ಅವರು ಸಂಸ್ಥೆಯ ಕ್ಷಯ ರೋಗದ ಜಾಗೃತಿ ಪತ್ರ
ವನ್ನು ಬಿಡುಗಡೆಗೊಳಿಸಿ ಸಾಮಾನ್ಯ ಜನರಿಗೆ ಇದರ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಅಸೋಸಿ ಯೇಶನ್ನ ಕಾರ್ಯಕರ್ತರು ತೊಡಬೇಕುಎಂದರು.
ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಸುನೀಲ್ ರಾವುತ್, ವಿಕ್ರೋಲಿಯ ಮೆಡಿಕೋ ಅಸೋಸಿಯೇಶನ್ ಮಾಡುತ್ತಿರುವ ಸಮಾಜ ಸೇವೆ ಅನುಕರಣೀಯವಾಗಿದೆ. ಇದರ ಪ್ರಯೋಜನ ಸಾಮಾನ್ಯ ಜನತೆಗೆ ಸಿಗುವಂತಾಗಲು ಎಲ್ಲರೂ ಕಾರ್ಯಪ್ರವೃತ್ತರಾಗಬೇಕು ಎಂದು ನುಡಿದರು.
ವಿಕ್ರೋಲಿ ಮೆಡಿಕೋಸ್ ಅಸೋಸಿಯೇಶನ್ ಇದರ ಅಧ್ಯಕ್ಷ ಡಾ| ಆರ್. ಮೋದಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ವೈ.ವಿ. ಗೋಪಾಲ್, ಮುಖ್ಯ ಅತಿಥಿ ಶಾಸಕ ಸುನೀಲ್ ರಾವುತ್, ಗೌರವ ಅತಿಥಿ ಡಾ| ಅಶೋಕ್ ಮಾನ್ಸೂರ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗೌರವ ಪ್ರಧಾನ ಕಾರ್ಯದರ್ಶಿ ಡಾ| ವೈ. ವಿ. ಗೋಪಾಲ್ ಅವರು ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವರಿಸಿ ಸಮಾವೇಶದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ ವಂದಿಸಿದರು. ವಿಕ್ರೋಲಿ ಮೆಡಿಕೋಸ್ ಅಸೋಸಿಯೇಶನ್ನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ