ಸಮಾಜದ ಮಕ್ಕಳು ವಿದ್ಯಾವಂತರಾಗಿ ಸಮಾಜಕ್ಕೆ ಗೌರವ ತರಲಿ: ವಿಶ್ವನಾಥ್‌ ಪೂಜಾರಿ ಕಡ್ತಲ

ಮಕ್ಕಳಲ್ಲಿ ಉತ್ಸಾಹ ತುಂಬಿ ಉತ್ತಮ ವ್ಯಾಸಂಗ ಮಾಡಲು ಸಹಕಾರಿಯಾಗಬಲ್ಲದು ಎಂದು ತಿಳಿಸಿದರು.

Team Udayavani, Jul 28, 2021, 1:25 PM IST

ಸಮಾಜದ ಮಕ್ಕಳು ವಿದ್ಯಾವಂತರಾಗಿ ಸಮಾಜಕ್ಕೆ ಗೌರವ ತರಲಿ: ವಿಶ್ವನಾಥ್‌ ಪೂಜಾರಿ ಕಡ್ತಲ

ಪುಣೆ, ಜು. 27: ಬ್ರಹ್ಮಶ್ರೀ ನಾರಾಯಣಗುರುಗಳ ತತ್ತÌ ಮತ್ತು ಪ್ರೇರಣೆಯಂತೆ ಸಮಾಜದ ಪ್ರತಿಯೊಬ್ಬ ಮಕ್ಕಳು ವಿದ್ಯಾವಂತರಾಗಬೇಕು ಎಂಬ ಧ್ಯೇಯದಿಂದ ಸಂಘವು ಪ್ರತೀವರ್ಷ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಮಾಡುತ್ತಿದೆ. ಇಂದಿನ ನಾಗರಿಕ ಸಮಾಜದಲ್ಲಿ ಉತ್ತಮ ವಿದ್ಯಾವಂತರಿಗೆ ಗೌರವದೊಂದಿಗೆ ತಮ್ಮ ವಿದ್ಯಾಭ್ಯಾಸದ ಸ್ಥಾನಮಾನಕ್ಕೆ ಸಮಾನಾದ ಉತ್ತಮ ಶ್ರೇಣಿಯ ಸರಕಾರಿ ಅಥವಾ ಖಾಸಗಿ ಹುದ್ದೆಗಳು ಲಭಿಸುತ್ತವೆ. ಸಮಾಜದ ಮಕ್ಕಳು ವಿದ್ಯಾವಂತರಾಗಿ ಸಮಾಜಕ್ಕೆ ಗೌರವ ತರಲಿ ಎಂದು ಪುಣೆ ಬಿಲ್ಲವ ಸಂಘದ ಅಧ್ಯಕ್ಷ ವಿಶ್ವನಾಥ್‌ ಪೂಜಾರಿ ಕಡ್ತಲ ಹೇಳಿದರು.

ಜು. 26ರಂದು ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಪುಣೆಯ ಸೋಮವಾರ ಪೇಟೆಯ ಸಿದ್ಧಿವಿನಾಯಕ ಕೇಸರ್‌ನ ಸಂಘದ ಕಚೇರಿಯಲ್ಲಿ ನಡೆದ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ ಪುಸ್ತಕ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉನ್ನತ ಮಟ್ಟದ ವಿದ್ಯಾಭ್ಯಾಸ ಪಡೆಯುವ ಅರ್ಹತೆ ನಮ್ಮ ಯುವಕ-ಯುವತಿಯರಲ್ಲಿ ಇರಬೇಕು. ಈ ನಿಟ್ಟಿನಲ್ಲಿ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಿ, ಉತ್ತಮ ಮಾರ್ಗದರ್ಶನ
ದೊಂದಿಗೆ ವಿದ್ಯಾವಂತರನ್ನಾಗಿ ಮಾಡುವ ಕರ್ತವ್ಯ ಪಾಲಕರ ಮೇಲಿದೆ. ಶಿಕ್ಷಣದಲ್ಲಿ ಮುಂದು ವರಿಯುವ ಮಕ್ಕಳಿಗೆ ಪ್ರೋತ್ಸಾಹ ಮತ್ತು ಸಹಕಾರ ನೀಡಲು ಸಂಘವು ಸದಾ ಸಿದ್ಧವಿದೆ. ಇದರ ಪ್ರಯೋಜನ ವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು.

ಸಮಾಜದ ಸೇವಾಕರ್ತರು, ಉದ್ಯಮಿಗಳು, ದಾನಿಗಳು ಇಂತಹ ಕಾರ್ಯಗಳಿಗೆ ಪ್ರೋತ್ಸಾಹ ನೀಡಬೇಕಾದ ಜವಾಬ್ದಾರಿಯೂ ಇದೆ. ಆಗ ನಮ್ಮ ಸಮಾಜದ ಮಕ್ಕಳಲ್ಲಿ ಉತ್ಸಾಹ ತುಂಬಿ ಉತ್ತಮ ವ್ಯಾಸಂಗ ಮಾಡಲು ಸಹಕಾರಿಯಾಗಬಲ್ಲದು ಎಂದು ತಿಳಿಸಿದರು.

ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ಕುಲದೇವರಾದ ಬ್ರಹ್ಮಬೈದರ್ಕಳ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ ಫೋಟೋಗೆ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗೌರವ ಕಾರ್ಯದರ್ಶಿ ಸದಾನಂದ ಬಂಗೇರ ಪ್ರಸ್ತಾವಿಸಿ, ಪುಸ್ತಕ ವಿತರಣೆ ಕಾರ್ಯಕ್ರಮದ ಧ್ಯೇಯೋದ್ದೇಶಗಳ ಬಗ್ಗೆ ತಿಳಿಸಿದರು. ಸಂಘದ ಉಪಾಧ್ಯಕ್ಷರು ಮತ್ತು ಕಟ್ಟಡ ಸಮಿತಿಯ ಅಧ್ಯಕ್ಷ ಸಂದೇಶ್‌ ಪೂಜಾರಿ, ಜಯರಾಮ ಪೂಜಾರಿ, ಭಾಸ್ಕರ ಪೂಜಾರಿ, ಕಟ್ಟಡ ಸಮಿತಿಯ ಮಹಿಳಾ ಅಧ್ಯಕ್ಷೆ ಗೀತಾ ಪೂಜಾರಿ ಉಪಸ್ಥಿತರಿದ್ದರು. ಸುಮಾರು 150ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗವನ್ನು ಪಡದುಕೊಂಡರು.

ಗಿರೀಶ್‌ ಪೂಜಾರಿ, ಶಿವಪ್ರಸಾದ್‌ ಪೂಜಾರಿ, ರವಿ ಪೂಜಾರಿ, ಪ್ರಕಾಶ್‌ ಪೂಜಾರಿ, ಚೇತನ್‌ ಪೂಜಾರಿ, ವನಿತಾ ಪೂಜಾರಿ, ನಮಿತಾ ಪೂಜಾರಿ, ನೀಲಂ ಪೂಜಾರಿ, ಸುನಿತಾ ಪೂಜಾರಿ, ಶಿವರಾಮ್‌ ಪೂಜಾರಿ, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮತ್ತು ಸಮಾಜ ಭಾಂದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯದರ್ಶಿ ಸದಾನಂದ ಬಂಗೇರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಗೀತಾ ಪೂಜಾರಿ ಅವರ ಪ್ರಾಯೋಜಕತ್ವದಲ್ಲಿ ಲಘು ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.