ವಡಾಲ ರಾಮ ಮಂದಿರ: ಸಂತ ವಿರಾಸತ್ ಸಂಗೀತ ನಾಟಕ ಸಮಾವೇಶ
Team Udayavani, Sep 27, 2019, 6:39 PM IST
ಮುಂಬಯಿ, ಸೆ. 26: ಜಿಎಸ್ಬಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಡಾಲ ಪ್ರಾಯೋಜಕತ್ವದಲ್ಲಿ ಸಂತ ವಿರಾಸತ್ ಮಹಾರಾಷ್ಟ್ರ ಶ್ರೇಷ್ಠ ಸಂತರ ಕುರಿತು ಕೀರ್ತನ ಅಭಂಗ, ಭಜನೆ ಹಾಗೂ ಅಭಿನಯಗಳಿಂದ ಕೂಡಿದ ಕೊಂಕಣಿ ಸಂಗೀತ ನಾಟಕವು ಸೆ. 22ರಂದು ಅಪರಾಹ್ನ3.30ರಿಂದ ವಡಾಲದ ದ್ವಾರಕಾನಾಥ ಭವನದಲ್ಲಿ ನಡೆಯಿತು.
ಜಿಎಸ್ಬಿ ಸಭಾ ಮಹಿಳಾ ಶಾಖೆ ಮುಂಬಯಿ ಇವರ ನಿರ್ಮಾಪಕತ್ವದಲ್ಲಿ ಹಾಗೂ ಬೀನಾ ಶೆಣೈ ಅವರ ದಿಗದರ್ಶನದಲ್ಲಿ ಈ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಾಯಿತು. ಮಾಯಾ ನಾಯಕ್ ಮತ್ತು ತಂಡದವರು ಸಂಗೀತದಲ್ಲಿ ಸಹಕರಿಸಿದರು. ಗೋಕರ್ಣ ಪರ್ತಗಾಳಿ ಜೀವೋ ತ್ತಮ ಮಠಾಧೀಶರಾದ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ಮತ್ತು ಪಟ್ಟಶಿಷ್ಯ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮವು ಜರಗಿತು.
ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಗೌರವಾಧ್ಯಕ್ಷ ಲಕ್ಷ್ಮೀಕಾಂತ್ ಪ್ರಭು, ಜಿಎಸ್ಬಿ ಸಭಾ ಮುಂಬಯಿ ಗೌರವ ಕೋಶಾಧಿಕಾರಿ ಉದಯ ಮಲ್ಯ, ಸಂಸ್ಥೆಯ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಕಲಾಭಿಮಾನಿಗಳು, ಸಮಾಜ ಬಾಂಧವರು, ಶ್ರೀಗಳ
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲ ಕಲಾವಿದರನ್ನು ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ಮತ್ತು ಪಟ್ಟಶಿಷ್ಯ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು ಫಲಪುಷ್ಪ, ಪ್ರಸಾದವನ್ನಿತ್ತು ಅನುಗ್ರಹಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!