ಮಹಿಳೆಯರು ಸುಸಂಸ್ಕೃತ ಕುಟುಂಬದ ಭದ್ರ ಬುನಾದಿ: ಇಂದ್ರಾಳಿ ದಿವಾಕರ ಶೆಟ್ಟಿ
Team Udayavani, Mar 14, 2021, 7:15 PM IST
ಡೊಂಬಿವಲಿ: ಮಹಿಳೆ ಸಂಸಾರದ ಎರಡು ಕಣ್ಣುಗಳ ಜತೆ ಸುಸಂಸ್ಕೃತ ಕುಟುಂಬದ ಭದ್ರ ಬುನಾದಿಯಾಗಿದ್ದಾಳೆ ಎಂದು ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ ಹೇಳಿ¨ªಾರೆ.
ಅವರು ಮಾ. 9ರಂದು ಡೊಂಬಿವಲಿ ಕರ್ನಾಟಕ ಸಂಘದ ಮಹಿಳಾ ವಿಭಾಗ ವತಿಯಿಂದ ಸಂಘದ ಮುಖ್ಯಾಲಯದ ಸಭಾಗೃಹದಲ್ಲಿ ಆಯೋಜಿಸಲಾಗಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಸನಾತನ ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನವಿದೆ. ಪ್ರತಿಯೋರ್ವ ತಾಯಿ ತನ್ನ ಸೊಸೆಯನ್ನು ಹೆತ್ತ ಮಗಳಂತೆ ಹಾಗೂ ಪ್ರತಿಯೊಬ್ಬ ಸೊಸೆ ತನ್ನ ಅತ್ತೆಯನ್ನು ಹೆತ್ತ ತಾಯಿಯಂತೆ ಕಾಣುವುದರಿಂದ ಆ ಮನೆ ಶಾಂತಿ ಸೌಹಾರ್ದತೆಯ ನೆಲೆಯಾಗುತ್ತದೆ ಎಂದು ಹೇಳಿ ವಿಶ್ವದ ಸಮಸ್ತ ಮಹಿಳೆಯರಿಗೆ ಶುಭ ಹಾರೈಸಿದರು.
ಡೊಂಬಿವಲಿ ಕರ್ನಾಟಕ ಸಂಘದ ಕಾರ್ಯಾಧ್ಯಕ್ಷ ಸುಕುಮಾರ್ ಎನ್. ಶೆಟ್ಟಿ ಅವರು ಮಾತನಾಡಿ, ವಿಶ್ವ ಮಹಿಳಾ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ ನಿತ್ಯವೂ ಮಹಿಳಾ ದಿನವಾಗಿರಲಿ ಎಂದರು. ಮಹಿಳೆ ಪ್ರೀತಿ, ವಾತ್ಸಲ್ಯದ ಹಾಗೂ ಮಮತೆಯ ಸಾಕಾರ ಮೂರ್ತಿಯಾಗಿದ್ದಾಳೆ. ಇವತ್ತು ಪುರುಷರು ಜೀವನದಲ್ಲಿ ಏನನ್ನದರೂ ಸಾಧಿಸಿದ್ದರೆ ಅದರ ಹಿಂದೆ ಮಹಿಳೆಯ ಪ್ರೇರಣಾ ಶಕ್ತಿ ಇರುತ್ತದೆ ಎಂಬುದನ್ನು ಮರೆಯಬಾರದು ಎಂದು ಹೇಳಿ ಶುಭಕೋರಿದರು.
ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಷ್ಮಾ ಡಿ. ಶೆಟ್ಟಿ ಅವರು, ಹೆಣ್ಣು ಮಕ್ಕಳನ್ನು ಗೌರವಿಸುವ ಸಂಸ್ಕಾರವನ್ನು ಪ್ರತಿಯೋರ್ವ ತಾಯಿಯು ತಮ್ಮ ಮಕ್ಕಳಿಗೆ ಮನೆಯಿಂದಲೇ ಕಲಿಸಬೇಕು. ಇತ್ತೀಚೆಗೆ ನಡೆದ ಡೊಂಬಿವಲಿ ಕರ್ನಾಟಕ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಜಯಗಳಿಸಿದ ನೂತನ ಆಡಳಿತ ಮಂಡಳಿಯ ಸದಸ್ಯರನ್ನು ಅಭಿನಂದಿಸಿ, ಮಹಿಳಾ ವಿಭಾಗದ ವತಿಯಿಂದ ಪುಷ್ಪಗುತ್ಛವನ್ನಿತ್ತು ಗೌರವಿಸಿದರು.
ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಸರಳ ರೀತಿಯಲ್ಲಿ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳಾದ ಇಂದ್ರಾಳಿ ದಿವಾಕರ ಶೆಟ್ಟಿ, ಸುಕುಮಾರ್ ಎನ್. ಶೆಟ್ಟಿ, ಡಾ| ವಿಜಯ್ ಕುಮಾರ್ ಶೆಟ್ಟಿ, ದೇವದಾಸ್ ಕುಲಾಲ್, ಲೋಕನಾಥ ಶೆಟ್ಟಿ, ದಿನೇಶ್ ಕುಡ್ವ, ನ್ಯಾಯವಾದಿ ಆರ್. ಎಂ. ಭಂಡಾರಿ, ವಸಂತ ಸುವರ್ಣ, ರಮೇಶ್ ಕಾಖಂಡಕಿ, ಸತೀಶ್ ಆಲಗೂರ, ಅಜೀತ ಉಮರಾಣಿ, ಆನಂದ ಶೆಟ್ಟಿ, ರಾಜೀವ್ ಭಂಡಾರಿ, ರಮೇಶ್ ಶೆಟ್ಟಿ ಹಾಗೂ ಮಹಿಳಾ ವಿಭಾಗದ ಸುಷ್ಮಾ ಶೆಟ್ಟಿ, ಮಧುರಿಕಾ ಬಂಗೇರ, ಗೀತಾ ಮೆಂಡನ್, ವಿದ್ಯಾ ಆಲಗೂರ ಮೊದಲಾದವರು ಉಪಸ್ಥಿತರಿದ್ದರು.
ಮಹಿಳಾ ವಿಭಾಗದ ಪದಾಧಿಕಾರಿಗಳು ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಭಜನೆ, ಗಾಯನ ಮುಂತಾದ ಕಾರ್ಯಕ್ರಮಗಳು ಜರಗಿತು. ಮಹಿಳಾ ವಿಭಾಗದ ಗೌರವ ಕಾರ್ಯದರ್ಶಿ ಮಧುರಿಕಾ ಬಂಗೇರ ಕಾರ್ಯಕ್ರಮ ನಿರೂಪಿಸಿದರು. ಜತೆ ಕೋಶಾಧಿಕಾರಿ ಗೀತಾ ಮೆಂಡನ್ ವಂದಿಸಿದರು. ಮಹಿಳಾ ಸದಸ್ಯೆಯರು ಪ್ರಾರ್ಥನೆಗೈದರು. ವಾಚನಾ ಲಯ ವಿಭಾಗದ ಗೀತಾ ಕೋಟೆಕಾರ್ ಹಾಗೂ ಚಂಚಲಾ ಸಾಲ್ಯಾನ್ ಸಹಕರಿಸಿದರು.
ಚಿತ್ರ-ವರದಿ: ಗುರುರಾಜ ಪೋತನೀಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ