ಮಹಿಳೆಯರಿಂದ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ: ಸರಿತಾ


Team Udayavani, Mar 15, 2020, 6:40 PM IST

ಮಹಿಳೆಯರಿಂದ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ: ಸರಿತಾ

ಮುಂಬಯಿ, ಮಾ. 14: ಮಹಿಳೆಯರು ಹಕ್ಕು ಮತ್ತು ಸಮಾನತೆಯನ್ನು ಸಮಾಜದಲ್ಲಿ ಪ್ರತಿಷ್ಠಾಪಿಸುವಂತಹ ಚಟುವಟಿಕೆಗಳಲ್ಲಿ ತೊಡಗಿಸಿ ಕೊಳ್ಳಬೇಕು. ನಿರಂತರವಾಗಿ ಮಹಿಳೆಯರ ಶ್ರೇಯೋಭಿವೃದ್ದಿಗಾಗಿ ದುಡಿಯಬೇಕು. ಆಗ ಮಾತ್ರ ಸುಸಂಸ್ಕೃತ ಮತ್ತು ಆರೋಗ್ಯಪೂರ್ಣ ಸಮಾಜದ ನಿರ್ಮಾಣ ಸಾಧ್ಯಎಂದು ಮಣಿಪಾಲದ ಸಾಮಾಜಿಕ ಕಾರ್ಯಕರ್ತೆ, ಉದ್ಯಮಿ ಸರಿತಾ ಸಂತೋಷ್‌ ನುಡಿದರು.

ಮಾ. 8ರಂದು ಅಂಧೇರಿಯ ಮೊಗವೀರ ಭವನದಲ್ಲಿ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಹಿತ್ಯಕ ಚಟುವಟಿಕೆಗಳಲ್ಲಿ ತೊಡಗಿರುವ ಮೊಗವೀರ ವ್ಯವಸ್ಥಾಪಕ ಮಂಡಳಿಯ ಮಹಿಳಾ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಮಹಿಳೆಯರು ಅನಾದಿ ಕಾಲದಿಂದಲೂ ಕುಟುಂಬದ ಶ್ರೇಯಸ್ಸಿಗೆ ತಮ್ಮ ಜೀವನವನ್ನೆಲ್ಲಾ ಧಾರೆ ಎರೆಯುತ್ತಾ ಬಂದವರು. ತ್ಯಾಗಮಯಿಯಾಗಿ ಸಾಂಸಾರಿಕ ಪರಿವರ್ತನೆಯ ಸಂದರ್ಭದಲ್ಲೂ ಎಲ್ಲವನ್ನೂ ಸುಧಾರಿಸಿಕೊಂಡು ಬರುವ ಸ್ತ್ರೀ ಶಕ್ತಿಯಾಗಿದ್ದಾಳೆ. ಆದರೆ ಈಗಲೂ ಆಕೆಗೆ ಸಮಾನತೆಯ ಭಾಗ್ಯ ದೊರೆತಿಲ್ಲ. ಈ ಬಗ್ಗೆ ಮಹಿಳಾ ಕಾರ್ಯಕರ್ತರು ಕಾರ್ಯಪ್ರವೃತ್ತರಾಗಬೇಕು ಎಂದು ಕರೆ ನೀಡಿದರು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರೇಮಲತಾ ಜಿ. ಪುತ್ರನ್‌ ಅವರು ಸ್ವಾಗತಿಸಿ ಮಾತನಾಡಿ ಮಹಿಳಾ ದಿನವನ್ನು ಆಚರಿಸುವುದರಿಂದ ಮಹಿಳೆಯರಿಗೆ ತಮ್ಮ ಪ್ರಾಮುಖ್ಯದ ಅರಿವು ಹಾಗೂ ವಿಶ್ವದಲ್ಲಿನ ಪರಿ ವರ್ತನೆಯ ಬಗ್ಗೆ ತಿಳಿಯುತ್ತದೆ. ವಿಶ್ವವೇ ಒಂದು ಕುಟುಂಬ ಎಂದು ಭಾವಿಸುವ ಮೂಲ ತತ್ವದ ಈ ಮಹಿಳಾ ದಿನಾಚರಣೆಯು ವಿಶೇಷತೆಯನ್ನು ಹೊಂದಿದೆ ಎಂದರು.

ಗೌರವ ಅತಿಥಿಯಾಗಿ ಆಗಮಿಸಿದ ಠಾಕೂರ್‌ ಪಬ್ಲಿಕ್‌ ಸ್ಕೂಲ್‌ನ ಪ್ರಾಂಶುಪಾಲೆ ಯೋಗಿನಿ ಸುವರ್ಣ ಅವರು ಮಾತನಾಡಿ, ಮಕ್ಕಳ ಶಿಕ್ಷಣ, ಗುಣನಡತೆ, ಸಂಸ್ಕೃತಿ ಹಾಗೂ ವ್ಯವಹಾರಗಳಿಗೆ ಸೂಕ್ತ ಮಾರ್ಗ ದರ್ಶನವನ್ನು ಮಕ್ಕಳಿಗೆ ಶಿಕ್ಷಣ ದೊಂದಿಗೆ ಉತ್ತಮ ಸಂಸ್ಕಾರವನ್ನು ಕಲಿಸುವುದು ಇಂದಿನ ಆಗತ್ಯ ವಾಗಿದೆ. ಬರೇ ಉದ್ಯೋಗಕ್ಕೆ ಪದವಿಪಡೆಯುವುದು ಮುಖ್ಯವಲ್ಲ. ಸಮಾಜದಲ್ಲಿ ಗೌರವ ದೊರೆಯ ಬೇಕಾದರೆ ಉತ್ತಮ ಸಂಸ್ಕಾರವೂ ಹಣ್ಮಕ್ಕಳಿಗೆ ಬೇಕು. ಆದ್ದರಿಂದ ಹೆಣ್ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ತಿಳಿಯಪಡಿಸುವುದು ಇಂದಿನ ಅಗತ್ಯವಾಗಿದೆ ಎಂದರು.

ಮೊಗವೀರ ಮಂಡಳಿಯ ಅಧ್ಯಕ್ಷ ಕೃಷ್ಣ ಕುಮಾರ್‌ ಎಲ್‌. ಬಂಗೇರ ಅವರುಮಾತನಾಡಿ, ಒಟ್ಟು ತನ್ನ ಬದುಕಿನಲ್ಲಿ ಹೆಣ್ಣು ತಂಗಿಯಾಗಿ, ಮಗಳಾಗಿ, ತಾಯಿಯಾಗಿ, ಸೊಸೆಯಾಗಿ, ಅಜ್ಜಿಯಾಗಿ ವಿವಿಧ ಜವಾಬ್ದಾರಿಯನ್ನು ನಿರ್ವಹಿಸಬೇಕಾಗುತ್ತದೆ. ಇಂತಹ ಜವಾಬ್ದಾರಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ವಳೇ ಸಮಾಜಕ್ಕೆ ಆದರ್ಶ ಮಹಿಳೆಯಾಗಿ, ಮಾತೆಯಾಗಿ ಗೌರವಿಸಲ್ಪಡು ತ್ತಾಳೆ. ಜಾಗತಿಕ ಮಹಿಳಾ ದಿನಾಚರಣೆಯ ಸಂದರ್ಭ ಎಲ್ಲ ಮಹಿಳೆಯರಿಗೆ ಶುಭ ಕೋರುತ್ತಾ, ಮಹಿಳೆಯರು ಎದುರಿಸುವ ಸಂಕಷ್ಟಗಳು ದೂರವಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನಗರ ಸೇವಕಿ ನಯನಾ ಆರ್‌. ಶೆಟ್ಟಿ, ಖ್ಯಾತ ನೃತ್ಯ ಕಲಾವಿದೆ ಮತ್ತು ಸಿನೆಮಾ ತಾರೆ ಕಾಜಲ್‌ ಕುಂದರ್‌, ಭರತನಾಟ್ಯ ಪ್ರವೀಣೆ ಮಾಹಿಮಾ ಪುತ್ರನ್‌ ಅವರನ್ನು ಗೌರವಿಸಲಾಯಿತು. ಸಮ್ಮಾನಿತರು ಸಂದರ್ಬೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಜತೆ ಕಾರ್ಯದರ್ಶಿ ಸುರೇಖಾ ಎಸ್‌. ಪುತ್ರನ್‌ ಅವರು ಕಾರ್ಯಕ್ರಮ ನಿರ್ವಹಿಸಿದರು. ವೇದಿಕೆಯಲ್ಲಿ ಮೊಗವೀರ ಮಂಡಳಿಯ ಉಪಾಧ್ಯಕ್ಷ ಹರೀಶ್‌ ಪುತ್ರನ್‌, ಟ್ರಸ್ಟಿ ವಿಕಾಸ್‌ ಪುತ್ರನ್‌, ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ ಸುಮತಿ ತಿಂಗಳಾಯ, ಕಾರ್ಯದರ್ಶಿ ಸುರೇಖಾ ಸುವರ್ಣ, ಕೋಶಾಧಿಕಾರಿ ಸುಮನ್‌ ಶ್ರೀಯಾನ್‌, ಮೀರಾ-ಭಾಯಂದರ್‌ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸೂರ್ಯಕಲಾ ಸುವರ್ಣ, ಡೊಂಬಿವಲಿ ಶಾಖೆಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಗೀತಾ ಮೆಂಡನ್‌ ಉಪಸ್ಥಿತರಿದ್ದರು. ಸುಮತಿ ತಿಂಗಳಾಯ ವಂದಿಸಿದರು. ಮೀರಾ-ಭಾಯಂದರ್‌, ನವಿ ಮುಂಬಯಿ ಶಾಖೆಗಳ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಸಮಾಜ ಬಾಂಧವರು, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.