ನವಿಮುಂಬಯಿ ಕನ್ನಡ ಸಂಘದಲ್ಲಿ ವಿಶ್ವ ಪುಸ್ತಕ ದಿನಾಚರಣೆ


Team Udayavani, May 9, 2018, 12:09 PM IST

0805mum05.jpg

ನವಿ ಮುಂಬಯಿ: ವಾಶಿಯ ಕನ್ನಡ ಸಂಘದ ವತಿಯಿಂದ ಸಹೃದಯ ಕನ್ನಡಾಭಿಮಾನಿಗಳ ಸಮ್ಮುಖದಲ್ಲಿ ವಿಶ್ವ ಪುಸ್ತಕ ದಿನಾಚರಣೆಯು ಎ. 23 ರಂದು ನವಿಮುಂಬಯಿ ಕನ್ನಡ ಸಂಘದ ಸಭಾಗೃಹದಲ್ಲಿ ನಡೆಯಿತು. ಕನ್ನಡ ಪುಸ್ತಕ ಪ್ರಾಧಿಕಾರದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸದಸ್ಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಶ್ರಾವ್ಯಾ ರಾವ್‌ ಪ್ರಾರ್ಥನೆಗೈದರು. ಸಂಘದ ಅಧ್ಯಕ್ಷ ಬಿ. ಎಚ್‌. ಕಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಅತಿಥಿಗಳಾಗಿ ಸೋಮನಾಥ ಕರ್ಕೇರ ಮತ್ತು ನಳಿನಾ ಎಸ್‌. ಪ್ರಸಾದ್‌ ಆಗಮಿಸಿದ್ದರು. ಸವಿತಾ ಜೋಶಿ ಹಾಗೂ ಸವಿತಾ ನಾಯಕ್‌ ಅವರು ಅತಿಥಿಗಳನ್ನು ಪರಿಚಯಿಸಿದರು.

ಲೇಖಕ ಸೋಮನಾಥ ಕರ್ಕೇರ ಅವರು ಮಾತನಾಡಿ, ಪುಸ್ತಕ ಮನುಷ್ಯನ ಸ್ನೇಹಿತ. ಜ್ಞಾನದ ದೀಪ, ಬದುಕಿನ ಮಾರ್ಗದರ್ಶಿ. ನಮ್ಮ ಜೀವನದ ಮಹತ್ವದ ಅಂಗ. ಪುಸ್ತಕ ಓದುವ ಅಭ್ಯಾಸ ನಮ್ಮನ್ನು ಸದಾ ಸುಖೀಯಾಗಿಸುತ್ತದೆ ಎಂದು ನುಡಿದು ಸಂಘದ ಸಿದ್ಧಿ-ಸಾಧನೆಗಳನ್ನು ಶ್ಲಾಘಿಸಿದರು.

ಖಾರ್‌ಘರ್‌ ಕನ್ನಡ ಸಂಘದ ಅಧ್ಯಕ್ಷ ನಳಿನಾ ಪ್ರಸಾದ್‌ ಅವರು ಮಾತನಾಡಿ, ನಾನು ಹಲವಾರು  ನಾಟಕಗಳಲ್ಲಿ ಭಾಗವಹಿಸುತ್ತಿದ್ದು, ಹಲವಾರು ಕವನ, ಕತೆಗಳನ್ನು ರಚಿಸಿದ್ದೇನೆ.  ತನ್ನ ಬಾಲ್ಯದಿಂದಲೂ ಪುಸ್ತಕಗಳಿಂದ ಬಹಳಷ್ಟನ್ನು ಕಲಿತಿದ್ದೇನೆ. ಓದುವ ಗೀಳು ತಮ್ಮನ್ನು ಮತ್ತಷ್ಟು ವಿದ್ಯಾಭ್ಯಾಸ ಮಾಡಲು ಪ್ರೇರೇಪಿಸಿದ್ದಾಗಿ ಸಭೆಗೆ ತಿಳಿಸಿದರು.

ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ವಾಸಂತಿ ಕರ್ಕೇರ, ಕಾರ್ಯಕಾರಿ ಸಮಿತಿಯ ಸದಸ್ಯ, ಕನ್ನಡ ಸಂಘದ ಆಶ್ರಯದಲ್ಲಿರುವ ಗ್ರಂಥಾಲಯದ ಕೋಶಾಧಿಕಾರಿ ಆರ್‌. ಆರ್‌. ಕುಲಕರ್ಣಿ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನವಿಮುಂಬಯಿ ಕನ್ನಡ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯ ಮಧುಸೂದನ್‌ ಟಿ. ಆರ್‌. ಕಾರ್ಯಕ್ರಮ ನಿರ್ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ಪುಸ್ತಕ ಪ್ರಾಧಿಕಾರದ ರೂಪುರೇಷೆ ಗಳನ್ನು ಸಭೆಗೆ ತಿಳಿಸಿದರು. ಒಳ್ಳೆಯ ಪುಸ್ತಕಗಳನ್ನು ಖರೀದಿಸಿ ಓದುವ ಪ್ರಯತ್ನವನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕು. ಮಕ್ಕಳಿಗೆ ಪುಸ್ತಕಗಳನ್ನು ಓದುವಂತೆ ಪ್ರೇರೇಪಿಸ ಬೇಕು ಎಂದು ನುಡಿದು, ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

ಪ್ರಾಧಿಕಾರದ ವತಿಯಿಂದ ರಾಜ್ಯದ 18 ಕೇಂದ್ರಗಳಲ್ಲಿ ಸಿರಿ ಗನ್ನಡ ಪುಸ್ತಕ ಮಾರಾಟ ಮಳಿಗೆಗಳಿದ್ದು, ವಾಶಿ ಕನ್ನಡ ಸಂಘದಲ್ಲಿ ರಿಯಾಯಿತಿ ದರದಲ್ಲಿ ಕನ್ನಡ ಪುಸ್ತಕಗಳು ಮುಂಬಯಿ ಹಾಗೂ ನವಿಮುಂಬಯಿ ಕನ್ನಡ ಓದುಗರಿಗೆ ಒದಗಿಸುವ ಪ್ರಯತ್ನದಲ್ಲಿ ಕಳೆದೊಂದು ವರ್ಷದಿಂದ ಸಿರಿಗನ್ನಡ ಪುಸ್ತಕ ಮಳಿಗೆ ನಡೆಸುತ್ತಿದೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.