ಯುಎಇಯಲ್ಲಿ ವಿಶ್ವ  ತುಳು ಸಮ್ಮೇಳನ: ಪೂರ್ವಭಾವಿ ಸಭೆ


Team Udayavani, Jul 3, 2018, 5:00 PM IST

0107mum01.jpg

ಮುಂಬಯಿ: ಅರಬ್‌ ಸಂಯುಕ್ತ ಸಂಸ್ಥಾನದಲ್ಲಿ ಪ್ರಥಮ ಬಾರಿಗೆ ವಿಶ್ವ ತುಳು ಸಮ್ಮೇಳನ ದುಬೈ -2018 ಸಮಾರಂಭವು ನ. 23 ಮತ್ತು ನ. 24 ರಂದು  ದುಬೈಯ ಅಲ್‌ ನಾಸರ್‌ ಲೀಸರ್‌ ಲ್ಯಾಂಡ್‌ ಐಸ್‌ ರಿಂಕ್‌ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಇದರ ಸಲಹಾ ಸಮಿತಿಯ ಪೂರ್ವಭಾವಿ ಸಭೆಯು ಜೂ. 29 ರಂದು  ದುಬೈಯ ಬುರ್ಜು ಖಲಿಫಾ ರೆಸಿಡೆನ್ಸಿಸ್‌ ಮಲ್ಟಿಫಂಕ್ಷನ್‌ ಹಾಲ್‌ನಲ್ಲಿ ಸಂಘಟಕ   ಸರ್ವೋತ್ತಮ  ಶೆಟ್ಟಿಯವರ  ಅಧ್ಯಕ್ಷತೆ ಯಲ್ಲಿ  ನಡೆಯಿತು.

ಬಿ. ಕೆ. ಗಣೇಶ್‌  ರೈ, ಶೋಧನ್‌ ಪ್ರಸಾದ್‌, ದೇವ್‌ ಕುಮಾರ್‌ ಕಾಂಬ್ಳಿ, ಆಲ್ವಿನ್‌ ಪಿಂಟೊ, ಅಜ್ಮಲ್‌, ಸತೀಶ್‌ ಪೂಜಾರಿ, ಯೋಗೇಶ್‌ ಪ್ರಭು ಮತ್ತು ಸುವರ್ಣ ಸತೀಶ್‌, ಜ್ಯೋತಿಕಾ ಹರ್ಷ ಶೆಟ್ಟಿ, ಸ್ಮಿತಾ ಪ್ರಸನ್ನ, ಶಶಿ ರವಿರಾಜ್‌ ಶೆಟ್ಟಿ ಅವರು ಸಭೆಯಲ್ಲಿ ಉಪಸ್ಥಿತರಿದ್ದರು. 

ಕೊಲ್ಲಿ ತುಳುವರು, ಅಖೀಲ ಭಾರತ ತುಳು ಒಕ್ಕೂಟ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಸಾಗರೋತ್ತರ ತುಳುವರು ಇವರ ಸಹಯೋಗ ದೊಂದಿಗೆ ಆಯೋಜಿಸಲಾಗುವ ವಿಶ್ವ ತುಳು ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಪರಮ ಪೂಜ್ಯ ಪದ್ಮವಿಭೂಷಣ ಪುರಸ್ಕೃತ  ಡಾ| ಡಿ. ವೀರೆಂದ್ರ ಹೆಗ್ಗಡೆಯವರು ಆಗಮಿಸಲಿದ್ದಾರೆ.  

ಸಮ್ಮೇಳನದ ಅಧ್ಯಕ್ಷರಾಗಿ  ಅಬುಧಾಬಿ  ಎನ್‌.  ಎಂ.  ಸಿ.  ಸಮೂಹ  ಸಂಸ್ಥೆಯ  ಸ್ಥಾಪಕರು  ಮತ್ತು ಕಾರ್ಯಾಧ್ಯಕ್ಷ ಪದ್ಮಶ್ರೀ ಪುರಸ್ಕೃತ ಡಾ|  ಬಿ. ಆರ್‌. ಶೆಟ್ಟಿಯವರು ಪಾಲ್ಗೊಳ್ಳಲಿದ್ದಾರೆ. ಗೌರವ ಅತಿಥಿಗಳಾಗಿ ಮಂಗಳೂರು ಧರ್ಮ ಪ್ರಾಂತ್ಯದ ವಂದನೀಯ ಧರ್ಮಧ್ಯಾಕ್ಷರು ಮತ್ತು ಮುಸ್ಲಿಂ ಪ್ರವಚನಕಾರರು ಮತ್ತು ಅತಿಥಿಗಳಾಗಿ ಕರ್ನಾಟಕದಿಂದ ಗಣ್ಯಾಥಿ-ಗಣ್ಯರು ಆಗಮಿಸಲಿದ್ದಾರೆ ಎಂದು ಇದೇ ಸಂದರ್ಭದಲ್ಲಿ ತಿಳಿಸಲಾಯಿತು.

ತುಳು ಜಾನಪದ ನೃತ್ಯ ಸ್ಪರ್ಧೆ ನಡೆಯಲಿದ್ದು ಗಲ್ಫ್ ರಾಷ್ಟ್ರಗಳಾದ  ಮಸ್ಕತ್‌, ಬಹರೇನ್‌, ಕತ್ತಾರ್‌, ಕುವೇಟ್‌, ಸೌದಿ ಅರೇಬಿಯಾ, ಒಮಾನ್‌ ಮತ್ತು ಯು.ಎ.ಇ.ಯ ಹಲವು ಜಾನಪದ ನƒತ್ಯ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಲಿವೆ. ಐತಿಹಾಸಿಕ ದಾಖಲೆಯಾಗಲಿರುವ ವಿಶ್ವ ತುಳು ಸಮ್ಮೇಳನದ ವಿಶೇಷ ಸ್ಮರಣ ಸಂಚಿಕೆ ಲೋಕಾರ್ಪಣೆಗೊಳ್ಳಲಿದೆ ಇನ್ನಿತರ ಕಾರ್ಯಕ್ರಮಗಳು ಜರಗಲಿವೆ.

ತಾಳ ಮದ್ದಳೆ, ಯಕ್ಷಗಾನ ನಾಟ್ಯ ವೈಭವ, ತುಳು ರಸ ಮಂಜರಿ ತುಳು ಸಾಹಿತ್ಯ ಗೋಷ್ಠಿ – ತುಳು ಕೋಡೆ – ಇನಿ – ಎಲ್ಲೆ. ದೈವಾರಾಧನೆ ಮತ್ತು ಭೂತಾರಾಧನೆ, ತುಳು ಮಾಧ್ಯಮ ಗೋಷ್ಠಿ, ತುಳು ಹಾಸ್ಯ ಸಂಜೆ, ತುಳು ಕವನ ವಾಚನ, ತುಳು  ಚುಟುಕು  ಗೋಷ್ಠಿ,  ತುಳು  ರಂಗ  ಭೂಮಿ  ಮತ್ತು  ಚಲನಚಿತ್ರ  ಗೋಷ್ಠಿ  ಮತ್ತು  ಅನಿವಾಸಿ  ಗೋಷ್ಠಿಗಳಲ್ಲಿ ತುಳುನಾಡಿನಿಂದ ಹಲವಾರು ಸಾಹಿತಿಗಳು  ಮತ್ತು ವಿದ್ವಾಂಸರು, ಕಲಾವಿದರು ಭಾಗವಹಿಸಲಿದ್ದಾರೆ.

ವಿಶ್ವ  ತುಳು  ಸಮ್ಮೇಳನದ  ಯಶಸ್ಸಿಗೆ  ಸರ್ವರ  ಸಹಕಾರ  ಬೆಂಬಲವನ್ನು    ಕೋರಿ  ಮುಂಬರುವ  ದಿನಗಳಲ್ಲಿ  ಹೆಚ್ಚಿನ ಮಾಹಿತಿಯೋಂದಿಗೆ  ಯು. ಎ. ಇ. ಯಲ್ಲಿರುವ  ಎಲ್ಲಾ  ಕರ್ನಾಟಕ ಪರ ಸಂಘಟನೆಗಳನ್ನು  ಮತ್ತು  ಭಾರತದಲ್ಲಿ  ಹಾಗೂ ವಿದೇಶಗಳಲ್ಲಿರುವ ತುಳು ಭಾಷಾ ಸಂಘ ಸಂಸ್ಥೆಗಳನ್ನು ಶೀಘ್ರದಲ್ಲಿ ಸಂಪರ್ಕಿಸಲಾಗುವುದು ಎಂದು ಸರ್ವೋತ್ತಮ ಶೆಟ್ಟಿr ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.