ಜಗತ್ತಿನ ಸ್ವರ್ಗ  ಥೈಲ್ಯಾಂಡ್‌


Team Udayavani, Nov 28, 2020, 4:26 PM IST

ಜಗತ್ತಿನ ಸ್ವರ್ಗ  ಥೈಲ್ಯಾಂಡ್‌

ಸಿಂಗಾರವೆಂಬ ಸೀರೆಯನ್ನುಟ್ಟು, ಬಂಗಾರವೆಂಬ ಬಳೆಯನ್ನು ತೊಟ್ಟು, ನರ್ತಕಿಯೆಂಬ ನತ್ತನ್ನಿಟ್ಟು, ಚೆಲುವೆ ಚಂದುಳ್ಳಿಯಾಗಿ ಕೈಬೀಸಿ ಕರೆಯುವ ದೇಶ ಥೈಲ್ಯಾಂಡ್‌.

ಜಗತ್ತಿನ ಪುಟ್ಟ ದ್ವೀಪ ರಾಷ್ಟ್ರ ಥೈಲ್ಯಾಂಡ್‌ ಪ್ರಕೃತಿದತ್ತವಾದ ರಮಣೀಯ ಪ್ರವಾಸಿ ತಾಣಗಳನ್ನು ಹೊಂದಿದೆ. ಈ ದೇಶ ಮುನ್ನಡೆಯುತ್ತಿರುವುದು, ಇಲ್ಲಿನ ಜನರು ಜೀವನ ನಡೆಸುತ್ತಿರುವುದು ಪ್ರವಾಸೋದ್ಯಮದಿಂದಲೇ ಎಂಬುದು ಇಲ್ಲಿನ ಅಚ್ಚರಿಯ ವಿಚಾರ. ಹೀಗಾಗಿ ಇಲ್ಲಿ ಪ್ರವಾಸಿಗರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ವಿಮಾನ ನಿಲ್ದಾಣ,  ಅಂಗಡಿ ಮಳಿಗೆಗಳಲ್ಲಿ  ಪ್ರವಾಸಿಗರಿಗೆ ಕೈಮುಗಿದು ಸ್ವಾಗತಿಸಲಾಗುತ್ತದೆ ಮತ್ತು ಅದೇ ರೀತಿ ಬೀಳ್ಕೊಡಲಾಗುತ್ತದೆ.

ವಿಶ್ವದ ಮೂಲೆಮೂಲೆಯಿಂದಲೂ ಪ್ರವಾಸಿಗರನ್ನು ಕೈ ಬೀಸಿ ಕರೆಯುವ ಥೈಲ್ಯಾಂಡ್‌ನ‌ಲ್ಲಿ ಹಲವಾರು ಪ್ರೇಕ್ಷಣೀಯ ಸ್ಥಳಗಳಿವೆ. ಜತೆಗೆ ಉದ್ಯೋಗ,  ಜೀವನವನ್ನು ರೂಪಿಸಲು ಯೋಗ್ಯ ದೇಶವಾಗಿದೆ.

ಸ್ವತ್ಛತೆ ಇಲ್ಲಿ ಎದ್ದು ಕಾಣುವ ವಿಚಾರ. ರಸ್ತೆ, ಹೆದ್ದಾರಿ ಸ್ವತ್ಛತೆ ಕಾರ್ಯ  ಮೆಚ್ಚುವಂತಿದೆ. ಟ್ರಾಫಿಕ್‌ ಜಾಮ್‌ ಕಾಣ ಸಿಗುವುದೇ ಇಲ್ಲ. ಇಲ್ಲಿ ಹೆದ್ದಾರಿ ನಿರ್ಮಾಣ ಕಾರ್ಯ ಅದೇ ರೀತಿ ಮಾಡಲಾಗಿದೆ. ಇಲ್ಲಿ ಎಂಜಿನಿಯರಿಂಗ್‌ ಪರಿಣತಿ ಎದ್ದು ಕಾಣುತ್ತದೆ.

ದೇಶದ ಕೇಂದ್ರಬಿಂದು ಬ್ಯಾಂಕಾಕ್‌ ಅತ್ಯಂತ ಸಮೃದ್ಧಿಯನ್ನು ಹೊಂದಿದ ನಗರ. ಇಲ್ಲಿ  ಭಾರತೀಯ ಆಚಾರ, ವಿಚಾರಗಳಿಗೆ ಮನ್ನಣೆ ನೀಡುವುದರ ಜತೆಗೆ ಧರ್ಮ, ಸಂಪ್ರದಾಯ, ಹಬ್ಬಹರಿದಿನಗಳ ಆಚರಣೆಗೂ ಹೆಚ್ಚಿನ ಅವಕಾಶವಿದೆ.

ಕನ್ನಡಿಗರ ಹೃದಯ ಶ್ರೀಮಂತಿಕೆಗೆ ಇಲ್ಲಿನ ಜನ ಗೌರವ ನೀಡುತ್ತಾರೆ. ಕನ್ನಡ ನಾಡುನುಡಿ, ನಿತ್ಯಹರಿದ್ವರ್ಣ ಕಾಡುಗಳು, ಗಂಧದ ಮರ, ರಾಜಮಹಾರಾಜರ ಇತಿಹಾಸ, ಶಿಲ್ಪಕಲೆ, 8 ಜ್ಞಾನಪೀಠ ಪ್ರಶಸ್ತಿ ಪಡೆದ ಕರ್ನಾಟಕ ರಾಜ್ಯದ ಬಗ್ಗೆ ಇಲ್ಲಿನ ಜನರು ಮೆಚ್ಚುಗೆ ವ್ಯಕ್ತಪಡಿಸುವುದು ವಿಶೇಷ.

ಅತ್ಯಂತ ಸುಸಂಸ್ಕೃತ, ಸರಳ  ಜೀವನ ನಡೆಸುವ ಇಲ್ಲಿನ ಜನರು, ಕನ್ನಡಿಗರೊಂದಿಗೆ ಸಹೋದರತ್ವ ಭಾವನೆಯಿಂದ ಬೆರೆತುಕೊಳ್ಳುತ್ತಾರೆ.  ಹಬ್ಬಗಳಲ್ಲಿಯೂ  ಸಹಭಾಗಿಯಾಗುತ್ತಾರೆ. ದೇವರು, ಪೂಜೆ, ಪುನಸ್ಕಾರಗಳನ್ನು ಗೌರವಿಸುತ್ತಾರೆ.

ಚಿಯಾಂಗ್‌ ಮಾಯಿ

ಥೈಲ್ಯಾಂಡ್‌ನ‌ಲ್ಲಿ ಪ್ರಸಿದ್ಧ ಪ್ರವಾಸಿ ತಾಣ. ಇದು ಥೈಲ್ಯಾಂಡ್‌ನ‌ ಅತ್ಯಂತ ದೊಡ್ಡ  ಮತ್ತು ಸುಂದರವಾದ ನಗರ. ಇಲ್ಲಿ ಅತಿ ಹೆಚ್ಚು ಪರ್ವತಗಳಿವೆ. ಬ್ಯಾಂಕಾಂಕ್‌ನಿಂದ ಸುಮಾರು 700 ಕಿ.ಮೀ. ದೂರದಲ್ಲಿದೆ. ಇಲ್ಲಿ ಅತ್ಯುದ್ಭುತ ಗೋಡೆಗಳು, ಸ್ಮಾರಕ, ಪ್ರತಿಮೆಗಳು ಕಾಣಸಿಗುತ್ತವೆ. ಹೆಚ್ಚಿನ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಡೆಯುವ ತಾಣವಾಗಿದೆ.

ಚಿಯಾಂಗ್‌ ರೈ

ಉತ್ತರ ಥೈಲ್ಯಾಂಡ್‌ ಪರ್ವತಗಳ ನಡುವೆ ಇರುವ ಚಿಯಾಂಗ್‌ ರೈ ಆಕರ್ಷಕ ತಾಣ. ಇಲ್ಲಿನ ವಿಶಿಷ್ಟ ವಾಸ್ತುಶಿಲ್ಪ, ಸುಂದರ ದೃಶ್ಯಗಳು, ಪ್ರಶಾಂತ, ರೋಮಾಂಚನಕಾರಿ ಸ್ಥಳಗಳು ಪ್ರವಾಸಿಗರನ್ನು ಆಕರ್ಷಿಸುತ್ತದೆ. ಇಲ್ಲಿರುವ ಚಿಯಾಂಗ್‌ ರಾಯ್‌ ಕ್ಲಾಕ್‌ ಟವರ್‌, ಭವ್ಯವಾದ  9 ಶ್ರೇಣಿಯ ವಾಟ್‌ ಹುವಾಯಿ ಪಿಯಾ ಕುಂಗ್‌ ದೇವಾಲಯ ರಚನೆ ಅತ್ಯದ್ಭುತವಾಗಿದೆ. ಇಲ್ಲಿರುವ ಸಿಂಘಾ ಪಾರ್ಕ್‌, ಮೇ ಕೋಕ್‌ ನದಿ ಹಾಗೂ ಸುಂದರ ಶಿಖರಗಳಲ್ಲಿ ಒಂದಾಗಿರುವ ದೋಯಿ ಮಾಸಲೋಂಗ್‌ ಕೂಡ ಇಲ್ಲಿದೆ. ಇಲ್ಲಿ ಬುಡಕಟ್ಟು ಜನಾಂಗದವರು ವಾಸಿಸುತ್ತಾರೆ.

ವಾಟ್‌ ರೊಂಗ್‌ ಖುನ್‌

ವೈಟ್‌ ಟೆಂಪಲ್‌ ಎಂದು ಕರೆಯಲ್ಪಡುವ ವಾಟ್‌ ರೊಂಗ್‌ ಖುನ್‌ ಥೈಲ್ಯಾಂಡ್‌ನ‌ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ. ಇದು ಚಿಯಾಂಗ್‌ ರಾಯ್‌ನ ಹೆಗ್ಗುರುತು. ಬೌದ್ಧ ಮೌಲ್ಯಗಳನ್ನು ಒಳಗೊಂಡ ಇಲ್ಲಿ ಬೌದ್ಧ ಧರ್ಮದ ಶಿಕ್ಷಣ, ಬುದ್ಧನ ಬೋಧನೆಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ. ದೇವಾಲಯದಲ್ಲಿ ಬಳಸಿರುವ ಗಾಜಿನ ಮೇಲೆ ಸೂರ್ಯನ ಬೆಳಕು ಬಿದ್ದಾಗ ಕಾಣುವ ದೃಶ್ಯ ನಯನಮನೋಹರವಾಗಿರುತ್ತದೆ.

– ಲಕ್ಷ್ಮೀ, ಅಂಕಲಗಿಮಠ

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.