ವರ್ಲಿ ಅಪ್ಪಾಜಿಬೀಡು ಫೌಂಡೇಶನ್: ಬೆಳ್ಳಿ ಹಬ್ಬಕ್ಕೆ ಭರದ ಸಿದ್ದತೆ
Team Udayavani, May 25, 2018, 10:37 AM IST
ಮುಂಬಯಿ: ಕಳೆದ 25 ವರ್ಷಗಳಿಂದ ವರ್ಲಿ ಪರಿಸರದಲ್ಲಿ ಧಾರ್ಮಿಕ ಸೇವಾ ನಿರತವಾಗಿದ್ದ ವರ್ಲಿಯ ಅಪ್ಪಾಜಿಬೀಡು ಫೌಂಡೇಶನಿನ ಬೆಳ್ಳಿ ಹಬ್ಬ ಸಮಾರಂಭ ಹಾಗೂ 25 ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆಗೆ ಈಗಾಗಲೇ ಸಿದ್ದತೆಗಳು ನಡೆಯುತ್ತಿದ್ದು, ಈ ಧಾರ್ಮಿಕ ಸಮಾರಂಭಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಡೆ ಅವರನ್ನು ಮೇ. 17 ರಂದು ಭೇಟಿಯಿತ್ತು ಆಮಂತ್ರಿಸಲಾಯಿತು.
ಡಿ. 30 ರಂದು ಮಹಾನಗರದ ದಾದರ್ನ ಕಾಮ್ಗಾರ್ ಮೈದಾನದಲ್ಲಿ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಯವರ ಉಪಸ್ಥಿತಿಯಲ್ಲಿ ನಡೆಯಲಿರುವ ಈ ಬೆಳ್ಳಿಹಬ್ಬ ಸಮಾರಂಭಕ್ಕೆ ಸುಮಾರು ಹತ್ತು ಸಾವಿರದಿಂದ ಹದಿನೈದು ಸಾವಿರ ಭಕ್ತಾಭಿಮಾನಿಗಳು ಸೇರುವ ನೀರೀಕ್ಷೆಯಿದ್ದು ಭರದಿಂದ ಸಿದ್ದತೆ ನಡೆಯುತ್ತಿದೆ.
ಅಪ್ಪಾಜಿಬೀಡು ಪೌಂಡೇಶನಿನ ಸಂಸ್ಥಾಪಕ ಪಡುಬಿದ್ರೆ ಬೇಂಗ್ರೆ ರಮೇಶ್ ಗುರುಸ್ವಾಮಿ, ಅಧ್ಯಕ್ಷರಾದ ಕೇದಗೆ ಸುರೇಶ್ ಶೆಟ್ಟಿ, ಬೆಳ್ಳಿ ಹಬ್ಬ ಆಚರಣಾ ಸಮಿತಿಯ ಕಾರ್ಯಾಧ್ಯಕ್ಷರಾದ ಬಿ. ದಿನೇಶ್ ಕುಲಾಲ…, ರತ್ನ ಡಿ. ಕುಲಾಲ…, ಗೋವಾದ ಹೊಟೇಲ್ ಉದ್ಯಮಿ ಹರೀಶ್ ಸಾಲ್ಯಾನ್ ಉಪಸ್ಥಿತರಿದ್ದು ವರ್ಲಿ ಅಪ್ಪಾಜಿಬೀಡು ಪೌಂಡೇಶನಿನ 25 ವರ್ಷಗಳ ಧಾರ್ಮಿಕ ಸೇವೆಯ ಬಗ್ಗೆ ವಿವರಿಸಿದರು.
ಅಪ್ಪಾಜಿಬೀಡು ಫೌಂಡೇಶನಿನ ವಿವರವನ್ನು ತಿಳಿದ ಪದ್ಮಭೂಷಣ ರಾಜಶ್ರೀ ಡಾ| ವೀರೇಂದ್ರ ಹೆಗ್ಡೆಯವರು, ಡಿಸೆಂಬರ್ ಕೊನೆಯಲ್ಲಿ ಧರ್ಮಸ್ಥಳದಲ್ಲಿ ವಿಶೇಷ ಕಾರ್ಯವಿರುದರಿಂದ ಅಂದು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲು ಅನಾನುಕೂಲವಾಗಿದ್ದು, ಈ ಧಾರ್ಮಿಕ ಕಾರ್ಯ ಕ್ರಮಗಳು ಅದ್ದೂರಿಯಾಗಿ ನೆರವೇರಲಿ. ಮಹಾ ನಗರದಲ್ಲಿನ ಸರ್ವಭಾಷಿಗಳು ಈ ಬೆಳ್ಳಿಹಬ್ಬ ಸಮಾರಂಭ ಹಾಗೂ ಅಯ್ಯಪ್ಪ ಮಹಾ ಪೂಜೆಯಲ್ಲಿ ಭಾಗಿಯಾಗಿ ಎಲ್ಲಾ ಕಾರ್ಯ ಕ್ರಮಗಳು ಅದ್ದೂರಿಯಾಗಿ ನಡೆಯಲಿ ಎಂದು ಅವರು ಶುಭ ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು