ಯಕ್ಷಾಭ್ಯುದಯ ಬಳಗದ ಕಲಾಸೇವೆ ಅಭಿನಂದನೀಯ: ಅಣ್ಣಿ ಸಿ.ಶೆಟ್ಟಿ


Team Udayavani, Aug 22, 2017, 2:28 PM IST

21.jpg

ಮುಂಬಯಿ: ಯಕ್ಷಾಭ್ಯುದಯ ಬಳಗ ಥಾಣೆ ಇದರ 6ನೇ ವಾರ್ಷಿಕೋತ್ಸವದ ನಿಮಿತ್ತ ಯಕ್ಷ ಸಂಘಟಕ ರಮೇಶ್‌ ಶೆಟ್ಟಿ ಸಿವಿಲ್‌ ಅವರ ಸಂಚಾಲಕತ್ವದಲ್ಲಿ ಶ್ರೀ ಬ್ರಹ್ಮಲಿಂಗೇಶ್ವರ ಯಕ್ಷಗಾನ ಮಂಡಳಿ ಮಾರಣಕಟ್ಟೆ ಇದರ ಮುಂಬಯಿ ತಿರುಗಾಟಯ ಯಕ್ಷನವಮಿ ಸಮಾ ರಂಭದ ಅಂಗವಾಗಿ ಮಂಡಳಿಯ ಕಲಾವಿದರಿಂದ ಶ್ರೀ ಕೃಷ್ಣ ಪಾರಿಜಾತ -ಮೈಂದ ದ್ವಿವಿದ ಕಾಳಗ-ಜಾಂಬವತಿ ಕಲ್ಯಾಣ ಯಕ್ಷಗಾನ ಪ್ರದರ್ಶನವು ಇತ್ತೀಚೆಗೆ ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಸಭಾಂಗಣದಲ್ಲಿ ಜರಗಿತು.

ಇದೇ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರದ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ಅವರು ಮಾತನಾಡಿ, ತುಂಬಿದ ಪ್ರೇಕ್ಷಕ ವರ್ಗವನ್ನು ಕಂಡಾಗ ಸಂತೋಷವಾಗುತ್ತಿದೆ. ಯಾವುದೇ ಪದಾಧಿಕಾರಿಗಳಿಲ್ಲದ ಈ ಯಕ್ಷಾಭ್ಯುದಯ ಬಳಗದ ಸದಸ್ಯರು ಒಳ್ಳೆಯ ಸಮಾಜಪರ ಕಾರ್ಯಗಳನ್ನು ಮಾಡುತ್ತಿದ್ದಾರೆ. ಪ್ರತೀ ವರ್ಷ ಯಕ್ಷಗಾನ ಬಯಲಾಟವನ್ನು ಆಯೋಜಿಸಿ ಕಲಾವಿದರಿಗೆ ಆರ್ಥಿಕ ಸಹಾಯ ನೀಡಿ ಪ್ರೋತ್ಸಾಹಿಸುತ್ತಿದ್ದಾರೆ. ಇವರ ಕಾರ್ಯ ಅಭಿನಂದನೀಯವಾಗಿದೆ. ಈ ದೇವಾಲಯವನ್ನು ನಾನಾಗಲಿ, ಇತರ ಪದಾಧಿಕಾರಿಗಳಾಗಲಿ ಮಾಡಿದಲ್ಲ. ನಿಮ್ಮಂತಹ ಭಕ್ತಾದಿಗಳು ಮಾಡಿದ್ದಾರೆ. ಇಲ್ಲಿ ನಿರಂತರವಾಗಿ ಯಕ್ಷಗಾನ ಸೇವೆಗಳು ನಡೆಯುತ್ತಿದ್ದು,  ಈ ವರ್ಷ 10-20 ಯಕ್ಷಗಾನ ಸೇವೆಗಳು ಬುಕ್ಕಿಂಗ್‌ ಆಗಿವೆ ಎನ್ನಲು ಸಂತೋಷವಾಗುತ್ತಿದೆ ಎಂದರು.

ಅತಿಥಿಗಳಾಗಿ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಶ್ಯಾಮ್‌ ಎನ್‌. ಶೆಟ್ಟಿ, ಮಾಜಿವಾಡಾ ಶ್ರೀ ಆದಿಶಕ್ತಿ ಕನ್ನಡ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಾದಿರಾಜ ಶೆಟ್ಟಿ, ವಿದ್ಯಾದಾಯಿನಿ ಸಭಾ ಮುಂಬಯಿ ಇದರ ಕಾರ್ಯದರ್ಶಿ ಚಿತ್ರಾಪು ಕೆ. ಎಂ. ಕೋಟ್ಯಾನ್‌, ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ ಇದರ ಮಾಜಿ ಉಪಾಧ್ಯಕ್ಷ ಎಸ್‌. ಕೆ. ಪೂಜಾರಿ, ಉದ್ಯಮಿ ದಯಾನಂದ ಶೆಟ್ಟಿ, ದೇವಾಲಯದ ಜತೆ ಕೋಶಾಧಿಕಾರಿ ದೆಪ್ಪುಣಿಗುತ್ತು ಚಂದ್ರಹಾಸ ಶೆಟ್ಟಿ ಉಪಸ್ಥಿತರಿದ್ದರು.

ಬಳಗದ ಸದಸ್ಯರಾದ ಬ್ರಹ್ಮಾಂಡ ಶಂಕರ್‌ ಪೂಜಾರಿ ಸ್ವಾಗತಿಸಿದರು. ಬಳಗದ ಸದಸ್ಯರು ಅತಿಥಿಗಳನ್ನು ಗೌರವಿಸಿದರು. ಸಮಾರಂಭದಲ್ಲಿ ಉದ್ಯಮಿ ಅನುಪ್‌ ರಾಮಕೃಷ್ಣ ಸುರ್ವೆ ದಂಪತಿ ಹಾಗೂ ಅವರ ಮಾತಾಪಿತರನ್ನು, ಪತ್ರಕರ್ತ ರಮೇಶ್‌ ಭಿರ್ತಿ ಮತ್ತು ಸಮಾಜ ಸೇವಕ ಪ್ರೇಮಾನಂದ ಕುಕ್ಯಾನ್‌ ಅವರನ್ನು ಬಳಗದ ವತಿಯಿಂದ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಲಾಯಿತು.

ರಾಘವೇಂದ್ರ ಮೊಗವೀರ ಮತ್ತು ಉಮೇಶ್‌ ಮೊಗವೀರ ಅವರನ್ನು  ಗೌರವಿಸಲಾಯಿತು. ಯಕ್ಷಗಾನ ಮಂಡಳಿಯ ಪ್ರಸಿದ್ಧ ಭಾಗವತ ಆನಂದ ಅಂಕೋಲ, ಪ್ರಸಿದ್ಧ ಹಾಸ್ಯಗಾರ ಶೇಖರ ಶೆಟ್ಟಿ ಎಳಬೇರು ಅವರಿಗೆ ಆರ್ಥಿಕ ಸಹಾಯವನ್ನಿತ್ತು ಗೌರವಿಸಲಾಯಿತು. ದೇವಾಲಯದ ವತಿಯಿಂದ ಮಂಡಳಿಯ ಭಾಗವತ ಸುಧಾಕರ ಕೊಠಾರಿ ಅವರನ್ನು ಗೌರವಿಸಲಾಯಿತು. ಮೇಳದ ಸಂಚಾಲಕ ಬೆಳ್ಳಾಲ ರಮೇಶ್‌ ಶೆಟ್ಟಿ ಸಿವಿಲ್‌ ಅವರ ವತಿಯಿಂದ ಬಳಗದ ಸದಸ್ಯ ಜೋನ್‌ ಅಂದ್ರಾದೆ ಅವರನ್ನು ಗೌರವಿಸಲಾಯಿತು. 

ಸಮ್ಮಾನಿತರು ಸಂದಭೋì ಚಿತವಾಗಿ ಮಾತನಾಡಿದರು. ಶ್ರದ್ಧಾ ಶಂಕರ್‌ ಪೂಜಾರಿ ಸಮ್ಮಾನ ಪತ್ರ ವಾಚಿಸಿದರು. ಬ್ರಹ್ಮಾಂಡ ಶಂಕರ ಪೂಜಾರಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಶಂಕರ್‌ ಆರ್‌. ಪೂಜಾರಿ, ಸಂತೋಷ್‌ ಆರ್‌. ಶೆಟ್ಟಿ, ರಾಘವೇಂದ್ರ ಮೊಗವೀರ, ಮೋಹನ್‌ ದೇವಾಡಿಗ, ಉದಯ ಆಚಾರ್ಯ ಮೊದಲಾದವರು ಸಹಕರಿಸಿದರು. ಕೊನೆಯಲ್ಲಿ ಅನ್ನ ಪ್ರಸಾದ ನಡೆಯಿತು. ಕಲಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.