ಯಕ್ಷಗಾನಕ್ಕೆ ಪ್ರೋತ್ಸಾಹ ನೀಡುವ ಕಾರ್ಯ ಸ್ತುತ್ಯರ್ಹ

| ತುಳು ಸಂಘ ಪಿಂಪ್ರಿ-ಚಿಂಚ್ವಾಡ್‌ನಿಂದ 'ದಾಳಿಂಬೆ-ದಾರಗೆ' ಯಕ್ಷಗಾನ ಪ್ರದರ್ಶನದಲ್ಲಿ ಪ್ರವೀಣ್‌ ಶೆಟ್ಟಿ ಪುತ್ತೂರು

Team Udayavani, Sep 10, 2019, 1:29 PM IST

mumbai-tdy-1

ಪುಣೆ, ಸೆ. 9: ತುಳು ನಾಡಿನ ಹೆಮ್ಮೆಯ ಕಲೆಯಾದ ಯಕ್ಷಗಾನವನ್ನು ಪುಣೆಯಲ್ಲಿ ಉಳಿಸುವ ದೃಷ್ಟಿಕೋನದಿಂದ ಪ್ರಾಮಾಣಿಕವಾಗಿ ತೊಡಗಿಸಿಕೊಂಡು ಮಹಾಗಣಪತಿ ಯಕ್ಷಗಾನ ಮಂಡಳಿಯ ಮೂಲಕ ಪ್ರಯತ್ನಶೀಲನಾಗಿದ್ದೇನೆ. ಬಾಲ್ಯದಿಂದಲೂ ಯಕ್ಷಗಾನದ ಬಗ್ಗೆ ಅಪಾರ ಅಭಿಮಾನವನ್ನು ಬೆಳೆಸಿಕೊಂಡು ಅದರ ಬೆಳವಣಿಗೆಗೆ ಶ್ರಮಿಸುತ್ತಿದ್ದೇನೆ. ಪಿಂಪ್ರಿ-ಚಿಂಚ್ವಾಡ್‌ ತುಳು ಸಂಘವು ತುಳುನಾಡಿನ ಆಚಾರ ವಿಚಾರ, ಕಲೆ ಸಂಸ್ಕೃತಿಯನ್ನು ಪೋಷಿಸುವ ಕಾರ್ಯ ಮಾಡುತ್ತಿರುವುದು ಅಭಿನಂದನೀಯವಾಗಿದೆ. ಸಂಘದ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಅಪೇಕ್ಷೆಯಂತೆ ಸೀಮಿತ ಕಾಲಾವಕಾಶದಲ್ಲಿ ಇಂದಿನ ಪ್ರದರ್ಶನವನ್ನು ಆಯೋಜಿಸುವಲ್ಲಿ ನಮ್ಮ ಮಂಡಳಿ ಯಶಸ್ವಿಯಾಗಿದೆ ಎನ್ನಲು ಹೆಮ್ಮೆಯಾಗುತ್ತಿದೆ. ತುಳು ಸಂಘದ ಕಲಾಭಿಮಾನಕ್ಕೆ ಅಭಿನಂದನೆಗಳು ಎಂದು ಪುಣೆ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯ ಅಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರು ಅವರು ನುಡಿದರು.

ಅವರು ಸೆ. 7ರಂದು ತುಳು ಸಂಘ ಪಿಂಪ್ರಿ-ಚಿಂಚ್ವಾಡ್‌ ಆಶ್ರಯದಲ್ಲಿ ಪಿಂಪ್ರಿಯ ಆಚಾರ್ಯ ಅತ್ರೆ ರಂಗಮಂದಿರದಲ್ಲಿ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯಿಂದ ದಾಳಿಂಬೆ ದಾರಗೆ ಯಕ್ಷಗಾನ ಪ್ರದರ್ಶನದ ಸಂದರ್ಭ ಉಪಸ್ಥಿತರಿದ್ದು ಮಾತನಾಡಿ, ಪುಣೆ ಯಲ್ಲಿರುವ ಸಂಘ ಸಂಸ್ಥೆಗಳು ಯಕ್ಷಗಾನ ಕಲೆಗೆ ಪ್ರೊತ್ಸಾಹ ನೀಡುವ ಕಾರ್ಯ ಮಾಡಬೇ ಕಾಗಿದೆ. ಇದರಿಂದ ಯಕ್ಷಗಾನ ಕಲೆ ವಿಪುಲವಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದರು.

ಈ ಸಂದರ್ಭ ವೇದಿಕೆಯಲ್ಲಿ ಸಂಘದ ಅಧ್ಯಕ್ಷರಾದ ಹರೀಶ್‌ ಶೆಟ್ಟಿ ಕುರ್ಕಾಲ್, ಬಂಟ್ಸ್‌ ಅಸೋಸಿಯೇಶನ್‌ ಪುಣೆ ಇದರ ಅಧ್ಯಕ್ಷರಾದ ಆನಂದ್‌ ಶೆಟ್ಟಿ ಮಿಯ್ನಾರ್‌, ಪಿಂಪ್ರಿ-ಚಿಂಚ್ವಾಡ್‌ ಬಂಟರ ಸಂಘದ ಅಧ್ಯಕ್ಷರಾದ ವಿಜಯ್‌ ಎಸ್‌. ಶೆಟ್ಟಿ ಬೋರ್ಕಟ್ಟೆ, ಪಿಂಪ್ರಿ-ಚಿಂಚ್ವಾಡ್‌ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ವಿಶ್ವನಾಥ ಡಿ. ಶೆಟ್ಟಿ, ಮಹೇಶ್‌ ಹೆಗ್ಡೆ, ಪಿಂಪ್ರಿ-ಚಿಂಚ್ವಾಡ್‌ ಹೊಟೇಲ್ ಅಸೋಸಿಯೇಶನ್‌ ಅಧ್ಯಕ್ಷ ಕೆ. ಪದ್ಮನಾಭ ಶೆಟ್ಟಿ, ಶ್ರೀ ಅಯ್ಯಪ್ಪ ಯಕ್ಷಗಾನ ಮಂಡಳಿ ಅಧ್ಯಕ್ಷ ಪಾಂಗಾಳ ವಿಶ್ವನಾಥ ಶೆಟ್ಟಿ, ಹಿರಿಯ ಯಕ್ಷಗಾನ ಕಲಾವಿದ ಮದಂಗಲ್ಲು ಆನಂದ್‌ ಭಟ್, ತುಳು ಸಂಘದ ಮಾಜಿ ಕಾರ್ಯಾಧ್ಯಕ್ಷರಾದ ಶ್ಯಾಮ್‌ ಸುವರ್ಣ, ಪಿಂಪ್ರಿ ಬಿಲ್ಲವ ಸಂಘದ ಅಧ್ಯಕ್ಷ ಶರತ್‌ ಕೋಟ್ಯಾನ್‌, ಮಾಜಿ ನಗರ ಸೇವಕ ಪ್ರಸಾದ್‌ ಶೆಟ್ಟಿ, ದಿನೇಶ್‌ ಶೆಟ್ಟಿ ಕಳತ್ತೂರು, ಕಲ್ಲಾಡಿ ಶ್ರೀಧರ ಶೆಟ್ಟಿ, ಜಯಾನಂದ್‌ ಶೆಟ್ಟಿ, ಸಂತೋಷ್‌ ಶೆಟ್ಟಿ ಎಣ್ಣೆಹೊಳೆ, ಗಿರೀಶ್‌ ಶೆಟ್ಟಿ, ಜಯಲಕ್ಷ್ಮಿ ಪಿ. ಶೆಟ್ಟಿ, ತುಳು-ಸಂಘದ ಉಪಾಧ್ಯಕ್ಷರಾದ ದಿನೇಶ್‌ ಶೆಟ್ಟಿ ಉಜಿರೆ, ಶೇಖರ ಚಿತ್ರಾಪು, ಪ್ರಧಾನ ಕಾರ್ಯದರ್ಶಿ ವಿನಯ್‌ ಶೆಟ್ಟಿ ನಿಟ್ಟೆ, ಗಣೇಶ್‌ ಅಂಚನ್‌, ಪದಾಧಿಕಾರಿಗಳಾದ ನಿತಿನ್‌ ಶೆಟ್ಟಿ ನಿಟ್ಟೆ, ಸಂತೋಷ್‌ ಶೆಟ್ಟಿ ಪೆರ್ಡೂರು, ಸಂತೋಷ್‌ ಕಡಂಬ, ಜಯ ಶೆಟ್ಟಿ ದೇಹುರೋಡ್‌, ಶುಭಕರ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಮಿಥುನ್‌ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಅತಿಥಿ-ಗಣ್ಯರು ದೀಪ ಬೆಳಗಿಸಿ ಯಕ್ಷಗಾನ ಪ್ರದರ್ಶನಕ್ಕೆ ಚಾಲನೆ ನೀಡಿದರು. ಪ್ರವೀಣ್‌ ಶೆಟ್ಟಿ ಪುತ್ತೂರು ಇವರನ್ನು ಸಂಘದ ವತಿಯಿಂದ ಶಾಲು ಹೊದೆಸಿ, ಸ್ಮರಣಿಕೆ, ಪುಷ್ಪಗುಚ್ಛ ನೀಡಿ ಸಮ್ಮಾನಿಸಲಾಯಿತು. ನೂತನ್‌ ಸುವರ್ಣ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಜಯಾನಂದ್‌ ಶೆಟ್ಟಿ ಹಾಗೂ ಸಂತೋಷ್‌ ಶೆಟ್ಟಿ ಪೆರ್ಡೂರು ಚಹಾ, ಉಪಾಹಾರದ ವ್ಯವಸ್ಥೆಯನ್ನು ಮಾಡಿದರು. ರಘು ಶೆಟ್ಟಿ ಪಿಎಂಟಿ ಕ್ಯಾಂಟೀನ್‌ ಭೋಜನದ ವ್ಯವಸ್ಥೆಯನ್ನು ಮಾಡಿದರು.

ಅನಂತರ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಪುಣೆ ಹಾಗೂ ಊರಿನ ನಾಮಾಂಕಿತ ಕಲಾವಿದರ ಕೂಡುವಿಕೆಯೊಂದಿಗೆ ದಾಳಿಂಬೆ ದಾರಗೆ ತುಳು ಯಕ್ಷಗಾನ ಪ್ರದರ್ಶನ ನಡೆಯಿತು. ಪ್ರದರ್ಶನದ ಹಿಮ್ಮೇಳದಲ್ಲಿ ಭಾಗವತರಾಗಿ ಪ್ರಶಾಂತ್‌ ಶೆಟ್ಟಿ, ಚೆಂಡೆಯಲ್ಲಿ ಎಕ್ಕಾರು ಪ್ರವೀಣ್‌ ಶೆಟ್ಟಿ, ಮದ್ದಳೆಯಲ್ಲಿ ಆನಂದ್‌ ಶೆಟ್ಟಿ ಇನ್ನ, ಚಕ್ರತಾಳದಲ್ಲಿ ಕುಶರಾಜ ಪೂಜಾರಿ ಸಹಕರಿಸಿದರು. ಹಾಸ್ಯದಲ್ಲಿ ದಿನೇಶ್‌ ರೈ ಕಡಬ, ಸಿ. ಕೆ. ಪ್ರಶಾಂತ್‌, ರಾಜ ತುಂಬೆ, ಸುಧೀರ್‌ ಶೆಟ್ಟಿ ಕುಕ್ಕುಂದೂರು, ಸ್ತ್ರೀ ಪಾತ್ರದಲ್ಲಿ ಕಡಬ ಶ್ರೀನಿವಾಸ ರೈ, ಶ್ರೀಧರ ಮಲ್ಲೂರು, ಹರೀಶ್‌ ವೇಣೂರು ಪಾಲ್ಗೊಂಡಿದ್ದರು. ಮುಖ್ಯ ಪಾತ್ರದಲ್ಲಿ ಉದಯ ಕುಮಾರ್‌ ಅಡ್ಯನಡ್ಕ, ರಾಮಣ್ಣ ರೈ ಪುತ್ತೂರು, ರಘುನಾಥ ನಲ್ಲೂರು, ಹೆಜ್ಮಾಡಿ ಮನೋಜ್‌ ಕುಮಾರ್‌, ರಂಜಿತ್‌ ಶೆಟ್ಟಿ, ಗೋವಿಂದ ಸಫಲಿಗ ಸಹಕರಿಸಿದರು. ವೇಷಭೂಷಣದಲ್ಲಿ ಸುನಿಲ್ ದೇವಾಡಿಗ, ನಂದಿನಿ ಆರ್ಟ್ಸ್ ಸಹಕಾರ ನೀಡಿದರು. ಸಭಾಂಗಣ ಪೂರ್ತಿ ಕಲಾಭಿಮಾನಿಗಳು ತುಂಬಿದ್ದು ವಿಶೇಷತೆಯಾಗಿತ್ತು.

ಚಿತ್ರ-ವರದಿ : ಕಿರಣ್‌ ರೈ ಕರ್ನೂರು ಪುಣೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.