ಭಾಂಡೂಪ್‌ನಲ್ಲಿ ರಂಜಿಸಿದ ವೀರಮಣಿ ತಾಳಮದ್ದಳೆ


Team Udayavani, Jul 19, 2017, 3:56 PM IST

17-Mum02.jpg

ಯಕ್ಷಮಿತ್ರರು ಭಾಂಡೂಪ್‌ ನಾಡಿನ ಕಲಾ ಪ್ರಕಾರಗಳನ್ನು ಉತ್ತೇಜಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿದೆ. ಅದರಲ್ಲೂ ಯಕ್ಷಗಾನ, ತಾಳಮದ್ದಳೆ ಇತ್ಯಾದಿ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಅವರ ಸರಣಿ ಯಕ್ಷಗಾನ ತಾಳಮದ್ದಳೆಯ ಅಂಗವಾಗಿ “ವೀರಮಣಿ’ ತಾಳಮದ್ದಳೆಯು ಇತ್ತೀಚೆಗೆ ಭಾಂಡೂಪ್‌ನ ಶ್ರೀ ನಿತ್ಯಾನಂದ ಮಂದಿರದ ಸಭಾಂಗಣದಲ್ಲಿ ಆಯೋಜಿಸಿ ತಾಳಮದ್ದಳೆಯ ಅಭಿಮಾನಿಗಳನ್ನು ರಂಜಿಸುವಲ್ಲಿ ಯಕ್ಷಮಿತ್ರರು ಭಾಂಡೂಪ್‌ ಯಶಸ್ವಿಯಾದರು.

ಮಂದಿರದ ಪ್ರಧಾನ ಅರ್ಚಕ ವೇದಮೂರ್ತಿ ಲಕ್ಷ್ಮೀನಾರಾಯಣ ಭಟ್‌ ಅವರು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅರ್ಚಕ ಸುಭಾಶ್‌ ಭಟ್‌, ಬಿಲ್ಲವರ ಅಸೋಸಿಯೇಶನ್‌ ಭಾಂಡೂಪ್‌ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಎಂ. ಬಿ. ಸನಿಲ್‌, ಭಾಂಡೂಪ್‌ ಶ್ರೀ ಶನಿಮಂದಿರದ ಸೀತಾರಾಮ ಜಿ. ಕರ್ಕೇರ, ಹಿರಿಯರಾದ ಸದಾನಂದ ಅಮೀನ್‌, ಯಕ್ಷಮಿತ್ರರು ಭಾಂಡೂಪ್‌ನ ಜನಾದ‌ìನ ಪೂಜಾರಿ, ವಾಸು ಎಸ್‌. ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಕಲಾವಿದ ವೇಣುಗೋಪಾಲ್‌ ಭಟ್‌ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. 

ಅಜೆಕಾರು ಕಲಾಭಿಮಾನಿ ಬಳಗದ ಅಧ್ಯಕ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರು ಅತಿಥಿಗಳನ್ನು ಅಭಿನಂದಿಸಿ ಗೌವಿಸಿದರು.

ಇದೇ ಸಂದರ್ಭದಲ್ಲಿ ನಡೆದ ವೀರಮಣಿ ತಾಳಮದ್ದಳೆಯಲ್ಲಿ ಕಾವ್ಯಶ್ರೀ ಆಜೇರು ಅವರ ಇಂಪಾದ ಹಾಡು ಗಾರಿಕೆಯು ಯಕ್ಷಕಲಾಭಿಮಾನಿಗಳನ್ನು ಆಶ್ಚರ್ಯಗೊಳಿಸಿತು. ಎಳೆಯ ಹರೆಯದಲ್ಲೇ ಉತ್ತಮ ಕಂಠದಿಂದ ಪ್ರಸಿದ್ಧಿಯನ್ನು ಹೊಂದಿರುವ ಅವರು ಯಕ್ಷಗಾನ ಕ್ಷೇತ್ರದಲ್ಲಿ ಭವಿಷ್ಯದಲ್ಲಿ ಉತ್ತಮ ಸಾಧನೆಗಳನ್ನು ಮಾಡಲಿ ದ್ದಾರೆ ಎಂಬುವುದನ್ನು ನಿರೂಪಿಸಿದರು. ಚೆಂಡೆ-ಮದ್ದಳೆಯಲ್ಲಿ ಕಟೀಲು ಮೇಳದ ಪ್ರಸಿದ್ಧ ಹಿಮ್ಮೇಳ ಕಲಾವಿದ ಪ್ರಶಾಂತ್‌ ಶೆಟ್ಟಿ ವಗೆನಾಡು, ಶ್ರೀಪತಿ ನಾಯಕ್‌ ಆಜೇರು   ತಮ್ಮಲ್ಲಿರುವ ಪ್ರತಿಭಾ ಶಕ್ತಿಯನ್ನು ಪ್ರದರ್ಶಿಸಿದರು.

ಅರ್ಥಗಾರಿಕೆಯಲ್ಲಿ ವೀರಮಣಿಯಾಗಿ ಪೆರ್ಮುದೆ ಜಯಪ್ರಕಾಶ್‌ ಶೆಟ್ಟಿ ಅವರ ಮಾತುಗಾರಿಕೆಯ ಗತ್ತು, ಆ ಶೈಲಿ ಎಲ್ಲರನ್ನು ಮಂತ್ರಮುಗ್ಧಗೊಳಿಸಿತು. ಮೊದಲ ಭಾಗದ ಹನುಮಂತನಾಗಿ ದಿನೇಶ್‌ ಶೆಟ್ಟಿ ಕಾವಳಕಟ್ಟೆ, ದ್ವಿತೀಯ ಹನುಮಂತನಾಗಿ ಹರೀಶ್‌ ಬಳಂತಿಮೊಗರು, ಈಶ್ವರನಾಗಿ ಪಕಳಕುಂಜ ಶ್ಯಾಮ್‌ ಭಟ್‌, ಶತ್ರುಘ್ನನಾಗಿ ಶೇಣಿ ವೇಣುಗೋಪಾಲ್‌ ಭಟ್‌ ಅವರು ತಮ್ಮ ಪಾತ್ರಗಳಿಗೆ ಜೀವತುಂಬುವಲ್ಲಿ ಯಶಸ್ವಿಯಾದರು. ದಿನೇಶ್‌ ಶೆಟ್ಟಿ ವಿಕ್ರೋಲಿ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸುರಿಯುತ್ತಿದ್ದ ಮಳೆಯ ನಡುವೆಯೂ ಕಲಾಭಿಮಾನಿಗಳು ವಿವಿಧ ಉಪನಗರಗಳಿಂದ ಆಗಮಿಸಿ ಕಲಾವಿದರನ್ನು ಹುರಿದುಂಬಿಸಿದರು. ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿದ್ದಾಗ ಮಾತ್ರ ನಾಡಿನ ಕಲೆ, ಸಂಸ್ಕೃತಿ, ಆಚಾರ, ವಿಚಾರಗಳು ಉಳಿಯಲು ಸಾಧ್ಯವಿದೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.