ಯಕ್ಷಗುರು ಆನಂದ ಭಟ್ರಿಗೆ ಸಮ್ಮಾನ
Team Udayavani, Mar 2, 2019, 5:46 PM IST
ಮುಂಬಯಿ: ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರ ಇದರ 14ನೇ ವಾರ್ಷಿಕೋತ್ಸವ ಸಮಾರಂಭ ಪೆರ್ಲದಲ್ಲಿ ನಡೆಯಿತು. ಈ ಸಂದರ್ಭ ಪುಣೆಯ ಯಕ್ಷಗಾನ ಕಲಾವಿದ ನಾಟ್ಯಗುರು ಮದಂಗಲ್ಲು ಆನಂದ ಭಟ್ ಅವರನ್ನು ಸಮ್ಮಾನಿಸಲಾಯಿತು.
ನಿವೃತ್ತ ಶಿಕ್ಷಕ ಪದ್ಮನಾಭ ರಾವ್ ಉದ್ಘಾಟಿಸಿದರು. ಕಲಾವಿದ ಎಸ್. ಬಿ. ನರೇಂದ್ರಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ರಾಘವೇಂದ್ರ ಭಟ್ ಉಡುಪಮೂಲೆ ಆಶೀರ್ವಚನ ನೀಡಿದರು. ಉಪನ್ಯಾಸಕ ವಿದ್ವಾನ್ ಎಸ್. ಬಿ. ಖಂಡಿಗೆ ಅವರನ್ನೂ ಈ ಸಂದರ್ಭದಲ್ಲಿ ಸಮ್ಮಾನಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ಎಸ್. ವಿ. ಭಟ್, ಪ್ರಗತಿಪರ ಕೃಷಿಕ ಹವ್ಯಾಸಿ ಪತ್ರಕರ್ತ ಚಂದ್ರಶೇಖರ ಏತಡ್ಕ ಅಭಿನಂದನಾ ಭಾಷಣ ಮಾಡಿದರು.
ಕೇಂದ್ರದ ನಿರ್ದೇಶಕ ನಾಟ್ಯಗುರು ಸಬ್ಬಣಕೋಡಿ ರಾಮಭಟ್ ವಂದಿಸಿದರು. ಯಕ್ಷಗಾನ ನಾಟ್ಯಕೇಂದ್ರ ವಿದ್ಯಾರ್ಥಿಗಳಿಂದ ಯಕ್ಷಗಾನ ಬಯಲಾಟ ಜರಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಮಾಜ – ಬ್ಯಾಂಕನ್ನು ಬಲಿಷ್ಠಗೊಳಿಸುವ ಶಕ್ತಿ ದೇವರು ಕರುಣಿಸಲಿ: ನಿತ್ಯಾನಂದ ಕೋಟ್ಯಾನ್
Desi Swara:ಸಿಟಿ ಆಫ್ ವಿಂಡ್ಸ್ ಕ್ಯಾಸ್ಪಿಯನ್: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ
Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ
Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು
Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ