ತೀವ್ರಗೊಂಡ ಲಾಲೂ ಪ್ರಸಾದ್ ಯಾದವ್ ಕಿಡ್ನಿ ಸಮಸ್ಯೆ: ಶೇ.25% ಮಾತ್ರ ಕಾರ್ಯ; ವೈದ್ಯರ ಮಾಹಿತಿ
Team Udayavani, Dec 13, 2020, 3:17 PM IST
ನವದೆಹಲಿ: ಮೇವು ಹಗರಣಕ್ಕೆ ಸಂಬಂಧಿಸಿದಂತೆ ಸೆರೆಮನೆ ವಾಸದಲ್ಲಿರುವ RJD ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಕಿಡ್ನಿ (ಮೂತ್ರಪಿಂಡ) ಕೇವಲ 25%ರಷ್ಟು ಮಾತ್ರ ಕಾರ್ಯನಿರ್ವಹಿಸುತ್ತಿದೆ. ಇದು ಸಂದರ್ಭದಲ್ಲಿಯೂ ಕೂಡಾ ಸಮಸ್ಯೆಗೆ ಎಡೆಮಾಡಿಕೊಡಬಹುದು ಎಂದು ಲಾಲೂ ವೈದ್ಯರಾದ ಡಾ. ಉಮೇಶ್ ಪ್ರಸಾದ್ ತಿಳಿಸಿದ್ದಾರೆ.
ಈ ಕುರಿತಾಗಿ ವೈದ್ಯರು ಮತ್ತು ಆಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಸದ್ಯ ಲಾಲೂ ಪ್ರಸಾದ್ ಯಾದವ್ ರನ್ನು ರಾಂಚಿಯ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಹಿರಿಯ ವಿದ್ವಾಂಸ, ಉಡುಪಿ ಬನ್ನಂಜೆ ಗೋವಿಂದಾಚಾರ್ಯ ನಿಧನ
ಲಾಲು ಪ್ರಸಾದ್ ಯಾದವ್ ಅವರು ಕಳೆದ 20 ವರ್ಷಗಳಿಂದ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದು, ಜೊತೆಗೆ ಅಧಿಕ ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಕಾಯಿಲೆಯನ್ನೂ ಹೊಂದಿದ್ದಾರೆ. ಇದು ಅವರ ಅಂಗಾಗಗಳ ಮೇಲೆ ತೀವ್ರವಾದ ಪರಿಣಾಮ ಬೀರುತ್ತಿದೆ. ಸದ್ಯಕ್ಕೆ ಅವರ ಪರಿಸ್ಥಿತಿ ಹದಗೆಟ್ಟಿದ್ದು, ಯಾವ ಸಂದರ್ಭದಲ್ಲಿ ಬೇಕಾದರೂ ಪರಿಸ್ಥಿತಿ ಚಿಂತಾಜನಕವಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.
ಅವರ ಅಂಗಾಗಗಳು ಕ್ಷೀಣಿಸುತ್ತಿದ್ದು, ಅದರ ಕಾರ್ಯವೈಖರಿಯನ್ನು ಔಷಧಿಯಿಂದಲೂ ಸರಿಪಡಿಸಲು ಕಷ್ಟವಾಗುತ್ತಿದೆ. ಲಾಲೂ ಅವರನ್ನು ಬೇರೆ ಆಸ್ಪತ್ರೆಗೆ ವರ್ಗಾಯಿಸುವುದರಿಂದ ಯಾವುದೇ ಪರಿಣಾಮ ಬೀರುವ ಸಾಧ್ಯತೆ ಇಲ್ಲ. ಈ ಕುರಿತಾಗಿ ಕೋರ್ಟ್ ಮತ್ತು ಸರ್ಕಾರ ಸೂಕ್ತ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಡಾ. ಉಮೇಶ್ ಪ್ರಸಾದ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’