ಹಾರ್ದಿಕ್‌, ರಾಹುಲ್ ಗೆ 20 ಲ.ರೂ. ದಂಡ


Team Udayavani, Apr 21, 2019, 6:00 AM IST

37

ಹೊಸದಿಲ್ಲಿ: ‘ಕಾಫಿ ವಿತ್‌ ಕರಣ್‌’ ಟೆಲಿವಿಷನ್‌ ಕಾರ್ಯಕ್ರಮದಲ್ಲಿ ಅಸಭ್ಯ ಹೇಳಿಕೆ ನೀಡಿ ಭಾರೀ ವಿವಾದಕ್ಕೊಳಗಾಗಿದ್ದ ಕೆ.ಎಲ್. ರಾಹುಲ್ ಹಾಗೂ ಹಾರ್ದಿಕ್‌ ಪಾಂಡ್ಯಗೆ ಅಂತೂ ಮುಕ್ತಿ ಸಿಕ್ಕಿದೆ. ಇಬ್ಬರನ್ನೂ ಪ್ರಕರಣದಲ್ಲಿ ವಿಚಾರಣೆ ನಡೆಸಿದ್ದ ಬಿಸಿಸಿಐ ವಿಶೇಷ ತನಿಖಾಧಿಕಾರಿ ಡಿ.ಕೆ. ಜೈನ್‌, ತಲಾ 20 ಲಕ್ಷ ರೂ. ದಂಡ ಹೇರುವ ಮೂಲಕ ಅಂತಿಮ ಶಿಕ್ಷೆ ಪ್ರಕಟಿಸಿದ್ದಾರೆ. ವಿವಾದವಾದಾಗಲೇ ತಾತ್ಕಾಲಿಕವಾಗಿ 5 ಪಂದ್ಯ ನಿಷೇಧ ಅನುಭವಿಸಿದ್ದರಿಂದ, ಇಬ್ಬರೂ ಕ್ರಿಕೆಟಿಗರು ಹೆಚ್ಚುವರಿ ನಿಷೇಧದಿಂದ ಪಾರಾಗಿದ್ದಾರೆ.

ಕಾಫಿ ವಿತ್‌ ಕರಣ್‌ ಟೀವಿ ಶೋನಲ್ಲಿ ಹಾರ್ದಿಕ್‌, ಹಲವು ಮಹಿಳೆಯರೊಂದಿಗೆ ನನಗೆ ಸಂಬಂಧವಿದೆ ಎಂದು ಮುಕ್ತವಾಗಿ ಮಾತನಾಡಿದ್ದು ಮಹಿಳಾ ವರ್ಗದ ಅಸಮಾಧಾನಕ್ಕೆ ಕಾರಣವಾಗಿತ್ತು. ಇದೇ ಕಾರ್ಯಕ್ರಮದಲ್ಲಿ ರಾಹುಲ್ ಯಾವುದೇ ವಿವಾದಾತ್ಮಕ ಹೇಳಿಕೆ ನೀಡದಿದ್ದರೂ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಂದ ಅವರನ್ನೂ ದೋಷಿಯ ಸ್ಥಾನದಲ್ಲಿ ನಿಲ್ಲಿಸಲಾಗಿತ್ತು.

4 ವಾರಗಳಲ್ಲಿ ದಂಡ ಪಾವತಿ
ಇಬ್ಬರೂ 4 ವಾರಗಳೊಳಗೆ ತಲಾ 20 ಲಕ್ಷ ರೂ. ದಂಡವನ್ನು ಪಾವತಿಸುವಂತೆ ಡಿ.ಕೆ. ಜೈನ್‌ ತಿಳಿಸಿದ್ದಾರೆ. ಇದರಲ್ಲಿ ವಿಫ‌ಲವಾದರೆ, ಇಬ್ಬರ ಪಂದ್ಯ ಶುಲ್ಕದಲ್ಲಿ ಕಡಿತಗೊಳಿಸಿ, ದಂಡ ವಸೂಲಿ ಮಾಡುವುದಾಗಿ ಎಚ್ಚರಿಸಲಾಗಿದೆ.

ಇಬ್ಬರೂ ಪಾವತಿಸುವ 20 ಲಕ್ಷ ರೂ. ಪೈಕಿ 10 ಲಕ್ಷ ರೂ. ಮೊತ್ತವನ್ನು ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ಯೋಧರ ಪತ್ನಿಯರಿಗೆ, ಒಂದು ಲಕ್ಷ ರೂ.ನಂತೆ ನೀಡಲಾಗುತ್ತದೆ. ತುರ್ತು ಆರ್ಥಿಕ ನೆರವಿನ ಅಗತ್ಯವುಳ್ಳ ಪತ್ನಿಯರನ್ನು ಗುರುತಿಸಿ, ‘ಭಾರತ್‌ ಕೆ ವೀರ್‌ ಆ್ಯಪ್‌’ ಮೂಲಕ ಪಾವತಿ ಮಾಡಲಾಗುತ್ತದೆ. ಇನ್ನುಳಿದ 10 ಲಕ್ಷ ರೂ.ಗಳನ್ನು ಭಾರತದ ಅಂಧ ಕ್ರಿಕೆಟಿಗರ ಸಂಸ್ಥೆಗೆ ನೀಡಲಾಗುತ್ತದೆ.

ಸಮಾಜಕ್ಕೆ ಮಾದರಿ
ಕ್ರಿಕೆಟಿಗರು ಕ್ರಿಕೆಟ್‌ನಲ್ಲಿ ಆಸಕ್ತಿ ಹೊಂದಿರುವ ಯುವಕರಿಗೆ ಮಾತ್ರವಲ್ಲ, ಇಡೀ ಸಮಾಜಕ್ಕೆ ಮಾದರಿಯಾಗಿರುತ್ತಾರೆ. ಯುವಜನತೆ ಇವರನ್ನು ಗಮನಿಸುವುದರ ಜತೆಗೆ ಪ್ರಭಾವಕ್ಕೊಳಗಾಗುತ್ತಾರೆ. ಆದ್ದರಿಂದ ಅವರು ಬೇಕಾಬಿಟ್ಟಿ ಮಾತನಾಡುವಂತಿಲ್ಲ ಎಂದು ಜೈನ್‌, ಶಿಕ್ಷೆ ಪ್ರಕಟಿಸಿದ ಅನಂತರ ಹೇಳಿದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.