2021ರ ಚಾಂಪಿಯನ್ಸ್‌ಟ್ರೋಫಿ ರದ್ದು: ಬಿಸಿಸಿಐನಲ್ಲಿ ಹೊಸ ವಿವಾದ 


Team Udayavani, Jun 22, 2018, 11:24 AM IST

bcci-logo.jpg

ದುಬೈ: ಬಹಳ ದಿನಗಳಿಂದ ಬಿಸಿಸಿಐ ಮತ್ತು ಐಸಿಸಿ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದ ವಿವಾದವೊಂದು ಸದ್ದಿಲ್ಲದೇ ಮುಗಿದುಹೋಗಿದೆ. 2021ರಲ್ಲಿ ಭಾರತದ ಆತಿಥ್ಯದಲ್ಲಿ ನಡೆಯಬೇಕಿದ್ದ ಏಕದಿನ ಚಾಂಪಿಯನ್ಸ್‌ ಟ್ರೋಫಿ ರದ್ದಾಗಿದೆ. ಅದರ ಬದಲು ಟಿ20 ವಿಶ್ವಕಪ್‌ ನಡೆಯಲಿದೆ. ಐಸಿಸಿ ಭವಿಷ್ಯದ ವೇಳಾಪಟ್ಟಿಯಲ್ಲಿ ಈ ಮಹತ್ವದ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.

ಐಸಿಸಿ ಮತ್ತು ಬಿಸಿಸಿಐನ ಮಾಜಿ ಮುಖ್ಯಸ್ಥ, ದಿವಂಗತ ಜಗಮೋಹನ್‌ ದಾಲ್ಮಿಯಾ ಚಾಂಪಿಯನ್ಸ್‌ ಟ್ರೋಫಿ ಯನ್ನು ಆರಂಭಿಸಿದ್ದರು. 2021ರಲ್ಲಿ ದಾಲ್ಮಿಯಾ ಪುಣ್ಯತಿಥಿಯಂದೇ ಚಾಂಪಿಯನ್ಸ್‌ ಟ್ರೋಫಿ ನಡೆಸಲು ಬಿಸಿಸಿಐ ತೀರ್ಮಾನಿಸಿತ್ತು. ಅದನ್ನು ಆರ್ಥಿಕ ಕಾರಣಗಳಿಗಾಗಿ ಐಸಿಸಿ ವಿರೋಧಿಸಿತ್ತು. ಭಾರತದಲ್ಲಿ ಮಹತ್ವದ ಕೂಟಗಳಿಗೂ ಸರ್ಕಾರ ತೆರಿಗೆ ವಿನಾಯ್ತಿ ನೀಡುವುದಿಲ್ಲ. ಇದರಿಂದ ತನಗೆ ಬಹಳ ನಷ್ಟವಾಗುತ್ತದೆ ಎನ್ನುವುದು ಐಸಿಸಿ ಆರೋಪ. ಇದಕ್ಕೂ ಹೆಚ್ಚಾಗಿ ಈ ಕೂಟಗಳನ್ನು ಭಾರತದಿಂದ ಹೊರಕ್ಕೆ ನಡೆಸಲು ಐಸಿಸಿ ಬಯಸಿತ್ತು. ಬೇರೆ ಬೇರೆ ಕಾರಣಗಳಿಂದ ಭಾರತದಲ್ಲಿ ಈ ಕೂಟ ನಡೆಸದಿರುವುದೇ ಸರಿ ಎನ್ನುವುದು ಅದರ ವಾದ. ಈ ಬಗ್ಗೆ ಎರಡೂ ಸಂಸ್ಥೆಗಳ ನಡುವೆ ದೀರ್ಘ‌ ಚಕಮಕಿ ನಡೆದಿತ್ತು. ಇತ್ತೀಚೆಗೆ ಐಸಿಸಿ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನವಾಗಿದೆ. ಚಾಂಪಿಯನ್ಸ್‌ ಟ್ರೋಫಿ ರದ್ದಾಗಿದೆ.

ಚಾಂಪಿಯನ್ಸ್‌ ಟ್ರೋಫಿ ಶಾಶ್ವತ ರದ್ದು?
 ಚಾಂಪಿಯನ್ಸ್‌ ಟ್ರೋಫಿಯನ್ನು ಶಾಶ್ವತವಾಗಿ ರದ್ದು ಮಾಡಲು ಐಸಿಸಿ ಬಯಸಿದೆ. ವಿಪರೀತ ವೇಳಾಪಟ್ಟಿ ಇರುವುದರಿಂದ ಇದು ಬೇಡ. ಟಿ20 ಕಾಲದಲ್ಲಿ ಏಕದಿನ ಕೂಟಗಳಿಗೆ ಹೆಚ್ಚಿನ ಪ್ರಚಾರ ಸಿಗುವುದಿಲ್ಲ. ಆದ್ದರಿಂದ ಶಾಶ್ವತವಾಗಿಯೇ ಇದನ್ನು ನಿಲ್ಲಿಸಬೇಕೆಂದು ಐಸಿಸಿ ಅಭಿಪ್ರಾಯ ಪಟ್ಟಿದೆ. ಬಿಸಿಸಿಐ ವಿರೋಧದ ಹಿನ್ನೆಲೆಯಲ್ಲಿ ಇನ್ನೂ ಕೂಟ ಉಳಿದುಕೊಂಡಿದೆ.

ಚಾಂಪಿಯನ್ಸ್‌ ಟ್ರೋಫಿ ರದ್ದಾಗಿದ್ದು ಆಡಳಿತಾಧಿಕಾರಿಗಳಿಗೇ ಗೊತ್ತಿಲ್ಲ!
ನವದೆಹಲಿ: ಬಿಸಿಸಿಐನ ನ್ಯಾಯಾಲಯ ನಿಯೋಜಿತ ಆಡಳಿತಾಧಿಕಾರಿಗಳು ಮತ್ತು ಪದಾಧಿಕಾರಿಗಳ ನಡುವಿನ ಒಳಜಗಳ ಈಗ ತಾರಕ್ಕೇರಿದೆ.

2021ರಲ್ಲಿ ಭಾರತದಲ್ಲಿ ನಡೆಯಬೇಕಿದ್ದ ಏಕದಿನ ಚಾಂಪಿಯನ್ಸ್‌ ಟ್ರೋಫಿ ರದ್ದಾಗಿ ಅದರ ಬದಲು ಟಿ20 ವಿಶ್ವಕಪ್‌ ನಡೆಯಲು ನಿರ್ಧಾರವಾಗಿದ್ದು ತನಗೆ ಗೊತ್ತೇ ಇಲ್ಲ. ತನಗೆ ಗೊತ್ತಿಲ್ಲದೇ ಪದಾಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆಂದು ಆಡಳಿತಾಧಿಕಾರಿಗಳು ಆಪಾದಿಸಿದ್ದಾರೆ. ಐಸಿಸಿ ಸಭೆಯಲ್ಲಿ ಬಿಸಿಸಿಐ ಪದಾಧಿಕಾರಿಗಳು ಚಾಂಪಿಯನ್ಸ್‌ ಟ್ರೋಫಿ ರದ್ದುಪಡಿಸಲು ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ತನಗೆ ಅಧಿಕೃತ ಘೋಷಣೆಯಾಗುವವರೆಗೆ ಗೊತ್ತೇ ಆಗಿಲ್ಲ ಎನ್ನುವುದು ಆಡಳಿತಾಧಿಕಾರಿಗಳ ನೋವು.

ಇಷ್ಟು ಮಾತ್ರವಲ್ಲದೇ, ಬಿಸಿಸಿಐನ ಕಾರ್ಯದರ್ಶಿ ಅಮಿತಾಭ್‌ ಚೌಧರಿ ಅವರು, ಭೂತಾನ್‌ಗೆ ತೆರಳಿ ಕ್ರಿಕೆಟ್‌ ಬೆಳವಣಿಗೆಗೆ ಇರುವ ಪರಿ ಸ್ಥಿತಿ ಅವಲೋಕನ ಮಾಡಿ ಬಂದಿದ್ದಾರೆ. ಆದರೆ, ಇದೆಲ್ಲವನ್ನೂ ಸಮಿತಿಯ ಗಮನಕ್ಕೆ ತಾರದೇ ಮಾಡಲಾಗಿದೆ ಎಂದು ಸಮಿತಿ ಆರೋಪಿಸಿದೆ.

ಈ ಕುರಿತಂತೆ,ಚೌಧರಿಯವರಿಗೆ ಪತ್ರ ಬರೆದಿರುವ ಸಮಿತಿ, ಜು. 4ರೊಳಗೆ ಉತ್ತರಿಸುವಂತೆ ಸೂಚಿಸಿದೆ. ಇದಕ್ಕೂ ಕೆಲ ದಿನಗಳ ಮುನ್ನ ಎರಡೂ ಗುಂಪಿನ ನಡುವೆ ಇನ್ನೊಂದು ಚಕಮಕಿ ನಡೆದಿತ್ತು. ಇಂಗ್ಲೆಂಡ್‌ನ‌ಲ್ಲಿ ನಡೆಯುವ ಐಸಿಸಿ ಸಭೆಯ ನಂತರ ಭಾರತ-ಇಂಗ್ಲೆಂಡ್‌ ನಡುವಿನ 3 ಟಿ20 ಪಂದ್ಯ ನೋಡಲು ಕಾರ್ಯದರ್ಶಿ ಚೌಧರಿ ಬಯಸಿದ್ದರು. ಈ ಖರ್ಚುಗಳನ್ನು ಬಿಸಿಸಿಐ ಭರಿಸಲು ಸಾಧ್ಯವಿಲ್ಲ ಅದನ್ನು ನಿಮ್ಮದೇ ಖರ್ಚಿನಲ್ಲಿ ನೋಡಿಕೊಳ್ಳಿ ಎಂದು ಆಡಳಿತಾಧಿಕಾರಿಗಳು ಕಠಿಣವಾಗಿ ಹೇಳಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.