2021ರ ಟೋಕಿಯೊ ಒಲಿಂಪಿಕ್ಸ್‌; ಅರ್ಹತಾ ಆ್ಯತ್ಲೀಟ್‌ಗಳ ಸ್ಥಾನ ಭದ್ರ


Team Udayavani, Mar 28, 2020, 7:00 AM IST

2021ರ ಟೋಕಿಯೊ ಒಲಿಂಪಿಕ್ಸ್‌; ಅರ್ಹತಾ ಆ್ಯತ್ಲೀಟ್‌ಗಳ ಸ್ಥಾನ ಭದ್ರ

ಪ್ಯಾರಿಸ್‌: ಟೋಕಿಯೊ ಒಲಿಂಪಿಕ್ಸ್‌ಗೆ ಈಗಾಗಲೇ ಅರ್ಹತೆ ಗಳಿಸಿದ ಆ್ಯತ್ಲೀಟ್‌ಗಳು 2021ರಂದು ನಡೆಯುವ ಗೇಮ್ಸ್‌ನಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ 11,000 ಆ್ಯತ್ಲೀಟ್‌ಗಳು ಭಾಗವಹಿಸುವ ನಿರೀಕ್ಷೆಯಿದೆ. ಕೋವಿಡ್‌ 19 ವೈರಸ್‌ ವಿಶ್ವದಾದ್ಯಂತ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂಟರ್‌ನ್ಯಾಶನಲ್‌ ಒಲಿಂಪಿಕ್‌ ಸಮಿತಿ (ಐಒಸಿ) ಒಲಿಂಪಿಕ್‌ ಕೂಟವನ್ನು 2021ಕ್ಕೆ ಮುಂದೂಡುವುದಕ್ಕಿಂತ ಮೊದಲೇ ಶೇ. 57ರಷ್ಟು ಮಂದಿ ಗೇಮ್ಸ್‌ನಲ್ಲಿ ಭಾಗವಹಿಸಲು ಅರ್ಹತೆ ಗಳಿಸಿದ್ದರು.
ಐಒಸಿ ಮತ್ತು 32 ಅಂತಾರಾಷ್ಟ್ರೀಯ ಕ್ರೀಡಾ ಫೆಡರೇಶನ್‌ಗಳು ಗುರುವಾರ ನಡೆಸಿದ ಟೆಲಿಕಾನ್ಫರೆನ್ಸ್‌ ಚರ್ಚೆಯಲ್ಲಿ ಅರ್ಹತಾ ಪ್ರಕ್ರಿಯೆಯನ್ನು ಗೌರವಿಸಲು ನಿರ್ಧರಿಸಿತು. ಚರ್ಚೆಯ ಬಳಿಕ ಮಾತನಾಡಿದ ಐಒಸಿ ಮುಖ್ಯಸ್ಥ ಥಾಮಸ್‌ ಬಾಕ್‌ ಅವರು ಗೇಮ್ಸ್‌ ಮುಂದೂಡಿದ ಕಾರಣವನ್ನು ತಿಳಿಸಿದರಲ್ಲದೇ 2020ರ ಗೇಮ್ಸ್‌ಗೆ ಅರ್ಹತೆ ಗಳಿಸಿದ ಆ್ಯತ್ಲೀಟ್‌ಗಳು ನೇರವಾಗಿ 2021ರ ಗೇಮ್ಸ್‌ನಲ್ಲಿ ಭಾಗವಹಿಸಬಹುದು ಎಂದು ಸ್ಪಷ್ಟಪಡಿಸಿದರು.

ಟೋಕಿಯೊ ಗೇಮ್ಸ್‌ ಜುಲೈ 24ರಿಂದ ಆ. 9ರ ವರೆಗೆ ನಡೆಯಬೇಕಿತ್ತು. ಇದಕ್ಕಿಂತ ಮೊದಲು ನಾವು ಅರ್ಹತಾ ಕೂಟಗಳನ್ನು ಸಂಘಟಿಸಿ ಅರ್ಹ ಆ್ಯತ್ಲೀಟ್‌ಗಳ ಆಯ್ಕೆ ಮಾಡಬೇಕಿತ್ತು. ಕೆಲವು ಫೆಡರೇಶನ್‌ಗಳಲ್ಲಿ ಹಲವು ಪುರುಷ ಮತ್ತು ವನಿತಾ ಕ್ರೀಡಾಪಟುಗಳು ಇನ್ನಷ್ಟೇ ಅರ್ಹತೆ ಗಳಿಸಬೇಕಿದೆ. ಇದಕ್ಕೆ ಕಡಿಮೆಪಕ್ಷ ಮೂರು ತಿಂಗಳಾದರೂ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಜಪಾನಿನ ಪ್ರಧಾನಮಂತ್ರಿ ಶಿಂಜೊ ಅಬೆ ಜತೆ ನಡೆಸಿದ ಮಾತುಕತೆಯಲ್ಲಿ ಒಲಿಂಪಿಕ್‌ ಕೂಟ ಮುಂದೂಡುವ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಬಾಕ್‌ ವಿವರಿಸಿದರು.

ದಿನಾಂಕ ನಿರ್ಧಾರವಾಗಿಲ್ಲ
ಮುಂದೂಡಲ್ಪಟ್ಟ ಒಲಿಂಪಿಕ್‌ ಗೇಮ್ಸ್‌ ಯಾವಾಗ ನಡೆಯುವ ಬಗ್ಗೆ ಇನ್ನೂ ಖಚಿತ ನಿರ್ಧಾರವಾಗಿಲ್ಲ. 2021ರ ಮೇ ತಿಂಗಳಲ್ಲಿ ನಡೆಸಲು ಕೆಲವರು ಒಲವು ವ್ಯಕ್ತಪಡಿಸಿದರೆ ಇನ್ನೂ ಕೆಲವರು ಜೂನ್‌ ಸೂಕ್ತವೆಂದು ಅಭಿಪ್ರಾಯ ತಿಳಿಸಿದ್ದಾರೆ. ಕೆಲವು ಫೆಡರೇಶನ್‌ಗಳು ಆರ್ಥಿಕ ಸಮಸ್ಯೆಯ ಬಗ್ಗೆಯೂ ಕಳವಳ ವ್ಯಕ್ತಪಡಿಸಿವೆ.

ಟಾಪ್ ನ್ಯೂಸ್

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.