ಏಕಪಕ್ಷೀಯ ನಿರ್ಧಾರ : ಹಾಕಿ ಇಂಡಿಯಾ ವಿರುದ್ಧ ಕ್ರೀಡಾ ಸಚಿವ ಕಿಡಿ
Team Udayavani, Oct 10, 2021, 2:25 PM IST
ಹೊಸದಿಲ್ಲಿ : ಬರ್ಮಿಂಗ್ ಹ್ಯಾಮ್ ಕಾಮನ್ವೆಲ್ತ್ ಕ್ರೀಡಾಕೂಟದಿಂದ ಹೊರ ಬರಲು ನಿರ್ಧರಿಸಿದ ಹಾಕಿ ಇಂಡಿಯಾ ವಿರುದ್ಧ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಭಾನುವಾರ ಅಸಮಾಧಾನ ಹೊರಹಾಕಿದ್ದಾರೆ.
ಏಕಪಕ್ಷೀಯವಾಗಿ ನಿರ್ಧರಿಸುವುದು ಸರಿಯಲ್ಲ, ಅಂತಹ ಯಾವುದೇ ಕ್ರಮವನ್ನು ತೆಗೆದುಕೊಳ್ಳುವ ಮೊದಲು ರಾಷ್ಟ್ರೀಯ ಒಕ್ಕೂಟವು ಸರಕಾರದೊಂದಿಗೆ ಸಮಾಲೋಚಿಸಬೇಕು ಎಂದರು.
ಒಲಿಂಪಿಕ್ಸ್ ಗೆ ಪ್ರಮುಖ ಹಣಕಾಸು ನೆರವು ನೀಡುವ ದೇಶಕ್ಕೆ ಕ್ರೀಡಾಕೂಟದಲ್ಲಿ ಪ್ರತಿನಿಧಿಸುವ ಬಗೆಗೆ ನಿರ್ಧಾರ ತೆಗೆದುಕೊಳ್ಳುವ ಹಕ್ಕಿದೆ. ಇದು ಹಾಕಿ ಫೆಡರೇಷನ್ ನ ತಂಡವಲ್ಲ, ದೇಶವನ್ನು ಪ್ರತಿನಿಧಿಸುತ್ತಿರುವ ತಂಡ ಎಂದು ಕಿಡಿ ಕಾರಿದರು.
ಹಾಕಿ ಫೆಡರೇಷನ್ ಇಂತಹ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು ಮತ್ತು ಮೊದಲು ಸರಕಾರದೊಂದಿಗೆ ಚರ್ಚಿಸಬೇಕು. 130 ಕೋಟಿ ಜನಸಂಖ್ಯೆ ಇರುವ ದೇಶದಲ್ಲಿ ಕೇವಲ 18 ಆಟಗಾರರು ದೇಶವನ್ನು ಪ್ರತಿನಿಧಿಸುವುದಲ್ಲ. ಕಾಮನ್ವೆಲ್ತ್ ಜಾಗತಿಕ ಕ್ರೀಡಾಕೂಟವಾಗಿದ್ದು, ಹಾಕಿ ಫೆಡರೇಷನ್ ಕೂಡಲೇ ಸರಕಾರ ಮತ್ತು ಸಂಬಂಧ ಪಟ್ಟ ಇಲಾಖೆಯೊಂದಿಗೆ ಚರ್ಚೆ ನಡೆಸಬೇಕು.ಸರಕಾರ ಆ ಬಗ್ಗೆ ನಿರ್ಧರಿಸುತ್ತದೆ ಎಂದರು.
ಕೋವಿಡ್ ಕಾರಣ ಮುಂದಿಟ್ಟು ಜೊತೆಗೆ ಭಾರತೀಯರಿಗೆ ಇಂಗ್ಲೆಂಡ್ ನಲ್ಲಿ ವಿಧಿಸುತ್ತಿರುವ ಕಠಿಣ ಕ್ವಾರಂಟೈನ್ ನಿಯಮಗಳನ್ನು ವಿರೋಧಿಸಿ 2022 ರ ಕಾಮನ್ವೆಲ್ತ್ ಕ್ರೀಡಾಕೂಟದಿಂದ ಹೊರ ಬರಲು ಹಾಕಿ ತಂಡ ನಿರ್ಧರಿಸಿತ್ತು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ