ಭಾರತದ ಆತಿಥ್ಯದಲ್ಲಿ 2023ರ ವಿಶ್ವಕಪ್‌


Team Udayavani, Jul 17, 2019, 5:46 AM IST

world-cup

ಮುಂಬಯಿ: ಇಂಗ್ಲೆಂಡಿನ ಆತಿಥ್ಯದಲ್ಲಿ ಈ ಬಾರಿಯ ವಿಶ್ವಕಪ್‌ ಕ್ರಿಕೆಟ್‌ ಕೂಟ ಅತ್ಯಂತ ಯಶಸ್ವಿಯಾಗಿ ಮುಗಿದಿದೆ. ಈ ಬಾರಿ ಆತಿಥ್ಯ ವಹಿಸಿದ ಇಂಗ್ಲೆಂಡ್‌ ಪ್ರಶಸ್ತಿ ಗೆಲ್ಲುವ ಮೂಲಕ ಮೊದಲ ಸಲ ಚಾಂಪಿಯನ್‌ ಆಗಿದೆ. ಈ ಹಿಂದಿನ ಎರಡು ವಿಶ್ವಕಪ್‌ ಕೂಟದ ಆತಿಥ್ಯ ವಹಿಸಿದ ರಾಷ್ಟ್ರಗಳೇ ಪ್ರಶಸ್ತಿ ಜಯಿಸಿದ್ದವು. 2011ರಲ್ಲಿ ಭಾರತ ಮತ್ತು 2015ರಲ್ಲಿ ಆಸ್ಟ್ರೇಲಿಯ ಪ್ರಶಸ್ತಿ ಗೆದ್ದು ಸಂಭ್ರಮಿಸಿದ್ದವು.

ಇನ್ನು ಮುಂದಿನ ವಿಶ್ವಕಪ್‌ ಸಂಭ್ರಮಕ್ಕಾಗಿ ನಾಲ್ಕು ವರ್ಷ ಕಾಯಬೇಕಾಗಿದೆ. 2023ರ ವಿಶ್ವಕಪ್‌ನ ಆತಿಥ್ಯವನ್ನು ಭಾರತ ವಹಿಸಲಿದೆ. ಭಾರತ ತನ್ನ ಸ್ವಂತ ಬಲದಲ್ಲಿ ವಿಶ್ವಕಪ್‌ ಕೂಟವೊಂದರ ಆತಿಥ್ಯ ವಹಿಸಲಿರುವುದು ಇದೇ ಮೊದಲ ಸಲವಾಗಿದೆ. ಈ ಹಿಂದೆ ಮೂರು ಬಾರಿ ಭಾರತವು ನೆರೆ ರಾಷ್ಟ್ರಗಳ ಜತೆಗೂಡಿ ವಿಶ್ವಕಪ್‌ ಆಯೋಜಿಸಿತ್ತು.

ಲಂಡನ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ)ನ ಸಭೆಯಲ್ಲಿ ವಿಶ್ವಕಪ್‌ ಆತಿಥ್ಯ ರಾಷ್ಟ್ರ ಯಾವುದೆಂದು ನಿರ್ಧರಿಸಲಾಯಿತು. ಭಾರತವು 1987ರಲ್ಲಿ ಪಾಕಿಸ್ಥಾನ ಜತೆ, 1996ರಲ್ಲಿ ಪಾಕಿಸ್ಥಾನ ಮತ್ತು ಶ್ರೀಲಂಕಾ ಹಾಗೂ 2011ರಲ್ಲಿ ಶ್ರೀಲಂಕಾ ಮತ್ತು ಬಾಂಗ್ಲಾದೇಶ ಜತೆಗೂಡಿ ವಿಶ್ವಕಪ್‌ ಕೂಟವನ್ನು ಆಯೋಜಿಸಿತ್ತು.

1987ರ ವಿಶ್ವಕಪ್‌ ಮೊದಲ ಬಾರಿ ಇಂಗ್ಲೆಂಡಿನ ಹೊರಗಡೆ ನಡೆದಿತ್ತು. ಈ ಕೂಟವನ್ನು ಭಾರತ ಮತ್ತು ಪಾಕಿಸ್ಥಾನ ಜಂಟಿಯಾಗಿ ಆಯೋಜಿಸಿದ್ದವು. ಪಾಕಿಸ್ಥಾನವು 2011ರ ವಿಶ್ವಕಪ್‌ನ ಸಹ ಆತಿಥ್ಯವನ್ನು ಆರಂಭದಲ್ಲಿ ವಹಿಸಿತ್ತು. ಆದರೆ ಭದ್ರತಾ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪಾಕಿಸ್ಥಾನವನ್ನು ಕೈಬಿಡಲಾಗಿತ್ತು. 2011ರ ವಿಶ್ವಕಪ್‌ ಫೈನಲ್‌ ಮುಂಬಯಿಯ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಿತು.

ಫೆ. 9ರಿಂದ ಮಾ. 26
2023ರ ಐಸಿಸಿ ವಿಶ್ವಕಪ್‌ ಕೂಟವು ಭಾರತದಲ್ಲಿ ಫೆ. 9ರಿಂದ ಮಾ. 26ರ ವರೆಗೆ ನಡೆಯಲಿದೆ. ಈ ಕೂಟದಲ್ಲಿ ಅಗ್ರ 10 ತಂಡಗಳು ಭಾಗವಹಿಸಲಿವೆ. ಅಗ್ರ ಏಳು ತಂಡಗಳ ಸಹಿತ ಭಾರತ ನೇರವಾಗಿ ಅರ್ಹತೆ ಗಳಿಸಲಿದೆ. ಇನ್ನುಳಿದ ಎರಡು ತಂಡಗಳು ವಿಶ್ವಕಪ್‌ ಅರ್ಹತಾ ಕೂಟದ ಮೂಲಕ ಅರ್ಹತೆ ಗಳಿಸಬೇಕಾಗಿದೆ.

ಇಂಗ್ಲೆಂಡ್‌ 5 ಬಾರಿ ಆತಿಥ್ಯ
ಕ್ರಿಕೆಟ್‌ ವಿಶ್ವಕಪ್‌ ಕೂಟದ ಆತಿಥ್ಯವನ್ನು ಇಂಗ್ಲೆಂಡ್‌ ಗರಿಷ್ಠ ಐದು ಬಾರಿ ವಹಿಸಿದೆ. 1975, 1979 ಮತ್ತು 1983ರಲ್ಲಿ ತಾನಾಗಿಯೇ ಆತಿಥ್ಯ ವಹಿಸಿದ್ದರೆ 1999 ಮತ್ತು 2019ರಲ್ಲಿ ಅಯರ್‌ಲ್ಯಾಂಡ್‌, ನೆದರ್ಲೆಂಡ್‌, ಸ್ಕಾಟ್ಲೆಂಡ್‌ ಮತ್ತು ವೇಲ್ಸ್‌ ಜತೆಗೂಡಿ ಆತಿಥ್ಯ ವಹಿಸಿತ್ತು.

ಟಾಪ್ ನ್ಯೂಸ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.