ಒಂದೇ ಇನ್ನಿಂಗ್ಸ್ ನಲ್ಲಿ ಹತ್ತು ವಿಕೆಟ್: ಕುಂಬ್ಳೆ ಅಪರೂಪದ ಸಾಧನೆಗೆ 21 ವರ್ಷ


Team Udayavani, Feb 7, 2020, 10:21 AM IST

anil

ಭಾರತದ ಲೆಗ್ ಸ್ಪಿನ್ ಲೆಜೆಂಡ್ ಅನಿಲ್ ಕುಂಬ್ಳೆಯವರ ಆ ಅಪರೂಪದ ಸಾಧನೆಗೆ ಇಂದಿಗೆ 21 ವರ್ಷ. ಒಂದು ಇನ್ನಿಂಗ್ಸ್ ನ ಎಲ್ಲಾ ಹತ್ತು ವಿಕೆಟ್ ಗಳನ್ನು ಕಬಳಿಸಿದ್ದ ಜಂಬೋ ಸಾಧನೆಗೆ ಈಗ 21 ವರ್ಷ.

1999ರಲ್ಲಿ ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದಿದ್ದ ಪಾಕಿಸ್ಥಾನ ವಿರುದ್ಧದ ಪಂದ್ಯದಲ್ಲಿ ಅನಿಲ್ ಕುಂಬ್ಳೆ ಎಲ್ಲಾ ಹತ್ತು ವಿಕೆಟ್ ಕಬಳಿಸಿದ್ದರು. ಅಂದಿನ ಇನ್ನಿಂಗ್ಸ್ ನಲ್ಲಿ 26.3 ಓವರ್ ಎಸೆದಿದ್ದ ಕುಂಬ್ಳೆ ನೀಡಿದ್ದು ಕೇವಲ 74 ರನ್.

ಎರಡು ಟೆಸ್ಟ್ ಪಂದ್ಯಗಳ ಸರಣಿ ಆಡಲು ಭಾರತಕ್ಕೆ ಬಂದಿದ್ದ ಪಾಕಿಸ್ಥಾನ ತಂಡ ಚೆನ್ನೈನಲ್ಲಿ ಮೊದಲ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಮುನ್ನಡೆ ಪಡೆದಿತ್ತು. ಎರಡನೇ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದ್ದ ಟೀಂ ಇಂಡಿಯಾದ ನೆರವಿಗೆ ನಿಂತಿದ್ದು ಕನ್ನಡದ ಹೆಮ್ಮೆ ಅನಿಲ್ ಕುಂಬ್ಳೆ.

ದಿಲ್ಲಿ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದಅಜರುದ್ದೀನ್ ನಾಯಕತ್ವದ ಭಾರತ 252 ರನ್ ಗಳಿಸಿತ್ತು.ಕುಂಬ್ಳೆ ಮತ್ತು ಹರ್ಭಜನ್ ದಾಳಿಗೆ ನಲುಗಿದ್ದ ಪಾಕ್ ಮೊದಲ ಇನ್ನಿಂಗ್ಸ್ ನಲ್ಲಿ 172 ರನ್ ಗೆ ಆಲ್ ಔಟ್ ಆಗಿತ್ತು. ಕುಂಬ್ಳೆ 4 ಮತ್ತು ಹರ್ಭಜನ್ ಸಿಂಗ್ ಮೂರು ವಿಕೆಟ್ ಪಡೆದಿದ್ದರು.

ಎರಡನೇ ಇನ್ನಿಂಗ್ಸ್ ನಲ್ಲಿ ಸದಗೋಪನ್ ರಮೇಶ್ ಅವರ 96 ರನ್ ನೆರವಿನಿಂದ ಭಾರತ 339 ರನ್ ಗಳಿಸಿತು. ಪಂದ್ಯ ಗೆಲ್ಲಲು ಪಾಕ್ ಗೆ ಗುರಿ 420 ರನ್. ಎರಡು ದಿನ ಮತ್ತೂ ಬಾಕಿ ಇತ್ತು. ಆದರೆ ಬ್ಯಾಟಿಂಗ್ ಅರಂಭಿಸಿದ ಸಯೀದ್ ಅನ್ವರ್ ಮತ್ತು ಶಾಹಿದ್ ಅಫ್ರಿದಿ ಮೊದಲ ವಿಕೆಟ್ ಗೆ 101 ರನ್ ಗಳಿಸಿದರು. ಆಗ ಕುಂಬ್ಳೆ ಬೌಲಿಂಗ್ ನಲ್ಲಿ ನಯನ್ ಮೊಂಗಿಯಾ ಹಿಡಿದ ಉತ್ತಮ ಕ್ಯಾಚ್ ಗೆ ಅಫ್ರಿದಿ ಔಟಾದರು. ನಂತರ ಆರಂಭವಾಗಿದ್ದು ಕುಂಬ್ಳೆ ಜಾದೂ.

ಎಲ್ಲಾ ಹತ್ತು ವಿಕೆಟ್ ಗಳು ಕುಂಬ್ಳೆ ಬೊಗಸೆಯಲ್ಲಿ. ಭಾರತಕ್ಕೆ 212 ರನ್ ಗಳ ಭರ್ಜರಿ ಜಯ. ಒಂದು ಇನ್ನಿಂಗ್ಸ್ ನ ಎಲ್ಲಾ ಹತ್ತು ವಿಕೆಟ್ ಪಡೆದ ಸಾಧನೆ ಮಾಡಿದ ಎರಡನೇ ಬೌಲರ್ ಎಂಬ ಖ್ಯಾತಿಗೆ ಅನಿಲ್ ಕುಂಬ್ಳೆ ಪಾತ್ರರಾದರು. ಅದಕ್ಕಿಂತ ಮೊದಲು ಜಿಮ್ ಲೇಕರ್ ಈ ಸಾಧನೆ ಮಾಡಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.