2ನೇ ಪಂದ್ಯ: ಭಾರತ ಎ ತಂಡಕ್ಕೆ ಭರ್ಜರಿ ಜಯ


Team Udayavani, Jun 9, 2019, 10:33 AM IST

bg-tdy-2..

ಅಮೋಘ ಶತಕ ಸಿಡಿಸಿ ಪಂದ್ಯದ ಶ್ರೇಷ್ಠ ಪ್ರಶಸ್ತಿ ಪಡೆದ ಶುಭಮನ್‌ ಗಿಲ್.

ಬೆಳಗಾವಿ: ಎರಡು ದಿನಗಳ ಹಿಂದಷ್ಟೆ ಬೆಳಗಾವಿಯ ಕೆಎಸ್‌ಸಿಎ ಮೈದಾನದಲ್ಲಿ ರನ್‌ಗಳ ಸುರಿಮಳೆ ಹರಿಸಿದ್ದ ಭಾರತ ಎ ತಂಡದ ಬ್ಯಾಟ್ಸ್‌ಮನ್‌ಗಳು ಶನಿವಾರ ಶ್ರೀಲಂಕಾ ತಂಡದ ಮೇಲೆ ಮತ್ತೂಮ್ಮೆ ಅಕ್ಷರಶಃ ಸವಾರಿ ಮಾಡಿದರು. ಆರಂಭದ ಜೋಡಿಯ ಅಮೋಘ ಶತಕದ ಜೊತೆಯಾಟದ ನೆರವಿನಿಂದ ಭಾರತ ಎ ತಂಡ ಎರಡನೇ ಪಂದ್ಯದಲ್ಲೂ ಸುಲಭ ಜಯ ಸಾಧಿಸಿತು.

ಇಲ್ಲಿನ ಕೆಎಸ್‌ಸಿಎ ಮೈದಾನದಲ್ಲಿ ಶ್ರೀಲಂಕಾ ಎ ತಂಡದ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಭಾರತ ಎ ತಂಡ 10 ವಿಕೆಟ್‌ಗಳ ಅಮೋಘ ಜಯ ಪಡೆಯಿತು. ಇದರೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ ಭಾರತ ತಂಡ 2-0ಯಿಂದ ಮುನ್ನಡೆ ಸಾಧಿಸಿದೆ. ಮೂರನೇ ಪಂದ್ಯ ಸೋಮವಾರ ಇದೇ ಮೈದಾನದಲ್ಲಿ ನಡೆಯಲಿದೆ.

ಶನಿವಾರ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ಎ ತಂಡ ಶ್ರೀಲಂಕಾ ಎ ತಂಡಕ್ಕೆ ಬ್ಯಾಟಿಂಗ್‌ಗೆ ಆಹ್ವಾನಿಸಿತು. ಶ್ರೀಲಂಕಾ ನಿಗದಿತ 50 ಓವರ್‌ಗಳಲ್ಲಿ ಏಳು ವಿಕೆಟ್ ಕಳೆದುಕೊಂಡು 242 ರನ್‌ಗಳಿಸಿತು. ತಂಡದ ಪರ ಮತ್ತೂಮ್ಮೆ ಉತ್ತಮ ಪ್ರದರ್ಶನ ನೀಡಿದ ಎಸ್‌. ಜಯಸೂರ್ಯ ಆಕರ್ಷಕ ಶತಕ ಬಾರಿಸಿ ತಂಡವನ್ನು ಅಪಾಯದಿಂದ ಪಾರು ಮಾಡಿದರು. ಇದಕ್ಕೆ ಉತ್ತರವಾಗಿ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಭಾರತ ಎ ತಂಡ 33.3 ಓವರ್‌ಗಳಲ್ಲೇ ಯಾವುದೇ ವಿಕೆಟ್ ನಷ್ಟವಿಲ್ಲದೇ ಗೆಲುವಿನ ದಡ ದಾಟಿತು. ಆರಂಭದ ಜೋಡಿ ರುತುರಾಜ ಗಾಯಕವಾಡ (109 ರನ್‌)ಹಾಗೂ ಶುಭನಮ್‌ ಗಿಲ್ (ಅಜೇಯ 125)ಅವರ ಬಿರುಸಿನ ಶತಕ ಬಾರಿಸಿದರು. ಗಾಯಕವಾಡ ಅವರ ಶತಕ 78 ಎಸೆತಗಳಲ್ಲಿ 13 ಬೌಂಡರಿ ಹಾಗೂ ಎರಡು ಭರ್ಜರಿ ಸಿಕ್ಸರ್‌ಗಳ ಸಹಾಯದಿಂದ ಬಂದಿತು.

ಶ್ರೀಲಂಕಾದ 242 ರನ್‌ಗಳು ಭಾರತ ತಂಡಕ್ಕೆ ಯಾವ ಹಂತದಲ್ಲೂ ಕಠಿಣ ಸವಾಲಾಗಿ ಕಾಣಲೇ ಇಲ್ಲ. ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕಿಳಿದ ಭಾರತದ ಆರಂಭಿಕರು ಆರನೇ ಓವರಿನಲ್ಲಿಯೇ ತಂಡದ ಅರ್ಧಶತಕ ಪೂರೈಸಿದರು. ಭಾರತದ ಬ್ಯಾಟ್ಸಮನ್‌ಗಳು ಶ್ರೀಲಂಕಾದ ದುರ್ಬಲ ಬೌಲಿಂಗ್‌ ಹಾಗೂ ಕ್ಷೇತ್ರರಕ್ಷಣೆಯ ಲಾಭ ಪಡೆದುಕೊಂಡರು. ರುತುರಾಜ ಗಾಯಕವಾಡ ಹಾಗೂ ಗಿಲ್ ಜೋಡಿಯನ್ನು ಮುರಿಯಲು ಲಂಕಾ ನಾಯಕ ಮಾಡಿದ ಎಲ್ಲ ತಂತ್ರಗಳು ವಿಫಲವಾದವು. ಭಾರತ ಎ ತಂಡದ ಮೊದಲ 100 ರನ್‌ 13.1 ಓವರಿನಲ್ಲಿ ಬಂದರೆ ದ್ವಿಶತಕ ಕೇವಲ 27.2 ಓವರ್‌ನಲ್ಲಿ ದಾಖಲಾಯಿತು. ತಂಡದ ಮೊತ್ತ 226 ಆಗಿದ್ದಾಗ ಶುಬಮನ್‌ ಗಿಲ್ ಗಾಯಗೊಂಡು ನಿವೃತ್ತರಾದರು. ನಂತರ ನಡೆದಿದ್ದು ಔಪಚಾರಿಕ ಆಟ, ರುತುರಾಜ ಗಾಯಕವಾಡ ಬಾಕಿ ಉಳಿದಿದ್ದ ರನ್‌ಗಳನ್ನು ನಿರಾಂತಕವಾಗಿ ಮುಗಿಸಿ ಭಾರತಕ್ಕೆ ಜಯ ತಂದುಕೊಟ್ಟರು. ಅದ್ಭುತ ಬ್ಯಾಟಿಂಗ್‌ ಪ್ರದರ್ಶಿಸಿದ ಗಿಲ್ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಗಾಯಕವಾಡ 94 ಎಸೆತಗಳಲ್ಲಿ 14 ಬೌಂಡರಿ ಹಾಗೂ 2 ಸಿಕ್ಸರ್‌ ಸಹಾಯದಿಂದ ಅಜೇಯ 125 ರನ್‌, ಶುಭಮನ್‌ ಗಿಲ್ 96 ಎಸೆತಗಳಲ್ಲಿ 12 ಬೌಂಡರಿ ಹಾಗೂ 2 ಸಿಕ್ಸರ್‌ ನೆರವಿನಿಂದ ಅಜೇಯ 109 ರನ್‌ಗಳಿಸಿದರು.

ಆರಂಭಿಕ ಆಘಾತ: ಟಾಸ್‌ ಸೋತು ಬ್ಯಾಟಿಂಗ್‌ಗೆ ಕಳಿಸಲ್ಪಟ್ಟ ಶ್ರೀಲಂಕಾಗೆ ಆರಂಭದಲ್ಲೇ ಆಘಾತ ಎದುರಾಯಿತು. ತಂಡದ ಮೊತ್ತ ಆರು ರನ್‌ ಆಗಿದ್ದಾಗ ನಿರೋಶನ್‌ ಡಿಕ್ವೆಲ್ಲಾ (5) ನಿರ್ಗಮಿಸಿದರು. ನಂತರದ ಬ್ಯಾಟ್ಸಮನ್‌ಗಳು ಬಂದಷ್ಟೇ ವೇಗವಾಗಿ ಪೆವಿಲಿಯನ್‌ ಸೇರಿದರು. ತಂಡದ ಮೊತ್ತ ಕೇವಲ 81 ರನ್‌ಗಳಾಗಿದ್ದಾಗ ಆರು ಬ್ಯಾಟ್ಸಮನ್‌ಗಳು ಔಟಾಗಿದ್ದರು. ನಾಯಕ ಅಶನ್‌ ಪ್ರಿಯಂಜನ್‌ (5) ಕೆಟ್ಟ ಹೊಡೆತಕ್ಕೆ ಬೆಲೆತೆತ್ತರು. ನಂತರ ಜೊತೆಗೂಡಿದ ಸೇಹಾನ್‌ ಜಯಸೂರ್ಯ ಹಾಗೂ ಇಶಾನ್‌ ಜಯರತ್ನೆ ತಂಡಕ್ಕೆ ಆಸರೆಯಾದರು. ಜಯಸೂರ್ಯ 28 ರನ್‌ ಗಳಿಸಿದ್ದಾಗ ಅವರ ಕ್ಯಾಚ್ ಕೈಚೆಲ್ಲಿದ್ದು ಭಾರತಕ್ಕೆ ದುಬಾರಿ ಆಯಿತು. ಈ ಅವಕಾಶವನ್ನು ಸರಿಯಾಗಿ ಬಳಸಿಕೊಂಡ ಜಯಸೂರ್ಯ ಅತ್ಯುತ್ತಮ ಶತಕ ಪೂರೈಸಿ ತಂಡ ಸವಾಲಿನ ಮೊತ್ತ ಗಳಿಸುವಲ್ಲಿ ನೆರವಾದರು. ಜಯಸೂರ್ಯ ಹಾಗೂ ಇಶಾನ್‌ ಜಯರತ್ನೆ (ಅಜೇಯ 79) ಆರನೇ ವಿಕೆಟ್‌ಗೆ ಬಹುಮೂಲ್ಯ 141 ರನ್‌ ಸೇರಿಸಿದರು. ಆಗ ವೈಯಕ್ತಿಕವಾಗಿ 101 ರನ್‌ಗಳಿಸಿದ್ದ ಜಯಸೂರ್ಯ ಅವರು ದೀಪಕ್‌ ಹೂಡಾ ಬೌಲಿಂಗ್‌ನಲ್ಲಿ ಪ್ರಶಾಂತ ಚೋಪ್ರಾಗೆ ಕ್ಯಾಚ್ ನೀಡಿ ನಿರ್ಗಮಿಸಿದರು. 73 ಎಸೆತಗಳಲ್ಲಿ 79 ರನ್‌ಗಳಿಸಿ ಅಜೇಯರಾಗಿ ಉಳಿದ ಇಶಾನ್‌ ಜಯರತ್ನೆ ಎಳು ಬೌಂಡರಿ ಹಾಗೂ ಒಂದು ಸಿಕ್ಸರ್‌ ಹೊಡೆದರು.

•ಕೇಶವ ಆದಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.