ಕರಾಚಿ ಟೆಸ್ಟ್‌ : 172 ಓವರ್‌ ಆಡಿ ಡ್ರಾ ಸಾಧಿಸಿದ ಪಾಕಿಸ್ಥಾನ


Team Udayavani, Mar 16, 2022, 11:15 PM IST

ಕರಾಚಿ ಟೆಸ್ಟ್‌ : 172 ಓವರ್‌ ಆಡಿ ಡ್ರಾ ಸಾಧಿಸಿದ ಪಾಕಿಸ್ಥಾನ

ಕರಾಚಿ: ಈಗಿನ ಹೊಡಿಬಡಿ ಕ್ರಿಕೆಟ್‌ ಜಮಾನಾದಲ್ಲಿ ಟೆಸ್ಟ್‌ ಪಂದ್ಯವೊಂದನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬುದಕ್ಕೆ ಪಾಕಿಸ್ಥಾನ ಅತ್ಯುತ್ತಮ ನಿದರ್ಶನವೊದಗಿಸಿದೆ.

ಹೆಚ್ಚು-ಕಡಿಮೆ ಪೂರ್ತಿ ಎರಡು ದಿನ ಕ್ರೀಸ್‌ ಆಕ್ರಮಿಸಿಕೊಂಡು, 171.4 ಓವರ್‌ಗಳನ್ನು ಯಶಸ್ವಿಯಾಗಿ ನಿಭಾಯಿಸಿ 7ಕ್ಕೆ 443 ರನ್‌ ಪೇರಿಸಿ, ಆಸ್ಟ್ರೇಲಿಯ ಎದುರಿನ ಕರಾಚಿ ಟೆಸ್ಟ್‌ ಪಂದ್ಯವನ್ನು ಡ್ರಾ ಮಾಡುವ ಮೂಲಕ ಪಾಕ್‌ ಗೆಲುವಿಗೂ ಮಿಗಿಲಾದ ಪ್ರತಿಷ್ಠೆಗೆ ಪಾತ್ರವಾಗಿದೆ.

506 ರನ್ನುಗಳ ಕಠಿನ ಗುರಿಯನ್ನು ಪಡೆದ ಪಾಕಿಸ್ಥಾನವನ್ನು ಬಚಾಯಿಸಿದ್ದು ಕೇವಲ ಮೂರೇ ಮಂದಿ. ನಾಯಕ ಬಾಬರ್‌ ಆಜಂ, ಕೀಪರ್‌ ಮೊಹಮ್ಮದ್‌ ರಿಜ್ವಾನ್‌ ಮತ್ತು ಆರಂಭಕಾರ ಅಬ್ದುಲ್ಲ ಶಫೀಕ್‌. ಇವರು ಒಟ್ಟು 907 ಎಸೆತಗಳನ್ನು ನಿಭಾಯಿಸಿ ನಿಂತರು.

ಇವರಲ್ಲಿ ಕಪ್ತಾನನ ಆಟವಾಡಿದ ಬಾಬರ್‌ ಆಜಂ 425 ಎಸೆತಗಳನ್ನು ಎದುರಿಸಿ 196 ರನ್‌ ಬಾರಿಸಿದರು (21 ಬೌಂಡರಿ, 1 ಸಿಕ್ಸರ್‌). ಇದು 4ನೇ ಕ್ರಮಾಂಕದಲ್ಲಿ ನಾಯಕನೊಬ್ಬ ಬಾರಿಸಿದ ಅತ್ಯಧಿಕ ರನ್‌ ದಾಖಲೆ. ಇಂಗ್ಲೆಂಡಿನ ಮೈಕಲ್‌ ಆಥರ್ಟನ್‌ ಅಜೇಯ 185 ರನ್‌ ಬಾರಿಸಿದ ದಾಖಲೆ ಪತನಗೊಂಡಿತು.

ರಿಜ್ವಾನ್‌ ಕೊಡುಗೆ ಅಜೇಯ 104 ರನ್‌ (177 ಎಸೆತ, 11 ಬೌಂಡರಿ, 1 ಸಿಕ್ಸರ್‌). ಅಬ್ದುಲ್ಲ ಶಫೀಕ್‌ 305 ಎಸೆತ ನಿಭಾಯಿಸಿ 96 ರನ್‌ ಬಾರಿಸಿದರು. ಶಫೀಕ್‌-ಬಾಬರ್‌ 3ನೇ ವಿಕೆಟಿಗೆ 228 ರನ್‌ ಪೇರಿಸುವ ಮೂಲಕ ಆಸ್ಟ್ರೇಲಿಯದ ಗೆಲುವಿನ ಯೋಜನೆಯನ್ನು ವಿಫ‌ಲಗೊಳಿಸಿದರು.

ಸರಣಿಯ ಮೊದಲ ಟೆಸ್ಟ್‌ ಕೂಡ ಡ್ರಾಗೊಂಡಿತ್ತು. ಅಂತಿಮ ಟೆಸ್ಟ್‌ ಮಾ. 21ರಂದು ಲಾಹೋರ್‌ನಲ್ಲಿ ಆರಂಭವಾಗಲಿದೆ.

ಸಂಕ್ಷಿಪ್ತ ಸ್ಕೋರ್‌: ಆಸ್ಟ್ರೇಲಿಯ-9 ವಿಕೆಟಿಗೆ 556 ಡಿಕ್ಲೇರ್‌ ಮತ್ತು 2 ವಿಕೆಟಿಗೆ 97 ಡಿಕ್ಲೇರ್‌. ಪಾಕಿಸ್ಥಾನ-148 ಮತ್ತು 7 ವಿಕೆಟಿಗೆ 443 (ಬಾಬರ್‌ 196, ರಿಜ್ವಾನ್‌ ಔಟಾಗದೆ 104, ಶಫೀಕ್‌ 96, ಲಿಯೋನ್‌ 112ಕ್ಕೆ 4, ಕಮಿನ್ಸ್‌ 75ಕ್ಕೆ 2).
ಪಂದ್ಯಶ್ರೇಷ್ಠ: ಬಾಬರ್‌ ಆಜಂ.

ಟಾಪ್ ನ್ಯೂಸ್

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

TT: ಡಬ್ಲ್ಯು ಟಿಟಿ; ಕ್ವಾರ್ಟರ್‌ಗೇರಿದ ಮೊದಲ ಭಾರತೀಯೆ ಮಣಿಕಾ

TT: ಡಬ್ಲ್ಯು ಟಿಟಿ; ಕ್ವಾರ್ಟರ್‌ಗೇರಿದ ಮೊದಲ ಭಾರತೀಯೆ ಮಣಿಕಾ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.