ಸೋಲಿನ ಮೇಲೆ ಬರೆ: ನಾಯಕ ರೋಹಿತ್ ಸೇರಿ ಮೂವರು ತಂಡದಿಂದ ಔಟ್
Team Udayavani, Dec 8, 2022, 10:11 AM IST
ಢಾಕಾ: ಬಾಂಗ್ಲಾದೇಶ ವಿರುದ್ಧ ಏಕದಿನ ಸರಣಿ ಸೋತ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಮತ್ತು ವೇಗಿ ದೀಪಕ್ ಚಾಹರ್ ಗಾಯಗೊಂಡಿದ್ದರಿಂದ ಭಾರತ ಹಿನ್ನಡೆ ಅನುಭವಿಸಿತ್ತು. ಇದೀಗ ಇಬ್ಬರೂ ಆಟಗಾರರು ಮೂರನೇ ಏಕದಿನ ಪಂದ್ಯಕ್ಕೆ ಲಭ್ಯವಿರುವುದಿಲ್ಲ ಎಂದು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ.
ಅಲ್ಲದೆ ಎರಡನೇ ಏಕದಿನ ಪಂದ್ಯದಲ್ಲೂ ಗಾಯದ ಸಮಸ್ಯೆಯಿಂದ ಹೊರಗುಳಿದಿತ್ತ ಕುಲದೀಪ್ ಸೇನ್ ಅವರು ಸರಣಿಯ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆ.
ಬುಧವಾರದ ಪಂದ್ಯದ ಬಳಿಕ ನಡೆದ ಪ್ರೆಸ್ ಮೀಟ್ ನಲ್ಲಿ ರಾಹುಲ್ ದ್ರಾವಿಡ್ ನಲ್ಲಿ ಮೂವರು ಆಟಗಾರರ ಅಲಭ್ಯತೆಯ ಬಗ್ಗೆ ಮಾತನಾಡಿದರು. ತಜ್ಞರೊಂದಿಗೆ ಸಮಾಲೋಚಿಸಲು ರೋಹಿತ್ ಮುಂಬೈಗೆ ಹಿಂತಿರುಗಲಿದ್ದಾರೆ. ಸಂಪೂರ್ಣ ವಿಶ್ಲೇಷಣೆ ಮಾಡಿದ ನಂತರವೇ ಬಾಂಗ್ಲಾದೇಶ ವಿರುದ್ಧದ ಮುಂಬರುವ ಟೆಸ್ಟ್ ಸರಣಿಯಲ್ಲಿ ರೋಹಿತ್ ಭಾಗವಹಿಸುವುದು ಖಚಿತವಾಗುತ್ತದೆ ಎಂದು ದ್ರಾವಿಡ್ ಹೇಳಿದರು.
ಇದನ್ನೂ ಓದಿ:ಫಲಿತಾಂಶದ ದಿನವೇ ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ಸೋನಿಯಾ ಗಾಂಧಿ
ಬುಧವಾರದ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವೇಳೆ ರೋಹಿತ್ ಕೈಬೆರಳಿಗೆ ಗಾಯ ಮಾಡಿಕೊಂಡಿದ್ದರು. ನಂತರ ಮೈದಾನ ತೊರೆದಿದ್ದ ಅವರು 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಆಗಮಿಸಿದ್ದರು. ಗಾಯದ ಕೈಯಲ್ಲೇ ಆಡಿ ಅಜೇಯ ಅರ್ಧಶತಕ ಬಾರಿಸಿದ್ದರು. ಹೀಗಿದ್ದರೂ ಭಾರತ ಐದು ರನ್ ಅಂತರದ ಸೋಲನುಭವಿಸಿತ್ತು.
ರೋಹಿತ್ ಅಲಭ್ಯತೆಯ ಕಾರಣದಿಂದ ಅಂತಿಮ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಮೋದಿ ಉತ್ತರಾಧಿಕಾರಿಯಾಗುತ್ತಾರಾ ಯು.ಪಿ ಸಿಎಂ?: ಯೋಗಿ ಆದಿತ್ಯನಾಥ್ ಹೇಳುವುದೇನು?
ದೇಶದ ಮೊದಲ ಪ್ರಕರಣ: ಮಗುವಿನ ನಿರೀಕ್ಷೆಯಲ್ಲಿ ತೃತೀಯ ಲಿಂಗಿ ದಂಪತಿ
ಅಫ್ರಿದಿ ಮಗಳನ್ನು ವರಿಸಿದ ಶಾಹೀನ್ ಅಫ್ರಿದಿ: ಅದ್ಧೂರಿ ವಿವಾಹಕ್ಕೆ ಸಾಕ್ಷಿಯಾದ ಸಹ ಆಟಗಾರರು
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ನಿಧನ
ಹಾಕಿ ಕೋಚ್ ಹುದ್ದೆಗೆ ವಿದೇಶಿಯರ ರೇಸ್