ಇಂದು ಶ್ರೀಲಂಕಾ ವಿರುದ್ಧ 3ನೇ ಟಿ20: ವ‌ನಿತೆಯರಿಗೆ ವೈಟ್‌ವಾಶ್‌ ಅವಕಾಶ

ಕ್ಲೀನ್‌ ಸ್ವೀಪ್‌ ಸಾಧನೆಯತ್ತ ಕೌರ್‌ ಪಡೆ

Team Udayavani, Jun 27, 2022, 6:40 AM IST

ಇಂದು ಶ್ರೀಲಂಕಾ ವಿರುದ್ಧ 3ನೇ ಟಿ20: ವ‌ನಿತೆಯರಿಗೆ ವೈಟ್‌ವಾಶ್‌ ಅವಕಾಶ

ಡಂಬುಲ: ಆತಿಥೇಯ ಶ್ರೀಲಂಕಾ ವಿರುದ್ಧದ ಮೊದಲೆರಡೂ ಟಿ20 ಪಂದ್ಯಗಳನ್ನು ಗೆದ್ದ ಭಾರತದ ವನಿತೆಯರು ಈಗಾಗಲೇ ಸರಣಿ ಗೆದ್ದು ಸಂಭ್ರಮ ಆಚರಿಸಿದ್ದಾರೆ. ಮುಂದಿನ ಗುರಿ ವೈಟ್‌ವಾಶ್‌.

ಸೋಮವಾರ 3ನೇ ಹಾಗೂ ಅಂತಿಮ ಮುಖಾಮುಖಿ ನಡೆಯಲಿದ್ದು, ಹರ್ಮನ್‌ಪ್ರೀತ್‌ ಕೌರ್‌ ಪಡೆ ಇದನ್ನೂ ಗೆದ್ದು ಸರಣಿಯನ್ನು ಕ್ಲೀನ್‌ ಸ್ವೀಪ್‌ ಆಗಿ ವಶಪಡಿಸಿಕೊಳ್ಳುವ ಯೋಜನೆಯಲ್ಲಿದೆ.

ಭಾರತದ ಈವರೆಗಿನ ಸಾಧನೆಯನ್ನು ಗಮನಿಸಿದಾಗ ಕ್ಲೀನ್‌ ಸ್ವೀಪ್‌ ಅಸಾಧ್ಯ ವೇನಲ್ಲ. ಆದರೆ ಶ್ರೀಲಂಕಾಕ್ಕೂ ಗೆಲುವಿನ ಅನಿವಾರ್ಯತೆ ಇದೆ. ಪ್ರತಿಷ್ಠೆಗಾಗಿ ಅದು ಗೆಲ್ಲಲೇಬೇಕಿದೆ. ಸತತ 2 ಸರಣಿ ಗಳಲ್ಲಿ ಮೂರೂ ಪಂದ್ಯಗಳಲ್ಲಿ ಸೋಲ ನುಭವಿಸುವುದನ್ನು ಅದು ಯಾವ ಕಾರಣಕ್ಕೂ ಸಹಿಸದು. ಕಳೆದ ಪಾಕಿಸ್ಥಾನ ವಿರುದ್ಧದ ಸರಣಿಯಲ್ಲೂ ಲಂಕಾ 3-0 ವೈಟ್‌ವಾಶ್‌ ಸಂಕಟಕ್ಕೆ ಸಿಲುಕಿತ್ತು. ಹೀಗಾಗಿ ಅತಪಟ್ಟು ಪಡೆಯ ಮೇಲೆ ಭಾರೀ ಒತ್ತಡ ಇರುವುದು ಸುಳ್ಳಲ್ಲ.

ಅಧಿಕಾರಯುತ ಜಯ
ಎರಡೂ ಪಂದ್ಯಗಳಲ್ಲಿ ಭಾರತದ್ದು ಅಧಿಕಾರಯುತ ಜಯ. ಬ್ಯಾಟಿಂಗ್‌ಗೆ ವಿಶೇಷವಾಗಿ ಸಹಕರಿಸದ ಡಂಬುಲ ಟ್ರ್ಯಾಕ್‌ ಮೇಲೆ ಭಾರತದ ನಾರಿಯರು ಕ್ರಮವಾಗಿ 34 ರನ್‌ ಹಾಗೂ 5 ವಿಕೆಟ್‌ ಅಂತರದ ಗೆಲುವು ಸಾಧಿಸಿದ್ದರು. ಇದೇ ಲಯದಲ್ಲಿ ಸಾಗಿದರೆ ಭಾರತದಿಂದ ಹ್ಯಾಟ್ರಿಕ್‌ ಜಯಭೇರಿಯನ್ನು ನಿರೀಕ್ಷಿಸ ಲಡ್ಡಿಯಿಲ್ಲ. ಇದರಿಂದ ಮುಂಬರುವ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಭಾರತ ತಂಡದ ಆತ್ಮವಿಶ್ವಾಸ ದೊಡ್ಡ ಮಟ್ಟದಲ್ಲೇ ಹೆಚ್ಚಲಿದೆ.

ಡಂಬುಲದ ನಿಧಾನ ಗತಿಯ ಟ್ರ್ಯಾಕ್‌ ಮೇಲೆ ಭಾರತದ ಬೌಲರ್ ಅತ್ಯುತ್ತಮ ಪ್ರದರ್ಶನ ಕಾಯ್ದುಕೊಂಡು ಬಂದಿದ್ದಾರೆ. ಇದಕ್ಕೆ ದ್ವಿತೀಯ ಪಂದ್ಯವೇ ಸಾಕ್ಷಿ. ಶ್ರೀಲಂಕಾ ವಿಕೆಟ್‌ ನಷ್ಟವಿಲ್ಲದೆ 80ರ ಗಡಿ ದಾಟಿದಾಗ ದೊಡ್ಡ ಮೊತ್ತದ ಸಾಧ್ಯತೆ ಗೋಚರಿಸಿತ್ತು. ಆದರೆ ಈ ಹಂತದಲ್ಲಿ ತಿರುಗಿ ಬಿದ್ದ ಭಾರತದ ಬೌಲರ್, ಲಂಕೆಯನ್ನು 125ಕ್ಕೆ ಹಿಡಿದು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದರು. ಮೊದಲ ಪಂದ್ಯದಲ್ಲಿ 138 ರನ್ನುಗಳ ಸಾಮಾನ್ಯ ಮೊತ್ತವನ್ನು ಬೌಲರ್‌ಗಳೇ ಉಳಿಸಿಕೊಟ್ಟಿದ್ದರು.

ಶಫಾಲಿ ವರ್ಮ, ಎಸ್‌. ಮೇಘನಾ, ಯಾಸ್ತಿಕಾ ಭಾಟಿಯ ಬಿರುಸಿನ ಆಟಕ್ಕಿಳಿದರೆ ಭಾರತ ಇನ್ನೂ ದೊಡ್ಡ ಮೊತ್ತ ಪೇರಿಸಬಹುದು. ಆಗ ಗೆಲುವು ಕೂಡ ಸುಲಭವಾಗಲಿದೆ.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.