ಮಳೆ ನುಂಗಿದ 4ನೇ ಏಕದಿನ ಪಂದ್ಯ ಇಂದು

ಭಾರತ-ಶ್ರೀಲಂಕಾ 'ಎ' ಏಕದಿನ ಸರಣಿ

Team Udayavani, Jun 14, 2019, 1:15 PM IST

HUBALI-TDY-3..

ಅನ್ಮೋಲ್ಪ್ರೀತ್‌ ಸಿಂಗ್‌

ಹುಬ್ಬಳ್ಳಿ: ಭಾರತ ‘ಎ’ ಹಾಗೂ ಶ್ರೀಲಂಕಾ ‘ಎ’ ತಂಡಗಳ ಮಧ್ಯದ 5 ಪಂದ್ಯಗಳ ಏಕದಿನ ಸರಣಿಯ 4ನೇ ಕ್ರಿಕೆಟ್ ಪಂದ್ಯ ಗುರುವಾರ ಮಳೆಯಿಂದ ರದ್ದಾಗಿದ್ದು, ಶುಕ್ರವಾರ ಮತ್ತೂಮ್ಮೆ ಪಂದ್ಯ ಜರುಗಲಿದೆ. ರಾಜನಗರದ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ಗುರುವಾರದ ಪಂದ್ಯವನ್ನು ಮತ್ತೂಮ್ಮೆ ಆಡಿಸಲು ಉಭಯ ದೇಶಗಳ ಕ್ರಿಕೆಟ್ ಮಂಡಳಿಗಳು ಸಮ್ಮತಿಸಿವೆ.

ಮೂರು ಬಾರಿ ಮಳೆಯಿಂದ ಪಂದ್ಯ ಸ್ಥಗಿತಗೊಳಿಸಬೇಕಾಯಿತು. ಮಳೆಯಿಂದಾಗಿ ಪಂದ್ಯ ಮಧ್ಯಾಹ್ನ 1:15ಕ್ಕೆ ಆರಂಭಗೊಂಡಿತು. 24 ಓವರ್‌ಗಳ ಪಂದ್ಯವಾಡಿಸಲು ನಿರ್ಧರಿಸಲಾಗಿತ್ತು. ಮೊದಲು ಬ್ಯಾಟ್ ಮಾಡಿದ ಭಾರತದ 20 ಓವರ್‌ಗಳ ಆಟದ ನಂತರ ಮತ್ತೆ ಮಳೆ ಸುರಿದಿದ್ದರಿಂದ 22 ಓವರ್‌ಗೆ ಸೀಮಿತಗೊಳಿಸಲಾಯಿತು. ಭಾರತ 4 ವಿಕೆಟ್ ಕಳೆದುಕೊಂಡು 208 ರನ್‌ ದಾಖಲಿಸಿತು. ಡಕ್‌ವರ್ತ್‌ ಲೂಯಿಸ್‌ ನಿಯಮದಂತೆ ಶ್ರೀಲಂಕಾಕ್ಕೆ 22 ಓವರ್‌ಗಳಲ್ಲಿ 219 ರನ್‌ ಗುರಿ ನೀಡಲಾಯಿತು. 2ನೇ ಓವರ್‌ನಲ್ಲಿ ಶ್ರೀಲಂಕಾ ತಂಡ 1 ವಿಕೆಟ್ ನಷ್ಟಕ್ಕೆ 10 ರನ್‌ ಗಳಿಸಿದ್ದ ಸಂದರ್ಭದಲ್ಲಿ ಮತ್ತೆ ರಭಸದ ಮಳೆ ಸುರಿಯಲಾರಂಭಿಸಿತು. ಸ್ಥಿತಿಯನ್ನು ಪರಿಗಣಿಸಿ ಪಂದ್ಯವನ್ನು ರದ್ದುಪಡಿಸಲಾಯಿತು.

ಭಾರತ ಉತ್ತಮ ಮೊತ್ತ: ಋತುರಾಜ ಗಾಯಕ್ವಾಡ್‌ (84) ಹಾಗೂ ಅನ್ಮೋಲ್ಪ್ರೀತ್‌ ಸಿಂಗ್‌ (85*) ಅರ್ಧ ಶತಕಗಳ ನೆರವಿನಿಂದ ಭಾರತ ತಂಡ ಉತ್ತಮ ಸ್ಕೋರ್‌ ದಾಖಲಿಸಿತು. ಋತುರಾಜ ಗಾಯಕ್ವಾಡ್‌ ಹಾಗೂ ಶುಭಂ ಗಿಲ್ ಇನಿಂಗ್ಸ್‌ ಆರಂಭಿಸಿದರಾದರೂ ಶುಭಂ ಗಿಲ್ (19) ನಿರ್ಗಮನದ ನಂತರ ಅನ್ಮೋಲ್ಪ್ರೀತ್‌ ಸಿಂಗ್‌ ಹಾಗೂ ಗಾಯಕ್ವಾಡ್‌ ನಿಧಾನ ಗತಿಯಲ್ಲಿ ಇನ್ನಿಂಗ್ಸ್‌ ಕಟ್ಟಿದರು. 14ನೇ ಓವರ್‌ನಲ್ಲಿ ತಂಡ 100 ರನ್‌ ದಾಖಲಿಸಿತು.

18ನೇ ಓವರ್‌ನಲ್ಲಿ ತಂಡದ ಮೊತ್ತ 150 ದಾಟಿದರೆ, 19ನೇ ಓವರ್‌ನಲ್ಲಿ ಗಾಯಕ್ವಾಡ್‌-ಸಿಂಗ್‌ ಜೊತೆಯಾಟದಲ್ಲಿ 100 ರನ್‌ ಪೇರಿಸಿದರು. 20ನೇ ಓವರ್‌ನಲ್ಲಿ ತಂಡ 177 ರನ್‌ ದಾಖಲಿಸಿದ ಸಂದರ್ಭದಲ್ಲಿ ಮಳೆ ಬೀಳಲಾರಂಭವಾಯಿತು. 16 ನಿಮಿಷಗಳ ನಂತರ ಮಧ್ಯಾಹ್ನ 3 ಗಂಟೆಗೆ ಮತ್ತೆ ಆರಂಭಗೊಂಡಿದ್ದರಿಂದ ಪಂದ್ಯವನ್ನು 22 ಓವರ್‌ಗಳಿಗೆ ನಿಗದಿ ಮಾಡಲಾಯಿತು. ನಾಯಕ ಇಶಾನ್‌ ಕಿಶನ್‌ (0) ಬಂದಷ್ಟೇ ವೇಗದಲ್ಲಿ ನಿರ್ಗಮಿಸಿದರು. ಅಂತಿಮವಾಗಿ ಭಾರತ 22 ಓವರ್‌ಗಳಲ್ಲಿ 4 ವಿಕೆಟ್‌ಗೆ 208 ರನ್‌ ಗಳಿಸಿತು.

ಡಕ್‌ವರ್ತ್‌ ಲೂಯಿಸ್‌ ನಿಯಮದಂತೆ 22 ಓವರ್‌ಗಳಲ್ಲಿ 219 ರನ್‌ ಗುರಿ ಬೆನ್ನತ್ತಿದ ಶ್ರೀಲಂಕಾ ಮೊದಲ ಓವರ್‌ನಲ್ಲಿಯೇ ನಿರೋಶನ್‌ ಡಿಕ್ವೆಲ್ಲಾ ವಿಕೆಟ್ ಕಳೆದುಕೊಂಡಿತು. 2ನೇ ಓವರ್‌ನಲ್ಲಿ 1 ವಿಕೆಟ್ ನಷ್ಟಕ್ಕೆ 10 ರನ್‌ ಗಳಿಸಿದ್ದ ಸಂದರ್ಭದಲ್ಲಿ ಮತ್ತೆ ರಭಸದ ಮಳೆ ಸುರಿಯಲಾರಂಭಿಸಿದ ಕಾರಣ ಪಂದ್ಯ ರದ್ದುಪಡಿಸಲಾಯಿತು. ಟೆಸ್ಟ್‌ ಸರಣಿಯನ್ನು ಭಾರತ ಜಯಿಸಿದ್ದು, 5 ಪಂದ್ಯಗಳ ಏಕದಿನ ಸರಣಿಯ ಮೂರು ಪಂದ್ಯಗಳಲ್ಲಿ ಈಗಾಗಲೇ ಭಾರತ 2-1ರಿಂದ ಮುನ್ನಡೆ ಪಡೆದುಕೊಂಡಿದೆ. ಶುಕ್ರವಾರ ಹಾಗೂ ಶನಿವಾರ ಸತತ 2 ಏಕದಿನ ಪಂದ್ಯಗಳು ನಡೆಯಲಿವೆ.

•ವಿಶ್ವನಾಥ ಕೋಟಿ

ಟಾಪ್ ನ್ಯೂಸ್

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Narayan Murthy INFOSYS

Infosys; 4 ತಿಂಗಳ ಮೊಮ್ಮಗನಿಗೆ 243 ಕೋಟಿ ರೂ.ಷೇರು ಗಿಫ್ಟ್ ನೀಡಿದ ಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

1-saddas

Badminton; ಇಂದಿನಿಂದ ಸ್ವಿಸ್‌ ಓಪನ್‌ ಬ್ಯಾಡ್ಮಿಂಟನ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.