ಭಾರತ “ಎ’ ತಂಡಕ್ಕೆ 4ನೇ ಗೆಲುವು


Team Udayavani, Jan 30, 2019, 4:37 AM IST

lionas.jpg

ತಿರುವನಂತಪುರ: ಈಗಾಗಲೇ ಇಂಗ್ಲೆಂಡ್‌ ಲಯನ್ಸ್‌ ವಿರುದ್ಧದ ಏಕದಿನ ಸರಣಿಯನ್ನು ಜಯಿಸಿರುವ ಭಾರತ “ಎ’ ತಂಡ ಮಂಗಳವಾರ ಇಲ್ಲಿ ನಡೆದ 4ನೇ ಏಕದಿನ ಪಂದ್ಯ ಗೆಲ್ಲುವಲ್ಲಿ ಯಶಸ್ವಿಯಾಗಿದೆ. 

ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ಭಾರತ “ಎ’ ತಂಡ 6 ವಿಕೆಟ್‌ಗಳಿಂದ ಜಯ ದಾಖಲಿಸಿ ಐದು ಪಂದ್ಯಗಳ ಸರಣಿಯಲ್ಲಿ 4-0 ಮುನ್ನಡೆ ಸಾಧಿಸಿದೆ. ಸರಣಿಯ 5ನೇ ಪಂದ್ಯ ಗುರುವಾರ ನಡೆಯಲಿದೆ. ಈ ಪಂದ್ಯವನ್ನು ಗೆದ್ದು ಇಂಗ್ಲೆಂಡ್‌ ತಂಡವನ್ನು ವೈಟ್‌ವಾಶ್‌ ಮಾಡುವ ವಿಶ್ವಾಸದಲ್ಲಿ ಭಾರತ ಇದೆ.ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸಿದ ಇಂಗ್ಲೆಂಡ್‌ ಲಯನ್ಸ್‌ 8 ವಿಕೆಟ್‌ ಕಳೆದುಕೊಂಡು 221 ರನ್‌ ಕಲೆ ಹಾಕಿತು. ಇದಕ್ಕುತ್ತರವಾಗಿ ಭಾರತ 46.3 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 222 ರನ್‌ ಬಾರಿಸಿ ಜಯಭೇರಿ ಬಾರಿಸಿದೆ. 

ಶಾದೂಲ್‌ ದಾಳಿಗೆ ಬೆಚ್ಚಿದ ಲಯನ್ಸ್‌
ಮೊದಲು ಬ್ಯಾಟಿಂಗ್‌ ನಡೆಸಿದ ಇಂಗ್ಲೆಂಡ್‌ ತಂಡಕ್ಕೆ ಶಾದೂìಲ್‌ ಠಾಕೂರ್‌ ಮಾರಕವಾಗಿ ಎರಗಿದರು. ಆರಂಭಿಕಕಾರರನ್ನು ಬೇಗನೇ ಪೆವಿಲಿಯನ್‌ಗೆ ಅಟ್ಟುವಲ್ಲಿ ಶಾದೂìಲ್‌ ಯಶಸ್ವಿಯಾದರು. ಅವರು ತನ್ನ 10 ಓವರ್‌ಗಳ ದಾಳಿಯಲ್ಲಿ 49 ರನ್ನಿಗೆ 4 ವಿಕೆಟ್‌ ಕಿತ್ತು ಗೆಲುವಿನ ರೂವಾರಿಯಾಗಿ ಕಾಣಿಸಿಕೊಂಡರು. 

ಆಸರೆಯಾದ ಪಂತ್‌
 222 ರನ್‌ಗಳ ಗುರಿ ಪಡೆದ ಭಾರತ 8 ರನ್‌ ಗಳಿಸುವಲ್ಲಿ ಮೊದಲ ವಿಕೆಟನ್ನು ಕಳೆದುಕೊಂಡಿತ್ತು. ಆರಂಭಿಕ ಆಟಗಾರ ಋತುರಾಜ್‌ ಗಾಯಕ್ವಾಡ್‌ ಶೂನ್ಯಕ್ಕೆ ಔಟಾದರು. ಆದರೆ  ಕೆಎಲ್‌ ರಾಹುಲ್‌ (42) ಮತ್ತು ಭುಯಿ (35) ಅವರ ಉತ್ತಮ ಆಟದಿಂದಾಗಿ ಭಾರತ ಚೇತರಿಸಿತು.  5ನೇ ವಿಕೆಟಿಗೆ ಕಣಕ್ಕಿಳಿದ ರಿಷಬ್‌ ಪಂತ್‌  ಅಜೇಯ 73 ರನ್‌ ಹಾಗೂ ದೀಪಕ್‌ ಹೂಡ ಅವರ 47 ರನ್‌ಗಳ ನೆರವಿನಿಂದ ಭಾರತ ಇನ್ನೂ 21 ಎಸೆತ ಬಾಕಿ ಇರುವಾಗಲೇ  222 ರನ್‌ ಹೊಡೆದು ಗೆಲುವು ದಾಖಲಿಸಿತು.  

ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌ ಲಯನ್ಸ್‌-8 ವಿಕೆಟಿಗೆ 221 (ಸ್ಯಾಮ್‌ ಬಿಲ್ಲಿಂಗ್ಸ್‌ 24, ಪೋಪ್‌ 64, ಸ್ಟೀವನ್‌ ಮುಲ್ಲಾನಿ ಔಟಾಗದೆ 58 , ಶಾದೂìಲ್‌ ಠಾಕೂರ್‌ 49ಕ್ಕೆ 4, ದೀಪಕ್‌ ಚಹರ್‌ 38ಕ್ಕೆ 2)
ಭಾರತ “ಎ’-46.3 ಓವರ್‌ಗಳಲ್ಲಿ 4 ವಿಕೆಟಿಗೆ 222 (ರಾಹುಲ್‌ 42, ರಿಷಬ್‌ ಪಂತ್‌ ಔಟಾಗದೆ 73, ದೀಪಕ್‌ ಹೂಡ ಔಟಾಗದೆ 47,  ಜಾಕ್ಸ್‌ 35ಕ್ಕೆ 2). ಪಂದ್ಯ ಶ್ರೇಷ್ಠ: ರಿಷಬ್‌ ಪಂತ್‌.

ಪ್ರೇಕ್ಷಕರ ಮೇಲೆ ಜೇನುನೊಣಗಳ ದಾಳಿ
 ಇಂಗ್ಲೆಂಡ್‌ ಲಯನ್ಸ್‌ ಆಟದ ವೇಳೆ ಪಂದ್ಯ ವೀಕ್ಷಿಸುತ್ತಿದ್ದ ಪ್ರೇಕ್ಷಕರ ಮೇಲೆ ಜೇನುನೊಣ ದಾಳಿ ನಡೆಸಿದೆ. ದಾಳಿಯಿಂದ ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕಾರಣದಿಂದಾಗಿ ಪಂದ್ಯವನ್ನು ನಿಲ್ಲಿಸಲಾಯಿತು. ಯಾವುದೇ ಆಟಗಾರರ ಮೇಲೆ ಜೇನುನೊಣಗಳು ದಾಳಿ ನಡೆಸಿಲ್ಲ. ಆದರೆ 15 ನಿಮಿಷಗಳ ಕಾಲ ಆಟ ನಿಂತಿತು. ಕ್ರೀಡಾಂಗಣದಿಂದ ಜೇನುನೊಣಗಳನ್ನು ತೆರವುಗೊಳಿಸಿದ ಬಳಿಕ ಪಂದ್ಯ ಪುನರಾರಂಭಗೊಂಡಿತು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.