ಅಥ್ಲೆಟಿಕ್ ನಲ್ಲಿ ಬೆಳ್ಳಿ ಗೆದ್ದ ರಿಲೇ ತಂಡಕ್ಕೆ 5 ಲಕ್ಷ ರೂ. ನಗದು: ಸಚಿವ ಡಾ.ನಾರಾಯಣ ಗೌಡ
ಕೂದಲೆಳೆ ಅಂತದರಲ್ಲಿ ಕೈ ತಪ್ಪಿದ ಚಿನ್ನದ ಪದಕ
Team Udayavani, Aug 3, 2022, 2:53 PM IST
ಬೆಂಗಳೂರು: ಕೊಲಂಬಿಯಾದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ ಚಾಂಪಿಯನ್ಷಿಪ್ನಲ್ಲಿ ಬೆಳ್ಳಿ ಗೆದ್ದ ಕರ್ನಾಟಕದ ಪ್ರಿಯಾ ಮೋಹನ್ ಒಳಗೊಂಡ ಭಾರತ ರಿಲೇ ತಂಡಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಕರ್ನಾಟಕದ ಪ್ರಿಯಾ ಮೋಹನ್, ಭರತ್ ಶ್ರೀಧರ್, ರೂಪಾಲ್ ಚೌಧರಿ ಮತ್ತು ಕಪಿಲ್ ಅವರನ್ನೊಳಗೊಂಡ ಮಿಕ್ಸಡ್ ರಿಲೇ ತಂಡ ಉತ್ತಮ ಪ್ರದರ್ಶನ ತೋರಿಸಿದ್ದು, ಕೂದಲೆಳೆ ಅಂತದರಲ್ಲಿ ಚಿನ್ನದ ಪದಕ ಕೈ ತಪ್ಪಿದೆ.
ಕಳೆದ ವರ್ಷ ಕಂಚಿನ ಪದಕದ ಸಾಧನೆ ಮಾಡಿದ್ದ ಭಾರತದ ರಿಲೇ ತಂಡ ಈ ಬಾರಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದೆ. ಸ್ವಲ್ಪದರಲ್ಲೇ ಚಿನ್ನದ ಪದಕ ಕೈ ತಪ್ಪಿದ್ದು, ಮುಂದಿನ ಸಲ ಚಿನ್ನದ ಪದಕಗೆಲ್ಲುವ ವಿಶ್ವಾಸವಿದ್ದು, ಅತ್ಯುತ್ತಮ ಸಾಧನೆ ಮಾಡಿರುವ ರಿಲೇ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಭಾರತ ತಂಡವನ್ನು ಪ್ರತಿನಿಧಿಸಿದ್ದ ಕರ್ನಾಟಕದ ಪ್ರಿಯಾ ಮೋಹನ್ ಅವರಿಗೆ 5 ಲಕ್ಷ ನಗದು ಪುರಸ್ಕಾರ ನೀಡುವುದಾಗಿ ಸಚಿವ ಡಾ.ನಾರಾಯಣಗೌಡ ಅವರು ಘೋಷಿಸಿದ್ದಾರೆ.