ಐಪಿಎಲ್ ಮೆಗಾ ಹರಾಜು: ಈ ಐದು ಆಟಗಾರರ ಮೇಲೆ ಕಣ್ಣಟ್ಟಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು


Team Udayavani, Feb 11, 2022, 12:58 PM IST

ಐಪಿಎಲ್ ಮೆಗಾಹರಾಜು: ಈ ಐದು ಆಟಗಾರರ ಮೇಲೆ ಕಣ್ಣಟ್ಟಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಮೆಗಾ ಹರಾಜಿಗೆ ಕ್ಷಣಗಣನೆ ಆರಂಭವಾಗಿದೆ. ಫೆ.12 ಮತ್ತು 13ರಂದು ಬೆಂಗಳೂರಿನಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಆಟಗಾರರ ಖರೀದಿಗೆ ಹತ್ತು ತಂಡಗಳು ಎರಡು ದಿನ ಸ್ಪರ್ಧೆ ನಡೆಸಲಿದೆ.

ಐಪಿಎಲ್ ನ ತಾರಾ ತಂಡಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ಈ ಬಾರಿಯೂ ತಾರಾ ಆಟಗಾರರನ್ನು ಖರೀದಿಸುವ ಯೋಜನೆ ರೂಪಿಸಿದೆ. ಸದ್ಯ ಆರ್ ಸಿಬಿಯು ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ ವೆಲ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ತಂಡದಲ್ಲಿ ಉಳಿಸಿಕೊಂಡಿದೆ. ಹೊಸ ನಾಯಕನ ಹುಡುಕಾಟದಲ್ಲಿರುವ ಆರ್ ಸಿಬಿ ತಾರಾ ಆಟಗಾರರ ಮೇಲೆ ಕಣ್ಣಟ್ಟಿದೆ.

ಡೇವಿಡ್ ವಾರ್ನರ್: ಸನ್ ರೈಸರ್ಸ್ ಹೈದರಾಬಾದ್ ತಂಡದ ಮಾಜಿ ನಾಯಕ, ಆಸೀಸ್ ಆಟಗಾರ ಡೇವಿಡ್ ವಾರ್ನರ್ ಅವರು ಈ ಬಾರಿಯ ಹರಾಜಿನ ಅತ್ಯಂತ ಬೇಡಿಕೆಯ ಆಟಗಾರನಾಗಿದ್ದಾರೆ. ಆರಂಭಿಕ ಆಟಗಾರ, ನಾಯಕತ್ವದ ಅರ್ಹತೆ, ಉತ್ತಮ ಫೀಲ್ಡರ್ ಆಗಿರುವ ವಾರ್ನರ್ ಮೇಲೆ ಆರ್ ಸಿಬಿ ಕಣ್ಣಿಟ್ಟಿದೆ ಎನ್ನಲಾಗಿದೆ. 2016ರಲ್ಲಿ ಆರ್ ಸಿಬಿ ವಿರುದ್ಧವೇ ಫೈನಲ್ ನಲ್ಲಿ ಕಪ್ ಗೆದ್ದಿರುವ ವಾರ್ನರ್ ಮುಂದಿನ ಬೆಂಗಳೂರು ನಾಯಕನಾಗಬಹುದು.

ಟ್ರೆಂಟ್ ಬೌಲ್ಟ್: ಕಳೆದೆರಡು ಸೀಸನ್ ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿದ್ದ ಕಿವೀಸ್ ವೇಗಿ ಟ್ರೆಂಟ್ ಬೌಲ್ಟ್ ಖರೀದಿಯತ್ತ ಆರ್ ಸಿಬಿ ಒಲವು ಹೊಂದಿದೆ. ಸಿರಾಜ್ ಜೊತೆಗೆ ಮತ್ತೋರ್ವ ಅಂತಾರಾಷ್ಟ್ರೀಯ ಗುಣಮುಟ್ಟದ ವೇಗಿಯ ಅಗತ್ಯವಿರುವ ಆರ್ ಸಿಬಿಗೆ ಬೌಲ್ಟ್ ಉತ್ತಮ ಆಯ್ಕೆಯಾಗಬಹುದು.

ಇದನ್ನೂ ಓದಿ:ಹಿಂದುತ್ವ ಗುಂಪುಗಳು ಮುಸ್ಲಿಂ ಹುಡುಗಿಯರಿಗೆ ಕಿರುಕುಳ ನೀಡುತ್ತಿದೆ: ಫುಟ್ ಬಾಲ್ ತಾರೆ ಪೋಗ್ಬಾ

ರಾಹುಲ್ ಚಾಹರ್: ಯುಜಿ ಚಾಹಲ್ ರನ್ನು ಕೈಬಿಟ್ಟಿರುವ ಕಾರಣ ಆರ್ ಸಿಬಿಗೆ ಉತ್ತಮ ಸ್ಪಿನ್ನರ್ ನ ಅಗತ್ಯವಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಪರವಾಗಿ ಉತ್ತಮ ಪ್ರದರ್ಶನ ತೋರಿದ ರಾಹುಲ್ ಚಾಹರ್ ರನ್ನು ತನ್ನತ್ತ ಸೆಳೆಯಲು ಆರ್ ಸಿಬಿ ಮುಂದಾಗಬಹುದು. ಅಲ್ಲದೆ ಯುಜಿ ಚಾಹಲ್ ಗೂ ಆರ್ ಸಿಬಿ ಮತ್ತೆ ಪ್ರಯತ್ನ ನಡೆಸಬಹುದು.

ಮಿಚೆಲ್ ಮಾರ್ಶ್: ಆಸ್ಟ್ರೇಲಿಯಾದ ಪ್ರಮುಖ ಆಲ್ ರೌಂಡರ್ ಮಿಚೆಲ್ ಮಾರ್ಶ್ ಅವರು ಈ ಬಾರಿ ಆಸೀಸ್ ಟಿ20 ವಿಶ್ವಕಪ್ ಗೆಲ್ಲಲು ಸಹಾಯಕವಾಗಿದ್ದರು. ಕಳೆದ ಸೀಸನ್ ನಲ್ಲಿ ಎಸ್ ಆರ್ ಎಚ್ ಪರವಾಗಿದ್ದರೂ, ಗಾಯದ ಕಾರಣದಿಂದ ಆಡಲಾಗಿರಲಿಲ್ಲ. ಯಾವುದ ಕ್ರಮಾಂಕದಲ್ಲಿ ಬ್ಯಾಟ್ ಬೀಸಬಲ್ಲ ಮಾರ್ಶ್ ಖರೀದಿಗೆ ಬೆಂಗಳೂರು ಫ್ರಾಂಚೈಸಿ ಮುಂದಾಗಬಹುದು.

ಡೆವಾಲ್ಡ್ ಬ್ರೆವಿಸ್: ಈ ಬಾರಿಯ ಅಂಡರ್ 19 ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾದ ಆಟಗಾರ ಡೆವಾಲ್ಡ್ ಬ್ರೆವಿಸ್ ಕೂಡಾ ಹರಾಜಿನಲ್ಲಿ ಉತ್ತಮ ಮೊತ್ತಕ್ಕೆ ಬಿಕರಿಯಾಗಬಹುದು. ಬೇಬಿ ಎಬಿ ಎಂದೇ ಹೆಸರಾದ ಬ್ರೆವಿಸ್ ಖರೀದಿಗೆ ಆರ್ ಸಿಬಿ ಮುಂದಾಗಬಹುದು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.