7 ಎಸೆತಗಳಲ್ಲಿ 6 ವಿಕೆಟ್‌: ಬೆಂಗಳೂರು ಕ್ರಿಕೆಟಿಗನ ರಾಷ್ಟ್ರೀಯ ದಾಖಲೆ


Team Udayavani, Jan 17, 2017, 3:54 PM IST

544.jpg

ಬೆಂಗಳೂರು: ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ ಸಿಎ) ಆಯೋಜಿಸಿರುವ ಕ್ಲಬ್‌ ಮಟ್ಟದ ಟಿ20 ಕ್ರಿಕೆಟ್‌ ಪಂದ್ಯವೊಂದರಲ್ಲಿ ಬೆಂಗಳೂರಿನ ಹುಡುಗ ಸರ್ಫ್ರಾಜ್‌ ಅಶ್ರಫ್ ರಾಷ್ಟ್ರೀಯ ದಾಖಲೆಯೊಂದನ್ನು ಬರೆದಿದ್ದಾರೆ.

ಸೈಯದ್‌ ಮುಷ್ತಾಕ್‌ ಅಲಿ ಟಿ20 ಕ್ರಿಕೆಟ್‌ ಪಂದ್ಯದ ರಾಜ್ಯ ತಂಡದ ಆಯ್ಕೆಗಾಗಿ ನೆಲಮಂಗಲ ಆದಿತ್ಯ ಗ್ಲೋಬಲ್‌ ಕ್ರೀಡಾಂಗಣದಲ್ಲಿ ನಡೆದ ಕೂಟದಲ್ಲಿ ಈ ದಾಖಲೆ ನಿರ್ಮಾಣವಾಗಿದೆ. ಯಂಗ್‌ ಪಯೋನಿಯರ್‌ ತಂಡದ ಲೆಗ್‌ ಸ್ಪಿನ್ನರ್‌ ಸರ್ಫ್ರಾಜ್‌. ಮರ್ಕೆರಾ ಯೂತ್‌ ತಂಡದ ವಿರುದ್ಧ ಸೋಮವಾರ ನಡೆದ ಪಂದ್ಯದ ವೇಳೆ 7 ಎಸೆತಗಳಲ್ಲಿ ಹ್ಯಾಟ್ರಿಕ್‌ ಒಳಗೊಂಡಂತೆ ಒಟ್ಟು 6 ವಿಕೆಟ್‌ ಪಡೆದು ಕ್ರಿಕೆಟ್‌ ಲೋಕ ಅಚ್ಚರಿಪಡುವಂತೆ ಮಾಡಿದರು.

„ ಏನಿದು ಸಾಧನೆ?
 ಸರ್ಫ್ರಾಜ್‌ ಒಟ್ಟಾರೆ 3  ಓವರ್‌ಗಳನ್ನು ಎಸೆದಿದ್ದಾರೆ. ಇದರಲ್ಲಿ 3 ಮೇಡನ್‌, ಶೂನ್ಯ ರನ್‌ ಬಿಟ್ಟುಕೊಟ್ಟು 6 ವಿಕೆಟ್‌ ಕಬಳಿಸಿದ್ದಾರೆ. 9ನೇ ಓವರ್‌ ಎಸೆಯಲು ಆರಂಭಿಸಿದ ಸರ್ಫ್ರಾಜ್‌ಗೆ ಮೊದಲ 2 ಎಸೆತಗಳಲ್ಲಿ 2 ವಿಕೆಟ್‌ ಸಿಕ್ಕಿತು. 3ನೇ ಎಸೆತ ಡಾಟ್‌ಬಾಲ್‌ ಆಯಿತು.

ನಂತರದ ಮೂರು ಎಸೆತದಲ್ಲಿ ಸತತ ಮೂರು ವಿಕೆಟ್‌ ಕಬಳಿಸಿದರು. ಒಟ್ಟಾರೆ ಇವರ ಮೊದಲ ಓವರ್‌ನಲ್ಲಿ ಇವರಿಗೆ ಸಿಕ್ಕಿದ ವಿಕೆಟ್‌ ಸಂಖ್ಯೆ ಶೂನ್ಯಕ್ಕೆ 5. ನಂತರ 11ನೇ ಓವರ್‌ ಎಸೆಯಲು ಬಂದ ಇವರು ಮೊದಲ ಎಸೆತದಲ್ಲೇ ವಿಕೆಟ್‌ ಕಬಳಿಸಿ ವಿಕೆಟ್‌ಗಳಿಕೆ ಸಂಖ್ಯೆಯನ್ನು 6ಕ್ಕೇರಿಸಿಕೊಂಡರು. ಇವರ ಮಾರಕ ಬೌಲಿಂಗ್‌ನಿಂದಾಗಿ ಪಯೋನಿಯರ್‌ ತಂಡ ನೀಡಿದ್ದ 264 ರನ್‌ ಗುರಿ ಬೆನ್ನಟ್ಟಿದ ಮರ್ಕೆರಾ ಯೂತ್‌ ತಂಡ 14.3 ಓವರ್‌ಗಳಲ್ಲಿ 57 ರನ್‌ಗೆ ಆಲೌಟಾಗಿ ಭಾರೀ ಮುಖಭಂಗ ಅನುಭವಿಸಿತು.

„ ಯಾರಿವರು ಸರ್ಫ್ರಾಜ್‌?
ಮೂಲತಃ ಸರ್ಫ್ರಾಜ್‌ ಜಾರ್ಖಂಡ್‌ನ‌ವರು. ಸದ್ಯ ಇವರ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿದೆ. ಇವರು ಬೆಂಗಳೂರಿನ ಅಲ್‌ಅಮೀನ್‌ ಪದವಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದರು.

2014-15ರ ಸಾಲಿನ ಸೈಯದ್‌ ಮುಷ್ತಾಕ್‌ ಅಲಿ ಏಕದಿನ ಕ್ರಿಕೆಟ್‌ನಲ್ಲಿ ಜಾರ್ಖಂಡ್‌ ತಂಡವನ್ನು ಪ್ರತಿನಿಧಿಸಿದ್ದರು. ಒಟ್ಟಾರೆ 7 ಪಂದ್ಯಗಳಿಂದ 11 ವಿಕೆಟ್‌ ಕಬಳಿಸಿದ್ದರು. ಆ ವರ್ಷ ದೇಶೀಯ ಕ್ರಿಕೆಟ್‌ನಲ್ಲಿ 2ನೇ ಅತ್ಯಧಿಕ ವಿಕೆಟ್‌ ಪಡೆದ ಬೌಲರ್‌ ಎನಿಸಿಕೊಂಡಿದ್ದರು. ಸದ್ಯ ಕರ್ನಾಟಕ ಪ್ರೀಮಿಯರ್‌ ಲೀಗ್‌ (ಕೆಪಿಎಲ್‌)ನ ಪ್ರಮುಖ ತಂಡಗಳಲ್ಲಿ ಒಂದಾಗಿರುವ ಹುಬ್ಬಳ್ಳಿ ಟೈಗರ್ ತಂಡದ ಸದಸ್ಯರಾಗಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.