ಕೋವಿಡ್ ಕಾಲದಲ್ಲಿ ಕ್ರಿಕೆಟ್: ಐಪಿಎಲ್ ನಲ್ಲಿ ಅಭಿಮಾನಿಗಳಿಗೆ ನಿರಾಶೆ ಮಾಡಲಿದೆ ಈ ಏಳು ಅಂಶಗಳು


Team Udayavani, Sep 10, 2020, 2:52 PM IST

vಕೋವಿಡ್ ಕಾಲದಲ್ಲಿ ಕ್ರಿಕೆಟ್: ಐಪಿಎಲ್ ನಲ್ಲಿ ಅಭಿಮಾನಿಗಳಿಗೆ ನಿರಾಶೆ ಮಾಡಲಿದೆ ಈ ಏಳು ಅಂಶಗಳು

ಮಣಿಪಾಲ: ಚುಟುಕು ಮಾದರಿ ಕ್ರಿಕೆಟ್ ನ ಅತೀ ದೊಡ್ಡ ಕೂಟ ಐಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್) ಗೆ ಬಿಸಿಸಿಐ ಸಜ್ಜಾಗಿದೆ. ಭಾರತದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಿರುವ ಕಾರಣ ಈ ಬಾರಿಯ ಐಪಿಎಲ್ ಅನ್ನು ಯುಎಇನಲ್ಲಿ ಆಯೋಜಿಸಿದ್ದು, ಇನ್ನು ಕೆಲವು ದಿನಗಳಷ್ಟೇ ಬಾಕಿಯಿದೆ. ದುಬೈ ತಲುಪಿರುವ ಆಟಗಾರರು ಕ್ವಾರಂಟೈನ್ ಮುಗಿಸಿ ಟ್ರೈನಿಂಗ್ ಆರಂಭಿಸಿದ್ದಾರೆ. ಕ್ರೀಡಾ ಜಗತ್ತು ಈ ಬಾರಿಯ ಐಪಿಎಲ್ ಕೂಟಕ್ಕಾಗಿ ಎದುರು ನೋಡುತ್ತಿದೆ. ಆದರೆ ಅಭಿಮಾನಿಗಳಿಗೆ ಕೆಲವು ಅಂಶಗಳು ನಿರಾಸೆ ತರಲಿದೆ.

1 ಪ್ರೇಕ್ಷಕರಿಗಿಲ್ಲ ಪ್ರವೇಶ

ಕೋವಿಡ್-19 ಸೋಂಕು ಭೀತಿಯ ಕಾರಣ ಈ ಬಾರಿಯ ಐಪಿಎಲ್ ಗೆ ಪ್ರೇಕ್ಷಕರಿಗೆ ಪ್ರವೇಶ ನಿರಾಕರಿಸಲಾಗಿದೆ. ದುಬೈ, ಅಬುದಾಬಿ, ಶಾರ್ಜಾದಲ್ಲಿ ಈ ಬಾರಿಯ ಕೂಟ ನಡೆಯಲಿದ್ದು, ಇದುವರೆಗೆ ನಿರ್ಧರಿಸಿದಂತೆ ಎಲ್ಲಾ ಪಂದ್ಯಗಳು ಮುಚ್ಚಿದ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಲ್ಲಿ ಈಗಾಗಲೇ ಪ್ರೇಕ್ಷಕರಿಲ್ಲದೆ ಪಂದ್ಯಾವಳಿ ಆಯೋಜಿಸಿರುವ ಕಾರಣ ಇದೇ ತಂತ್ರ ಅನುಸರಿಸಲು ಬಿಸಿಸಿಐ ಮುಂದಾಗಿದೆ.

2 ಲಾಂಛನ ವೇಷಧಾರಿಗಳಿಲ್ಲ

ಲಾಂಛನ ವೇಷಧಾರಿಗಳಿಲ್ಲ

ಕೂಟದ ಪ್ರಮುಖ ಆಕರ್ಷಣೆಗಳಿಲ್ಲ ಒಂದಾದ ಲಾಂಛನ ವೇಷಧಾರಿಗಳಿಗೆ ಈ ಬಾರಿ ಅವಕಾಶವಿಲ್ಲ. ತಂಡಗಳ ಅಥವಾ ಪ್ರಾಯೋಜಕರ ಲಾಂಛನದ ವೇಷತೊಟ್ಟು ಮೈದಾನದಲ್ಲಿ ಓಡಾಡುತ್ತಿದ್ದ ಇವರು ಪ್ರೇಕ್ಷಕರಿಗೆ ಮನರಂಜನೆ ನೀಡುತ್ತಿದ್ದರು. ಆದರೆ ಈ ಬಾರಿ ಇದಕ್ಕೆ ಅವಕಾಶವಿಲ್ಲ.

ಇದನ್ನೂ ಓದಿ: ಐಪಿಎಲ್ 2020: ಕೋವಿಡ್ ನೆಗೆಟಿವ್ ಹಿನ್ನಲೆ ಚೆನ್ನೈ ಕ್ಯಾಂಪ್ ಗೆ ಮರಳಿದ ದೀಪಕ್ ಚಾಹರ್

3 ಬೇರೆ ರೀತಿಯ ಮಾಧ್ಯಮ ಸಂವಾದ

ಕೂಟದ ನಂತರ ನಡೆಯುವ ಪಂದ್ಯಶ್ರೇಷ್ಠ ಪುರಸ್ಕಾರ ಕಾರ್ಯಕ್ರಮದ ಸ್ವರೂಪವೂ ಈ ಬಾರಿ ಬದಲಾಗಲಿದೆ. ಪ್ರಾಯೋಜಕರ ಪ್ರತಿನಿಧಿಗಳು ಸ್ಥಳದಲ್ಲಿ ಇರುವುದಿಲ್ಲ. ಸಂದರ್ಶನ ಮಾಡುವ ವ್ಯಕ್ತಿಯೂ ಅಂತರ ವಹಿಸಿ ಸಂದರ್ಶನ ಮಾಡಬಹುದು ಅಥವಾ ಡಿಜಿಟಲ್ ಮಾದರಿಯಲ್ಲಿ ಸಂದರ್ಶನ ಇರುವ ಸಾಧ್ಯತೆಯಿದೆ.

4 ಡ್ರೆಸಿಂಗ್ ರೂಮ್ ಸಂದರ್ಶನವಿಲ್ಲ

ಆಟಗಾರರು ಬಯೋ ಬಬಲ್ ನಲ್ಲಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅಗತ್ಯವಿರುವ ಕಾರಣ ನೇರಪ್ರಸಾರ ಮಾಡುವ ವಾಹಿನಿ ಸಿಬ್ಬಂದಿ ಆಟಗಾರರ ಕೊಠಡಿ ಪ್ರವೇಶಿಸಿ ಸಂದರ್ಶನ ಮಾಡುವ ಅವಕಾಶ ಈ ಬಾರಿ ಕಡಿಮೆ.

5 ಕಿಟ್ ಹಸ್ತಾಂತರವಿಲ್ಲ

ಕೋವಿಡ್ ಕಾರಣದಿಂದ ಈ ಬಾರಿ ಆಟಗಾರರು ಬೇರೆಯವರ ಬ್ಯಾಟ್, ಪ್ಯಾಡ್, ಹೆಲ್ಮೆಟ್ ಮುಂತಾದ ಕಿಟ್ ಗಳನ್ನು ಪಡೆಯುವಂತಿಲ್ಲ. ತಮ್ಮ ತಮ್ಮ ಕಿಟ್ ಗಳನ್ನೇ ಬಳಸಬೇಕಾದ ಅನಿವಾರ್ಯತೆ ಆಟಗಾರರಿಗೆ ಎದುರಾಗಿದೆ.

6 ಶಾರುಖ್ ಖಾನ್, ಪ್ರೀತಿ ಜಿಂಟಾ, ಶಿಲ್ಪಾ ಶೆಟ್ಟಿ ಇರಲಾರರು

ಶಾರುಖ್ ಖಾನ್, ಪ್ರೀತಿ ಜಿಂಟಾ, ಶಿಲ್ಪಾ ಶೆಟ್ಟಿ

ಐಪಿಎಲ್ ನ ಪ್ರಮುಖ ಆಕರ್ಷಣೆಗಳಾದ ಬಾಲಿವುಡ್ ಸ್ಟಾರ್ ಗಳು ಈ ಬಾರಿ ಮೈದಾನಕ್ಕೆ ಬರುವಂತಿಲ್ಲ. ಪ್ರಾಂಚೈಸಿ ಮಾಲಕರಾದ ಶಾರುಖ್ ಖಾನ್, ಪ್ರೀತಿ ಜಿಂಟಾ, ಶಿಲ್ಪಾ ಶೆಟ್ಟಿ ಪ್ರತೀ ವರ್ಷವೂ ತಮ್ಮ ತಂಡಗಳಿಗೆ ಬೆಂಬಲಿಸಲು ಮೈದಾನಕ್ಕೆ ಆಗಮಿಸುತ್ತಿದ್ದರು. ಈ ಮೂಲಕ ಅಭಿಮಾನಿಗಳ ಪ್ರೋತ್ಸಾಹಕ್ಕೂ ಕಿಚ್ಚು ಹಚ್ಚುತ್ತಿದ್ದರು. ಆದರೆ ಈ ಬಾರಿ ಇದಕ್ಕೆ ಅವಕಾಶವಿಲ್ಲ.

7 ಚಿಯರ್ ಲೀಡರ್ಸ್ ಇರಲ್ಲ

ಪ್ರತೀ ಬೌಂಡರಿ ಸಿಕ್ಸರ್ ಹೊಡೆದಾಗ, ವಿಕೆಟ್ ಬಿದ್ದಾಗ ಕುಣಿದು ಕುಪ್ಪಳಿಸುತ್ತಿದ್ದ ಚಿಯರ್ ಲೀಡರ್ಸ್ ಗೆ ಈ ಬಾರಿಯ ಐಪಿಎಲ್ ನಲ್ಲಿ ಅವಕಾಶವಿಲ್ಲ. ಕೆರಿಬಿಯನ್ ಪ್ರೀಮಿಯರ್ ಲೀಗ್ ನಲ್ಲಿ ಡಿಜಿಟಲ್ ಪರದೆ ಮೇಲೆ ಚಿಯರ್ ಲೀಡರ್ಸ್ ವಿಡಿಯೋ ಪ್ರಸಾರ ಮಾಡಲಾಗುತ್ತಿತ್ತು. ಐಪಿಎಲ್ ನಲ್ಲೂ ಇಂತಹದೇ ಅಥವಾ ಇದಕ್ಕಿಂತ ವಿಭಿನ್ನವಾದ ಯೋಜನೆಯನ್ನು ಬಿಸಿಸಿಐ ಮಾಡುವ ನಿರೀಕ್ಷೆಯಿದೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.