71ನೇ ರಾಷ್ಟ್ರೀಯ ವಾಲಿಬಾಲ್‌: ಕುಂದಾಪುರದ ಅನೂಪ್‌ ನಾಯಕ


Team Udayavani, Feb 3, 2023, 6:58 AM IST

tdy-30

ಕುಂದಾಪುರ: ಅಸ್ಸಾಂನ ಗುವಾಹಟಿಯಲ್ಲಿ ಗುರುವಾರ ಆರಂಭವಾಗಿರುವ 71ನೇ ರಾಷ್ಟ್ರೀಯ ವಾಲಿಬಾಲ್‌ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡದ ನಾಯಕನಾಗಿ ಕುಂದಾಪುರದ ಅನೂಪ್‌ ಡಿ’ಕೋಸ್ಟಾ ಆಯ್ಕೆಯಾಗಿ ದ್ದಾರೆ. ಈ ಪಂದ್ಯಾವಳಿ ಫೆ. 8ರ ವರೆಗೆ ನಡೆಯಲಿದೆ.

ಗುವಾಹಟಿಗೆ ತೆರಳಿರುವ 12 ಮಂದಿಯ ಕರ್ನಾಟಕ ತಂಡದಲ್ಲಿ ಕೋಟೇಶ್ವರ ಸಮೀಪದ ಕಟೆRàರಿಯ ಚಂದನ್‌ ಆಚಾರ್ಯ ಸ್ಥಾನ ಪಡೆದಿದ್ದಾರೆ. ಇವರೊಂದಿಗೆ ಭಟ್ಕಳದ ನವೀದ್‌ ಖಾನ್‌ ಕೂಡ ಆಯ್ಕೆಯಾಗಿದ್ದಾರೆ.

ಅನೂಪ್‌ ಡಿ’ಕೋಸ್ಟಾ ಹೈದರಾಬಾದ್‌ನಲ್ಲಿ ಆದಾಯ ತೆರಿಗೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಭಾರತೀಯ ಜೂನಿಯರ್‌ ತಂಡದ ನಾಯಕನಾಗಿ, ಸೀನಿ ಯರ್‌ ತಂಡದ ಆಟ ಗಾರನಾಗಿ ದೇಶವನ್ನು ಪ್ರತಿ ನಿಧಿಸಿರುವ ಅನುಭವ ಹೊಂದಿರುವ ಇವರು, ಕಳೆದ 15 ವರ್ಷಗಳಿಂದ ಕರ್ನಾಟಕ ತಂಡ ವನ್ನು ಪ್ರತಿನಿಧಿಸುತ್ತಿದ್ದಾರೆ. 13 ಬಾರಿ ರಾಷ್ಟ್ರೀಯ ವಾಲಿಬಾಲ್‌ ಪಂದ್ಯಾವಳಿ ಯಲ್ಲಿ ಕರ್ನಾಟಕ ತಂಡದ ಪರ ಆಡಿ ರುವ ಹೆಗ್ಗಳಿಕೆ ಇವರದು. ರಾಷ್ಟ್ರೀಯ ಟೂರ್ನಿಯೊಂದರಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ತಂಡವನ್ನು ಮುನ್ನ ಡೆಸುವ ಅವಕಾಶ ಪಡೆದಿದ್ದಾರೆ.

ಆಲ್‌ರೌಂಡ್‌ ಆಟಗಾರ:

ಅತ್ಯುತ್ತಮ ವಾಲಿಬಾಲ್‌ ಕೌಶಲ ಗಳನ್ನು ಪ್ರಯೋಗಿಸುವ ಅನೂಪ್‌ ಅವರಿಗೆ ಏಷ್ಯಾದ ಅತ್ಯಂತ ಎತ್ತರದ ನೆಗೆತಗಾರ ಎನ್ನುವ ಖ್ಯಾತಿಯಿದೆ. ಆಲ್‌ರೌಂಡರ್‌ ಆಗಿದ್ದು, ಬ್ಲಾಕ್‌, ಡಿಫೆನ್ಸ್‌ ಹಾಗೂ ಸ್ಮಾಷ್‌ನಲ್ಲೂ ಪರಿಣತಿ ಹೊಂದಿದ್ದಾರೆ. 2008ರಲ್ಲಿ ರಾಜ್ಯ ವಾಲಿಬಾಲ್‌ ತಂಡಕ್ಕೆ ಆಯ್ಕೆಯಾಗಿದ್ದು, ಅದೇ ವರ್ಷ ಇರಾನ್‌ನಲ್ಲಿ ನಡೆದ ಜೂನಿಯರ್‌ ಏಷ್ಯನ್‌ ವಾಲಿಬಾಲ್‌ ಚಾಂಪಿಯನ್‌ಶಿಪ್‌ನಲ್ಲಿ ಬೆಸ್ಟ್‌ ಸ್ಕೋರರ್‌ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದು, ಬೆಸ್ಟ್‌ ಏಷ್ಯನ್‌ ಯೂತ್‌ ಪ್ರಶಸ್ತಿಗೆ ಪಾತ್ರರಾಗಿದ್ದರು. 2013ರಲ್ಲಿ ಕಿರಿಯರ ಏಷ್ಯನ್‌ ಚಾಂಪಿಯನ್‌ ಶಿಪ್‌ನಲ್ಲಿ ಮಿಂಚಿದ್ದು, 2015ರಲ್ಲಿ ನಡೆದ ಫೆಡರೇಷನ್‌ ಕಪ್‌ನಲ್ಲಿ ಕರ್ನಾಟಕ ತಂಡವನ್ನು ಚಾಂಪಿಯನ್‌ ಪಟ್ಟಕ್ಕೇರಿಸಿ ದ್ದರು. 2015ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಟಾಪ್ ನ್ಯೂಸ್

Ugadi special; ಕುಸುಮಾಕರನನ್ನು ಸ್ವಾಗತಿಸಿ

Ugadi special; ಕುಸುಮಾಕರನನ್ನು ಸ್ವಾಗತಿಸಿ

6-desiswara

ನೆರಳಿನಾಸರೆಯಲ್ಲಿ….

yugadi-article

ಹೊಸದೊಂದು ವರುಷವಿದು ಮತ್ತೆ ಯುಗಾದಿ

1-sad-sadsad

ದೆಹಲಿಯಲ್ಲಿ ಪ್ರಧಾನಿ ವಿರುದ್ಧ ಪೋಸ್ಟರ್ ಅಭಿಯಾನ:100 ಎಫ್‌ಐಆರ್‌,6 ಜನ ಅರೆಸ್ಟ್

neraj chopra

ನೀರಜ್‌ ಚೋಪ್ರಾಗೆ ಟರ್ಕಿಯಲ್ಲಿ ತರಬೇತಿ

ಒಮಾನ್‌ನಿಂದ ಇಸ್ಲಾಂ ವಿವಾದಿತ ಪ್ರಚಾರಕ ಜಕೀರ್‌ ನಾಯ್ಕ ಗಡಿಪಾರು?

ಒಮಾನ್‌ನಿಂದ ಇಸ್ಲಾಂ ವಿವಾದಿತ ಪ್ರಚಾರಕ ಜಕೀರ್‌ ನಾಯ್ಕ ಗಡಿಪಾರು?

rani ram

ರಾಣಿ ರಾಂಪಾಲ್‌ರಿಂದ ಹಾಕಿ ಕ್ರೀಡಾಂಗಣ: ‘ರಾಣಿ ಗರ್ಲ್ಸ್‌ ಹಾಕಿ ಟರ್ಫ್‌ʼ ಎಂದು ಮರುನಾಮಕರಣ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

neraj chopra

ನೀರಜ್‌ ಚೋಪ್ರಾಗೆ ಟರ್ಕಿಯಲ್ಲಿ ತರಬೇತಿ

rani ram

ರಾಣಿ ರಾಂಪಾಲ್‌ರಿಂದ ಹಾಕಿ ಕ್ರೀಡಾಂಗಣ: ‘ರಾಣಿ ಗರ್ಲ್ಸ್‌ ಹಾಕಿ ಟರ್ಫ್‌ʼ ಎಂದು ಮರುನಾಮಕರಣ

klasss

ದಕ್ಷಿಣ ಆಫ್ರಿಕಾಕ್ಕೆ 4 ವಿಕೆಟ್‌ ಗೆಲುವು

boxing

ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌: ನಿತು, ಮನೀಷಾ ಕ್ವಾರ್ಟರ್‌ಫೈನಲಿಗೆ

vinesh

ಬಜರಂಗ್‌, ವಿನೇಶ್‌ ವಿದೇಶಿ ತರಬೇತಿಗೆ ಒಪ್ಪಿಗೆ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

Ugadi special; ಕುಸುಮಾಕರನನ್ನು ಸ್ವಾಗತಿಸಿ

Ugadi special; ಕುಸುಮಾಕರನನ್ನು ಸ್ವಾಗತಿಸಿ

1-sadsd-asd

ಬೆಂಗಳೂರು: ಮೊದಲ ಪತ್ನಿ ಕೊಂದು 2ನೇ ಪತಿಯ ಮಗು ಹತ್ಯೆಗೂ ಯತ್ನ!

6-desiswara

ನೆರಳಿನಾಸರೆಯಲ್ಲಿ….

yugadi-article

ಹೊಸದೊಂದು ವರುಷವಿದು ಮತ್ತೆ ಯುಗಾದಿ

1-sad-sadsad

ದೆಹಲಿಯಲ್ಲಿ ಪ್ರಧಾನಿ ವಿರುದ್ಧ ಪೋಸ್ಟರ್ ಅಭಿಯಾನ:100 ಎಫ್‌ಐಆರ್‌,6 ಜನ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.