ಟೀಮ್‌ ಇಂಡಿಯಾಕ್ಕೆ ವರ್ಷವಿಡೀ ಕ್ರಿಕೆಟ್‌!

ನ. 2021-ಜು. 2022 ನಡುವೆ 8 ಟೆಸ್ಟ್‌, 9 ಏಕದಿನ, 21 ಟಿ20 ಮತ್ತು ಐಪಿಎಲ್‌

Team Udayavani, Nov 10, 2021, 6:10 AM IST

ಟೀಮ್‌ ಇಂಡಿಯಾಕ್ಕೆ ವರ್ಷವಿಡೀ ಕ್ರಿಕೆಟ್‌!

ಹೊಸದಿಲ್ಲಿ: ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ನಾಕೌಟ್‌ ಪ್ರವೇಶಿಸುವ ಮುನ್ನವೇ ನಿರ್ಗಮಿಸಿದ ಟೀಮ್‌ ಇಂಡಿಯಾಕ್ಕೆ ಮುಂದಿನ ಎಂಟು ತಿಂಗಳ ಕಾಲ ಬಿಡುವಿಲ್ಲದಷ್ಟು ಸರಣಿಗಳು ಕಾದಿವೆ.

ನವಂಬರ್‌ನಿಂದ 2022ರ ಜುಲೈ ತನಕ ಬರೋಬ್ಬರಿ 8 ಟೆಸ್ಟ್‌, 9 ಏಕದಿನ ಹಾಗೂ 21 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಲಿದೆ. ಜತೆಗೆ 74 ಪಂದ್ಯಗಳ ಮಹಾ ಐಪಿಎಲ್‌!

ಈ ಅವಧಿಯಲ್ಲಿ ಒಟ್ಟು 6 ಸರಣಿಗಳನ್ನು ಭಾರತ ಆಡಲಿದೆ. ಇದರಲ್ಲಿ 4 ತವರಿನ ಸರಣಿಗಳಾದರೆ, 2 ವಿದೇಶಿ ಸರಣಿಗಳಾಗಿವೆ.

ನ್ಯೂಜಿಲ್ಯಾಂಡ್‌, ವೆಸ್ಟ್‌ ಇಂಡೀಸ್‌, ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗಳನ್ನು ತವರಲ್ಲಿ ಆಡಲಾಗುವುದು. ಎರಡು ವಿದೇಶಿ ಸರಣಿಗಳಾಗಿವೆ. ಭಾರತ ಯುಎಇಯಿಂದ ವಾಪಸಾಗುವಷ್ಟರಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧದ ತವರಿನ ಸರಣಿ ಮೊದಲ್ಗೊಳ್ಳಲಿದೆ. ನ. 17ರಿಂದ ಡಿ.7ರ ತನಕ ನಡೆಯುವ ಈ ಸರಣಿಯಲ್ಲಿ 3 ಟಿ20, 2 ಟೆಸ್ಟ್‌ ಪಂದ್ಯಗಳನ್ನು ಆಡಲಾಗುವುದು.

ಇದನ್ನೂ ಓದಿ:ಭೂಗತಜಗತ್ತಿನ ಜತೆ ಫಡ್ನಾವೀಸ್ ಗೆ ಇರುವ ನಂಟನ್ನು ಬಹಿರಂಗಗೊಳಿಸುವೆ: ಮಲಿಕ್

ವರ್ಷಾಂತ್ಯ ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಇದೊಂದು ಪೂರ್ಣ ಪ್ರಮಾಣದ ಸರಣಿಯಾಗಿದ್ದು, 3 ಟೆಸ್ಟ್‌, 3 ಏಕದಿನ ಹಾಗೂ 4 ಟಿ20 ಪಂದ್ಯಗಳನ್ನು ಆಡಲಾಗುವುದು. ಜ. 26ರ ತನಕ ಈ ಸರಣಿ ಸಾಗಲಿದೆ.

ಫೆಬ್ರವರಿಯಲ್ಲಿ ವೆಸ್ಟ್‌ ಇಂಡೀಸ್‌ ತಂಡ ಭಾರತಕ್ಕೆ ಆಗಮಿಸಿ 3 ಏಕದಿನ, 3 ಟಿ20 ಪಂದ್ಯಗಳ ಸರಣಿ ಆಡಲಿದೆ. ಬಳಿಕ ಶ್ರೀಲಂಕಾ ಆಗಮನದ ಸರದಿ. ಇದು 2 ಟೆಸ್ಟ್‌ ಹಾಗೂ 3 ಏಕದಿನ ಪಂದ್ಯಗಳ ಸರಣಿ.

ಮುಂದಿನದ್ದು ಐಪಿಎಲ್‌. ಇದು ಮುಗಿದ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ತಂಡ ಆಗಮಿಸಿ 5 ಟಿ20 ಪಂದ್ಯಗಳನ್ನು ಆಡಲಿದೆ (ಜೂ. 9-19). ಜುಲೈ ಆರಂಭದಲ್ಲಿ ಭಾರತ ತಂಡ ಇಂಗ್ಲೆಂಡಿಗೆ ತೆರಳಿ ಬಾಕಿ ಉಳಿದ ಒಂದು ಟೆಸ್ಟ್‌, 3 ಟಿ20 ಹಾಗೂ 3 ಏಕದಿನ ಪಂದ್ಯಗಳಲ್ಲಿ ಪಾಲ್ಗೊಳ್ಳಲಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.