ಟಿ20: ಫೈನಲಿಗೆ ಆಸ್ಟ್ರೇಲಿಯ


Team Udayavani, Feb 11, 2018, 6:30 AM IST

The-T20-tri-series,-Austral.jpg

ಮೆಲ್ಬರ್ನ್: ಟಿ20 ತ್ರಿಕೋನ ಸರಣಿಯ ಶನಿವಾರದ ಪಂದ್ಯದಲ್ಲಿ ಕಾಂಗರೂ ಪಡೆ ಸುಲಭದಲ್ಲಿ ಇಂಗ್ಲೆಂಡನ್ನು ಕೆಡವಿದೆ. 33 ಎಸೆತ ಬಾಕಿ ಇರುವಾಗಲೇ 7 ವಿಕೆಟ್‌ಗಳಿಂದ ಗೆದ್ದು ಬಂದಿದೆ.

ಮೆಲ್ಬರ್ನ್ನಲ್ಲಿ ನಡೆದ ಮುಖಾಮುಖೀಯಲ್ಲಿ ಬ್ಯಾಟಿಂಗಿಗೆ ಇಳಿಸಲ್ಪಟ್ಟ ಇಂಗ್ಲೆಂಡ್‌ 7 ವಿಕೆಟಿಗೆ ಕೇವಲ 137 ರನ್‌ ಗಳಿಸಿದರೆ, ಆಸ್ಟ್ರೇಲಿಯ 14.3 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 138 ರನ್‌ ಬಾರಿಸಿ ವಿಜಯಿಯಾಯಿತು. ಇದರೊಂದಿಗೆ ಆಡಿದ ಮೂರೂ ಪಂದ್ಯಗಳನ್ನು ಗೆದ್ದ ಆಸೀಸ್‌ ಫೈನಲಿಗೆ ಲಗ್ಗೆ ಇರಿಸಿತು. ಕೂಟದ ಉಳಿದ ಲೀಗ್‌ ಪಂದ್ಯಗಳು ನ್ಯೂಜಿಲ್ಯಾಂಡಿನಲ್ಲಿ ನಡೆಯಲಿವೆ. ನ್ಯೂಜಿಲ್ಯಾಂಡ್‌ ಮತ್ತು ಇಂಗ್ಲೆಂಡ್‌ ನಡುವೆ ಫೈನಲ್‌ ಪ್ರವೇಶಿಸಲಿರುವ ತಂಡ ಯಾವುದು ಎಂಬುದು ಇಲ್ಲಿ ಇತ್ಯರ್ಥವಾಗಲಿದೆ.

ಚೇಸಿಂಗ್‌ ವೇಳೆ ಆಸ್ಟ್ರೇಲಿಯ ಡೇವಿಡ್‌ ವಾರ್ನರ್‌ (2) ಅವರನ್ನು ಬೇಗನೇ ಕಳೆದುಕೊಂಡಿತಾದರೂ ಡಿ’ಆರ್ಸಿ ಶಾರ್ಟ್‌ (ಔಟಾಗದೆ 36), ಕ್ರಿಸ್‌ ಲಿನ್‌ (31), ಗ್ಲೆನ್‌ ಮ್ಯಾಕ್ಸ್‌ವೆಲ್‌ (39) ಮತ್ತು ಆರನ್‌ ಫಿಂಚ್‌ (ಔಟಾಗದೆ 20) ಸೇರಿಕೊಂಡು ನಿರಾಯಾಸವಾಗಿ ತಂಡವನ್ನು ದಡ ಮುಟ್ಟಿಸಿದರು. ಆಸೀಸ್‌ ಬ್ಯಾಟ್ಸ್‌ಮನ್‌ಗಳ ಅಬ್ಬರದ ವೇಳೆ 12 ಬೌಂಡರಿ ಹಾಗೂ 7 ಸಿಕ್ಸರ್‌ ಸಿಡಿಯಲ್ಪಟ್ಟಿತು.

ಇಂಗ್ಲೆಂಡಿಗೆ ಆಘಾತ
ಎಂಸಿಜಿಯಲ್ಲಿ ಇಂಗ್ಲೆಂಡಿನ ಆರಂಭ ಅತ್ಯಂತ ಆಘಾತಕಾರಿಯಾಗಿತ್ತು. ಆಸೀಸ್‌ ಸ್ಟ್ರೈಕ್‌ ಬೌಲರ್‌ಗಳಾದ ಕೇನ್‌ ರಿಚರ್ಡ್‌ಸನ್‌-ಬಿಲ್ಲಿ ಸ್ಟಾನ್‌ಲೇಕ್‌ ಘಾತಕವಾಗಿ ಎರಗಿದರು. 16 ರನ್‌ ಆಗುವಷ್ಟರಲ್ಲಿ ಆರಂಭಿಕರಾದ ಜಾಸನ್‌ ರಾಯ್‌ (8) ಮತ್ತು ಅಲೆಕ್ಸ್‌ ಹೇಲ್ಸ್‌ (3) ವಿಕೆಟ್‌ ಉರುಳಲ್ಪಟ್ಟಿತು. ಡೇವಿಡ್‌ ಮಾಲನ್‌ (10) ಕೂಡ ಹೆಚ್ಚು ಹೊತ್ತು ಉಳಿಯಲಿಲ್ಲ. 34 ರನ್ನಿಗೆ 3 ವಿಕೆಟ್‌ ಬಿತ್ತು.

ಈ ಹಂತದಿಂದ ಇಂಗ್ಲೆಂಡ್‌ ತುಸು ಚೇತರಿಕೆಯ ಪ್ರದರ್ಶನ ನೀಡತೊಡಗಿತು. ಜೇಮ್ಸ್‌ ವಿನ್ಸ್‌ (21), ನಾಯಕ ಜಾಸ್‌ ಬಟ್ಲರ್‌ (46), ಸ್ಯಾಮ್‌ ಬಿಲ್ಲಿಂಗ್ಸ್‌ (29) ಜವಾಬ್ದಾರಿಯುತ ಆಟವಾಡಿದರು. ಆದರೂ ಇಂಗ್ಲೆಂಡ್‌ ಸ್ಕೋರ್‌ಬೋರ್ಡ್‌ನಲ್ಲಿ ಭಾರೀ ಮೊತ್ತವೇನೂ ಕಂಡುಬರಲಿಲ್ಲ. ಬಟ್ಲರ್‌ ತಮ್ಮ 46 ರನ್ನಿಗೆ 49 ಎಸೆತ ತೆಗೆದುಕೊಂಡರು. ಹೊಡೆದದ್ದು 3 ಬೌಂಡರಿ ಮಾತ್ರ. ಇಂಗ್ಲೆಂಡ್‌ ಇನ್ನಿಂಗ್ಸಿನ ಏಕೈಕ ಸಿಕ್ಸರ್‌ ಬಿಲ್ಲಿಂಗ್ಸ್‌ ಅವರಿಂದ ಸಿಡಿಯಲ್ಪಟ್ಟಿತು.

ಸಂಕ್ಷಿಪ್ತ ಸ್ಕೋರ್‌: ಇಂಗ್ಲೆಂಡ್‌-7 ವಿಕೆಟಿಗೆ 137 (ಬಟ್ಲರ್‌ 46, ಬಿಲ್ಲಿಂಗ್ಸ್‌ 29, ವಿನ್ಸ್‌ 21, ರಿಚರ್ಡ್‌ಸನ್‌ 33ಕ್ಕೆ 3, ಸ್ಟಾನ್‌ಲೇಕ್‌ 28ಕ್ಕೆ 2). ಆಸ್ಟ್ರೇಲಿಯ-14.3 ಓವರ್‌ಗಳಲ್ಲಿ 3 ವಿಕೆಟಿಗೆ 138 (ಮ್ಯಾಕ್ಸ್‌ವೆಲ್‌ 39, ಶಾರ್ಟ್‌ ಔಟಾಗದೆ 36, ಫಿಂಚ್‌ ಔಟಾಗದೆ 20, ಜೋರ್ಡನ್‌ 26ಕ್ಕೆ 2). ಪಂದ್ಯಶ್ರೇಷ್ಠ: ಕೇನ್‌ ರಿಚರ್ಡ್‌ಸನ್‌.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.