ಐಪಿಎಲ್ ಸೇರಿ ಎಲ್ಲ ಮಾದರಿ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಎಬಿ ಡಿವಿಲಿಯರ್ಸ್


Team Udayavani, Nov 19, 2021, 1:06 PM IST

ಐಪಿಎಲ್ ಸೇರಿ ಎಲ್ಲ ಮಾದರಿ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಎಬಿ ಡಿವಿಲಿಯರ್ಸ್

ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಮಾಜಿ ಆಟಗಾರ, ಇಂಡಿಯನ್ ಪ್ರೀಮಿಯರ್ ಲೀಗ್ ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಆಟಗಾರ ಎಬಿ ಡಿವಿಲಿಯರ್ಸ್ ಅವರು ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ದೂರವಾಗುವುದಾಗಿ ಘೋಷಿಸಿದ್ದಾರೆ.

ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿರುವ ಡಿವಿಲಿಯರ್ಸ್ ಅವರು ಫ್ರಾಂಚೈಸಿ ಕ್ರಿಕೆಟ್ ಆಡುತ್ತಿದ್ದರು. ಅದರಲ್ಲೂ ಪ್ರಮುಖವಾಗಿ ಐಪಿಎಲ್ ನ ಆರ್ ಸಿಬಿ ತಂಡದ ಪ್ರಮುಖ ಭಾಗವಾಗಿದ್ದರು. ಆದರೆ ಇದೀಗ ಐಪಿಎಲ್ ಸೇರಿದಂತೆ ಎಲ್ಲಾ ಲೀಗ್ ಗಳಿಗೆ ವಿದಾಯ ಘೋಷಿಸಿದ್ದಾರೆ.

“ಇದೊಂದು ಅದ್ಭುತ ಪ್ರಯಾಣವಾಗಿದೆ, ಆದರೆ ನಾನು ಎಲ್ಲಾ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಇದುವರೆಗೆ ನಾನು ಶುದ್ಧವಾದ ಆನಂದ ಮತ್ತು ಕಡಿವಾಣವಿಲ್ಲದ ಉತ್ಸಾಹದಿಂದ ಆಟವನ್ನು ಆಡಿದ್ದೇನೆ. ಈಗ, 37 ನೇ ವಯಸ್ಸಿನಲ್ಲಿ, ಆ ಜ್ವಾಲೆಯು ಇನ್ನು ಮುಂದೆ ಪ್ರಕಾಶಮಾನವಾಗಿ ಉರಿಯುವುದಿಲ್ಲ. ಅದು ನಾನು ಒಪ್ಪಿಕೊಳ್ಳಲೇಬೇಕಾದ ವಾಸ್ತವ. ಇದು ಹಠಾತ್ತಾಗಿ ಕಂಡರೂ ಸಹ, ನಾನು ಇಂದು ಈ ಘೋಷಣೆ ಮಾಡುತ್ತಿದ್ದೇನೆ. ಕ್ರಿಕೆಟ್ ನನ್ನ ಮೇಲೆ ಅಸಾಧಾರಣ ಪ್ರೀತಿ ತೋರಿದೆ. ಟೈಟಾನ್ಸ್, ಅಥವಾ ಪ್ರೋಟೀಸ್, ಅಥವಾ ಆರ್ ಸಿಬಿ, ಅಥವಾ ಪ್ರಪಂಚದಾದ್ಯಂತ ಆಡುತ್ತಿರಲಿ, ಆಟವು ನನಗೆ ಊಹಿಸಲಾಗದ ಅನುಭವಗಳನ್ನು ಮತ್ತು ಅವಕಾಶಗಳನ್ನು ನೀಡಿದೆ, ನಾನು ಯಾವಾಗಲೂ ಕೃತಜ್ಞನಾಗಿರುತ್ತೇನೆ. ಅದೇ ಹಾದಿಯಲ್ಲಿ ಸಾಗಿದ ಪ್ರತಿಯೊಬ್ಬ ತಂಡದ ಸಹ ಆಟಗಾರ, ಪ್ರತಿ ಎದುರಾಳಿ, ಪ್ರತಿ ತರಬೇತುದಾರ, ಪ್ರತಿಯೊಬ್ಬ ಫಿಸಿಯೋ ಮತ್ತು ಪ್ರತಿಯೊಬ್ಬ ಸಿಬ್ಬಂದಿ ಸದಸ್ಯರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಮತ್ತು ನಾನು ದಕ್ಷಿಣ ಆಫ್ರಿಕಾದಲ್ಲಿ, ಭಾರತದಲ್ಲಿ, ನಾನು ಎಲ್ಲೇ ಆಡಿದರೂ ನನಗೆ ದೊರೆತ ಬೆಂಬಲದಿಂದ ನಾನು ವಿನಮ್ರನಾಗಿದ್ದೇನೆ ಎಂದು ” ಎಂದು ಬರೆದುಕೊಂಡಿರುವ ಎಬಿ ಡಿವಿಲಿಯರ್ಸ್ ಹಿಂದಿ ಭಾಷೆಯಲ್ಲೂ ಧನ್ಯವಾದ ಎಂದು ಬರೆದಿದ್ದಾರೆ.

ಐಪಿಎಲ್ ನಲ್ಲಿ 184 ಪಂದ್ಯಗಳನ್ನಾಡಿರುವ ಎಬಿ ಡಿವಿಲಿಯರ್ಸ್ ಅವರು 5162 ರನ್ ಗಳಿಸಿದ್ದಾರೆ. 2021ರ ಐಪಿಎಲ್ ನಲ್ಲಿ 15 ಪಂದ್ಯಗಳಲ್ಲಿ ಎಬಿಡಿ, 313 ರನ್ ಗಳಿಸಿದ್ದರು.

ವಿರಾಟ್ ಕೊಹ್ಲಿ ಜೊತೆ ಆರ್ ಸಿಬಿ ತಂಡದ ಅವಿಭಾಜ್ಯ ಅಂಗವಾಗಿದ್ದ ಎಬಿಡಿ, ಕೊನೆಯವರೆಗೂ ಆರ್ ಸಿಬಿ ತಂಡದಲ್ಲೇ ಐಪಿಎಲ್ ಆಡುವುದಾಗಿ ಹೇಳಿದ್ದರು. ಅದರಂತೆ ಆರ್ ಸಿಬಿ ತಂಡದಲ್ಲೇ ತಮ್ಮ ಕ್ರಿಕೆಟ್ ಜೀವನವನ್ನು ಅಂತ್ಯಗೊಳಸಿದ್ದಾರೆ.

2011ರಲ್ಲಿ ಆರ್ ಸಿಬಿ ತಂಡವನ್ನು ಕೂಡಿಕೊಂಡ ಎಬಿಡಿ, ಬೆಂಗಳುರು ಫ್ರಾಂಚೈಸಿ ಪರವಾಗಿ 157 ಪಂದ್ಯವಾಡಿದ್ದರು. 158.33 ರ ಸ್ಟ್ರೈಕ್ ರೇಟ್ ನಲ್ಲಿ 4522 ರನ್ ಗಳಿಸಿದ್ದಾರೆ.

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.