Aishwarya Rai ಕುರಿತು ವಿವಾದಾತ್ಮಕ ಹೇಳಿಕೆ; ಟೀಕೆಗೆ ಒಳಗಾದ ಬಳಿಕ ಕ್ಷಮೆಯಾಚಿಸಿದ ರಜಾಕ್
Team Udayavani, Nov 15, 2023, 8:24 AM IST
ಕರಾಚಿ: ಪಾಕ್ ತಂಡ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ಇತ್ತೀಚೆಗೆ ಬಾಲಿವುಡ್ ನಟಿ ಐಶ್ವರ್ಯಾ ರೈ ಅವರ ಕುರಿತಾಗಿ ನೀಡಿದ ಹೇಳಿಕೆಯೊಂದು ವಿವಾದಕ್ಕೀಡು ಮಾಡಿತ್ತು. ರಜಾಕ್ ವಿರುದ್ದ ಟೀಕೆಗಳು ಕೇಳಿಬಂದ ಹಿನ್ನೆಲೆಯಲ್ಲಿ ತನ್ನ ಮಾತಿಗೆ ಅವರು ಕ್ಷಮೆಯಾಚಿಸಿದ್ದಾರೆ.
ಹೇಳಿದ್ದೇನು?:
ಪಾಕಿಸ್ತಾನ ವಿಶ್ವಕಪ್ ಟೂರ್ನಿಯಲ್ಲಿ ನೀಡಿದ ನಿರಾಶದಾಯಕ ಪ್ರದರ್ಶನದ ಬಗ್ಗೆ ಪ್ರಶ್ನೆ ಕೇಳಿದಾಗ, ಇದಕ್ಕೆ ಉತ್ತರವಾಗಿ ರಜಾಕ್ ಅವರು ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ಟೀಕಿಸುವ ಭರದಲ್ಲಿ ಉದಾಹರಣೆಯಾಗಿ ಸಂಬಂಧವೇ ಇಲ್ಲದ ಐಶ್ವರ್ಯಾ ರೈ ಅವರ ಹೆಸರನ್ನು ತಂದು ವಿವಾಕ್ಕೀಡಾಗಿದ್ದರು.
“ಯೂನಿಸ್ ಖಾನ್ ನಾಯಕನಾಗಿ ಉತ್ತಮ ಉದ್ದೇಶವನ್ನು ಹೊಂದಿದ್ದರು ಮತ್ತು ಇದು ನನಗೆ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವನ್ನು ನೀಡಿತ್ತು. ನಾವೆಲ್ಲ ಪಾಕಿಸ್ತಾನ ತಂಡದ ಉದ್ದೇಶದ ಬಗ್ಗೆ ಮಾತನಾಡುತ್ತೇವೆ. ವಾಸ್ತವವಾಗಿ ನಾವು ಪಾಕಿಸ್ತಾನದಲ್ಲಿ ಆಟಗಾರರನ್ನು ಅಭಿವೃದ್ಧಿಪಡಿಸುವ ಮತ್ತು ಬೆಳೆಸುವ ಉತ್ತಮ ಉದ್ದೇಶವನ್ನು ಹೊಂದಿಲ್ಲ. ಒಂದು ವೇಳೆ ನಾನು ಐಶ್ವರ್ಯಾ ರೈಯನ್ನು ಮದುವೆಯಾಗುವುದರಿಂದ ಸನ್ನಡತೆಯ ಮಕ್ಕಳು ಹುಟ್ಟುತ್ತವೆ ಎಂದು ನೀವು ಭಾವಿಸಿದರೆ ಅದು ಎಂದಿಗೂ ಸಂಭವಿಸುವುದಿಲ್ಲ”ಎಂದಿದ್ದರು.
ಈ ಮಾತು ಅನೇಕರನ್ನು ಕೆರಳಿಸಿತ್ತು. ಸ್ವತಃ ಪಾಕ್ ತಂಡ ಮಾಜಿ ವೇಗಿ ಶೋಯೆಬ್ ಅಖ್ತರ್ ಕೂಡ “ಯಾವ ಹೆಣ್ಣಿಗೂ ಹೀಗೆ ಅಗೌರವ ನೀಡಬಾರದು” ಎಂದು ರಜಾಕ್ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದರು. ಇತ್ತ ಕೆಲವರು ಇದೊಂದು ಥರ್ಡ್ ಕ್ಲಾಸ್ ಹೇಳಿಕೆಯೆಂದು ಟೀಕಿಸಿದ್ದರು.
ಇದೀಗ ಅಬ್ದುಲ್ ರಜಾಕ್ ಈ ಬಗ್ಗೆ ಕ್ಷಮೆಯಾಚಿಸಿದ್ದಾರೆ. ಟಿವಿಯೊಂದರಲ್ಲಿ ಮಾತನಾಡಿದ ಅವರು,“ನಿನ್ನೆ, ನಾವು ಕ್ರಿಕೆಟ್ ಕೋಚಿಂಗ್ ಮತ್ತು ಉದ್ದೇಶಗಳ ಬಗ್ಗೆ ಮಾತನಾಡುತ್ತಿದ್ದೆವು. ಆಗ ನಾನು ಬಾಯಿ ತಪ್ಪಿ ಐಶ್ವರ್ಯಾ ರೈ ಹೆಸರನ್ನು ತೆಗೆದುಕೊಂಡೆ. ನಾನು ಅವರ ಬಳಿ ವೈಯಕ್ತಿಕವಾಗಿ ಕ್ಷಮೆಯಾಚಿಸುತ್ತೇನೆ. ಯಾರ ಭಾವನೆಗೂ ಧಕ್ಕೆ ತರುವ ಉದ್ದೇಶ ನನಗಿರಲಿಲ್ಲ” ಎಂದಿದ್ದಾರೆ.
ಹಲವಾರು ಮಾಜಿ ಸಹ ಆಟಗಾರರು ಮತ್ತು ಕ್ರಿಕೆಟ್ ಸಮುದಾಯದ ಪ್ರಮುಖ ವ್ಯಕ್ತಿಗಳು ರಜಾಕ್ ಅವರ ಕಾಮೆಂಟ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ ನಂತರ ಅವರು ಕ್ಷಮೆಯಾಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು