ಗಾವಸ್ಕರ್‌ ಹೇಳಿಕೆಗೆ ಅನುಷ್ಕಾ ಕಿಡಿ


Team Udayavani, Sep 26, 2020, 6:24 AM IST

Anushka-Sharma

ಮುಂಬಯಿ: ಆರ್‌ಸಿಬಿ ತಂಡದ ನಾಯಕ ವಿರಾಟ್‌ ಕೊಹ್ಲಿಯವರ ಕಳಪೆ ಪ್ರದರ್ಶನದ ಬಗ್ಗೆ ಮಾಜಿ ಕ್ರಿಕೆಟಿಗ ಸುನೀಲ್‌ ಗಾವಸ್ಕರ್‌ ನೀಡಿರುವ ಆಕ್ಷೇಪಾರ್ಹ ಹೇಳಿಕೆಯಿಂದ ಕೊಹ್ಲಿ ಪತ್ನಿ ಅನುಷ್ಕಾ ಶರ್ಮ ಕೆರಳಿದ್ದಾರೆ.

ಗಾವಸ್ಕರ್‌ ಅವರು ತಮ್ಮ ಹೇಳಿಕೆಯ ಅರ್ಥವನ್ನು ವಿವರಿಸಬೇಕೆಂದು ಆಗ್ರಹಿಸಿದ್ದಾರೆ.

ಆರ್‌ಸಿಬಿ-ಪಂಜಾಬ್‌ ಪಂದ್ಯದ ವೇಳೆ ವೀಕ್ಷಕ ವಿವರಣೆ ನೀಡುತ್ತಿದ್ದ ಗಾವಸ್ಕರ್‌, “ಲಾಕ್‌ಡೌನ್‌ ಅವಧಿಯಲ್ಲಿ ಕೊಹ್ಲಿ ಕ್ರಿಕೆಟ್‌ ಅಭ್ಯಾಸ ನಡೆಸಿಲ್ಲ. ಅವರು ಕೇವಲ ಅನುಷ್ಕಾ ಬೌಲಿಂಗ್‌ ಮಾತ್ರ ಎದುರಿಸಿದ್ದಾರೆ ಎನ್ನಿಸುತ್ತದೆ. ಹಾಗಾಗಿಯೇ ಅವರ ಪ್ರದರ್ಶನ ಕಳಪೆಯಾಗಿದೆ’ ಎಂದಿದ್ದರು. ಇದಕ್ಕೆ ಕೊಹ್ಲಿ ಅಭಿಮಾನಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗಾವಸ್ಕರ್‌ ಅವರನ್ನು ಕಮೆಂಟ್ರಿ ತಂಡದಿಂದ ಕಿತ್ತುಹಾಕಬೇಕೆಂದು ಆಗ್ರಹಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಅನುಷ್ಕಾ, “ಗೌರವಾನ್ವಿತ ಗಾವಸ್ಕರ್‌ ಅವರೇ, ನೀವು ಜಂಟ್ಲಮನ್‌ ಕ್ರೀಡೆಯ ಲೆಜೆಂಡ್‌. ನಿಮ್ಮ ಹೇಳಿಕೆ ಅಸಹ್ಯ ಹುಟ್ಟಿಸುವಂತಿದೆ. ಪ್ರತೀ ಬಾರಿಯೂ ಕೊಹ್ಲಿ ವಿಫ‌ಲವಾದಾಗ ಅದಕ್ಕೆ ನಾನೇ ಕಾರಣ ಎಂಬಂತೆ ಮಾತನಾಡುವುದೇಕೋ ತಿಳಿಯದು. ಈ ಚಾಳಿ ಎಲ್ಲಿಗೆ ಕೊನೆಗೊಳ್ಳುತ್ತದೋ ನಾ ಕಾಣೆ. ದಯವಿಟ್ಟು ತಮ್ಮ ಹೇಳಿಕೆಯನ್ನು ವಿವರಿಸಿ ಹೇಳಬೇಕು…’ ಎಂದಿದ್ದಾರೆ.

ಗಾವಸ್ಕರ್‌ ಸ್ಪಷ್ಟನೆ
ಅನುಷ್ಕಾ ಅವರ ಹೇಳಿಕೆಗೆ ಸುನೀಲ್‌ ಗಾವಸ್ಕರ್‌ ಸ್ಪಷ್ಟನೆ ನೀಡಿದ್ದಾರೆ.ತನ್ನ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿದ್ದೇ ವಿವಾದಕ್ಕೆ ಕಾರಣ ಎಂದಿದ್ದಾರೆ.

“ನನ್ನ ಹೇಳಿಕೆಯನ್ನು ಮತ್ತೂಮ್ಮೆ ಕೇಳಿ. ನಾನು ಎಲ್ಲೂ ಅನುಷ್ಕಾ ಅವರನ್ನು ಬೈಯ್ದಿಲ್ಲ. ಲಾಕ್‌ಡೌನ್‌ ಅವಧಿಯಲ್ಲಿ ಕೊಹ್ಲಿ ಮನೆಯಲ್ಲೇ ಕ್ರಿಕೆಟ್‌ ಅಭ್ಯಾಸ ಮಾಡಿರಬೇಕು. ಆಗ ಅವರು ಕೇವಲ ಅನುಷ್ಕಾ ಅವರ ಬೌಲಿಂಗ್‌ ಅನ್ನು ಎದುರಿಸುತ್ತಾರೆ. ಬಹುಶಃ ಮನೆಯಲ್ಲಿ ಅವರು ಟೆನಿಸ್‌ ಬಾಲ್‌ನಿಂದ ಅಭ್ಯಾಸ ನಡೆಸಿರಬೇಕು. ಹಾಗಾಗಿ ವೃತ್ತಿಪರರ ಬೌಲಿಂಗ್‌ ಎದುರಿಸುವಾಗ ಅವರಿಗೆ ಸಮಸ್ಯೆಯಾಗುತ್ತಿದೆ ಎಂಬರ್ಥದಲ್ಲಿ ಹೇಳಿದ್ದೆ’ ಎಂಬುದಾಗಿ ಗಾವಸ್ಕರ್‌ ಸ್ಪಷ್ಟನೆ ನೀಡಿದ್ದಾರೆ.

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.