ಕೊಹ್ಲಿ ದಿಕ್ಕು ತಪ್ಪಿಸಲು ನಿವೃತ್ತಿ ತೊರೆದು ಬರುವರೇ ಆದಿಲ್‌ ರಶೀದ್


Team Udayavani, Jul 20, 2018, 6:20 AM IST

virat-kohli-adil-rashid.jpg

ಲಂಡನ್‌: ಇನ್ನು ಕೆಲವೇ ದಿನಗಳಲ್ಲಿ ಭಾರತ-ಇಂಗ್ಲೆಂಡ್‌ ನಡುವಿನ 5 ಪಂದ್ಯಗಳ ಮಹತ್ವದ ಟೆಸ್ಟ್‌ ಸರಣಿ ಆರಂಭವಾಗಲಿದೆ. ಈಗಾಗಲೇ ಮುಗಿದ ಟಿ20 ಸರಣಿಯನ್ನು ಭಾರತ, ಏಕದಿನ ಸರಣಿಯನ್ನು ಇಂಗ್ಲೆಂಡ್‌ ಗೆದ್ದಿವೆ. ಸಹಜ ವಾಗಿಯೇ ಟೆಸ್ಟ್‌ ಸರಣಿಯ ಕುತೂಹಲ ಗರಿ ಗೆದರಿದೆ.

ಭಾರತೀಯ ಕ್ರಿಕೆಟಿಗರ ಈಗಿನ ಫಾರ್ಮ್ ಪ್ರಕಾರ  ಕೊಹ್ಲಿ ಆತಿಥೇಯರ ಪಾಲಿಗೆ ಅತ್ಯಂತ ಅಪಾಯಕಾರಿಯಾಗಿ ಗೋಚರಿಸಿದ್ದಾರೆ. ಅದರಲ್ಲೂ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಕ್ರಮವಾಗಿ 75, 45 ಹಾಗೂ 71 ರನ್‌ ಬಾರಿಸಿ ಪ್ರಚಂಡ ಫಾರ್ಮ್ನ ಮುನ್ಸೂಚನೆ ನೀಡಿದ್ದಾರೆ. ಭಾರತೀಯ ಕಪ್ತಾನನನ್ನು ಕಟ್ಟಿಹಾಕಿದರೆ ಟೆಸ್ಟ್‌ ಸರಣಿಯಲ್ಲಿ ಮೇಲುಗೈ ಸಾಧಿಸಬಹುದು ಎಂಬುದು ಇಂಗ್ಲೆಂಡಿನ ಲೆಕ್ಕಾಚಾರ. ಹಾಗಾದರೆ ಅವರ ಮೇಲೆ ಯಾರನ್ನು “ಛೂ’ ಬಿಡಬೇಕು? ಈ ಚರ್ಚೆ ಈಗ ಇಂಗ್ಲೆಂಡ್‌ ಆಯ್ಕೆ ಸಮಿತಿಯಲ್ಲಿ ಬಹಳ ಜೋರಾಗಿಯೇ ನಡೆಯುತ್ತಿದೆ.

ಆಯ್ಕೆಗಾರರ ಸಂಪರ್ಕದಲ್ಲಿ ರಶೀದ್‌ 
ಏಕದಿನ ಸರಣಿಯಲ್ಲಿ ವಿರಾಟ್‌ ಕೊಹ್ಲಿಯನ್ನು ಕಾಡಿ ಸುದ್ದಿಯಾದವರೆಂದರೆ ಲೆಗ್‌ಬ್ರೇಕ್‌ ಬೌಲರ್‌ ಆದಿಲ್‌ ರಶೀದ್‌. ಇವರು 2 ಸಲ ಕೊಹ್ಲಿ ವಿಕೆಟ್‌ ಹಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಟೆಸ್ಟ್‌ ಸರಣಿಯಲ್ಲೂ ರಶೀದ್‌ ಅವರನ್ನು ಆಡಿಸಬಾರದೇಕೆ ಎಂದು ಇಸಿಬಿ ಯೋಚಿಸುತ್ತಿದೆ ಎಂಬುದಾಗಿ “ನ್ಪೋರ್ಟ್ಸ್ ಮೇಲ್‌’ ವರದಿ ಮಾಡಿದೆ. ಆಯ್ಕೆ ಸಮಿತಿ ಅಧ್ಯಕ್ಷ ಎಡ್‌ ಸ್ಮಿತ್‌ ಈಗಾಗಲೇ ರಶೀದ್‌ ಅವರನ್ನು ಸಂಪರ್ಕಿಸಿದ್ದಾಗಿಯೂ ವರದಿಯಲ್ಲಿ ಉಲ್ಲೇಖೀಸಲಾಗಿದೆ.

ರಶೀದ್‌ ಅವರನ್ನು ಆಯ್ಕೆ ಮಾಡಿದರಾಯಿತು, ಅದರಲ್ಲೇನಂತೆ ಎಂದು ಪ್ರಶ್ನಿಸ ಬಹುದು. ಇಲ್ಲೇ ಇರುವುದು ತೊಡಕು. ಆದಿಲ್‌ ರಶೀದ್‌ ಈಗಗಾಲೇ ಟೆಸ್ಟ್‌ ಸರಣಿಗೆ ವಿದಾಯ ಘೋಷಿಸಿಯಾಗಿದೆ. ಈ ನಿರ್ಧಾರವನ್ನು ಮರುಪರಿಶೀಲಿಸಿ ಟೆಸ್ಟ್‌ ಕ್ರಿಕೆಟಿಗೆ ವಾಪಸಾಗುವಂತೆ ರಶೀದ್‌ ಅವರ ಮನ ಒಲಿಸಲು ಸ್ಮಿತ್‌ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ರಶೀದ್‌ ನಿರ್ಧಾರದ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ.

2015ರಲ್ಲಿ ಪಾಕಿಸ್ಥಾನ ವಿರುದ್ಧ ಅಬುಧಾಬಿಯಲ್ಲಿ ಟೆಸ್ಟ್‌ ಪಾದಾರ್ಪಣೆ ಮಾಡಿದ ಆದಿಲ್‌ ರಶೀದ್‌, 2016ರ ಭಾರತ ಪ್ರವಾಸದ ವೇಳೆ ಚೆನ್ನೈಯಲ್ಲಿ ಕೊನೆಯ ಟೆಸ್ಟ್‌ ಆಡಿದ್ದರು. 10 ಟೆಸ್ಟ್‌ಗಳಲ್ಲಿ 38 ವಿಕೆಟ್‌ ಉರುಳಿಸಿದ್ದಾರೆ. 

ಟಾಪ್ ನ್ಯೂಸ್

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.